ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆ ದೊರಕಬೇಕು- ಸಿಎಂ ಸಿದ್ದರಾಮಯ್ಯ ಹೇಳಿಕೆ

ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ  ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2 ಸಾವಿರ ರೂ.ಗಳಿಗಿಂತ ಹೆಚ್ಚಿದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ ಎಂದರು.

ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ. 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಹಿಂದೆ ನಮ್ಮ ಸರ್ಕಾರವಿದ್ದಾಗ ಹಾಗೂ ಈಗಲೂ ಕೂಡ ಸಾಧ್ಯವಾದ ಮಟ್ಟಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿಕೊಡಬೇಕೆಂಬ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.

ಸಣ್ಣ ವಯಸ್ಸಿನವರಿಗೂ ಕಿಡ್ನಿ ಸಮಸ್ಯೆ ಬರುತ್ತದೆ. ಅದಕ್ಕಾಗಿ ಸರ್ಕಾರ ಎಷ್ಟು ಸಾಧ್ಯವೋ ಅಷ್ಟು ಜನರಿಗೆ ಡಯಾಲಿಸಿಸ್  ಮಾಡಿಸುವ ಕೆಲಸ ಮಾಡುತ್ತಿದೆ. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಈ ಸೇವೆ ದೊರಕಬೇಕು. ಜನರಿಗೆ ಹತ್ತಿರದಲ್ಲಿಯೇ ಈ ಸೇವೆ ಪಡೆಯಬಹುದು ಎಂದು ತಿಳಿಸಿದರು.

ಏಕಬಳಕೆ ಮಾಡುವ ಡಯಾಲೈಸರ್ ಗಳನ್ನು ಪರಿಚಯಿಸಲಾಗಿದೆ. ಇದರಿಂದ ಸೋಂಕು ಕಡಿಮೆ ಮಾಡಬಹುದಾಗಿದೆ. ಡಯಾಲಿಸಿಸ್ ಕೇಂದ್ರಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂಅನುದಾನ ಒದಗಿಸಿಕೊಟ್ಟಿದೆ. ರಾಜ್ಯ ಸರ್ಕಾರ ಶೇ.60 ಹಾಗೂ ಕೇಂದ್ರ ಸರ್ಕಾರ ಶೇ.40 ರಷ್ಟು ಅನುದಾನ ನೀಡಲಿದೆ. ಆದರೆ ಹೆಸರು ಮಾತ್ರ ಪ್ರಧಾನಮಂತ್ರಿ ಡಯಾಲಿಸಿಸ್ ಎಂದಿದೆ. ಹೆಚ್ಚಾಗಿ ಅನುದಾನ ಒದಗಿಸುವುದು ರಾಜ್ಯ ಸರ್ಕಾರ ಎಂದರು.

ಸಮಾಜದಲ್ಲಿ ಅಸಮಾನತೆ ಇದ್ದು ಬಹಳ ಜನ ಕಷ್ಟದಲ್ಲಿ ಕೈತೊಳೆಯುವ ಪರಿಸ್ಥಿತಿ ಇದೆ. ಅಸಮಾನತೆ ಹೋಗಲಾಡಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಅಸಮಾನತೆ ಹೋಗಲಾಡಿಸಲು 5 ಗ್ಯಾರಂಟಿ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸಲಿವೆ. ಶಕ್ತಿ ಯೋಜನೆಯಡಿ ಮಹಿಳೆಯರು 141 ಕೋಟಿ ಬಾರಿ ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ ಎಂದು ಹೇಳಿದರು.

1.18 ಕೋಟಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ, 5 ಕೆಜಿ ಅಕ್ಕಿಗೆ 170 ರೂಪಾಯಿ, ಪ್ರತಿ ತಿಂಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಯುವನಿಧಿ ಕಾರ್ಯಕ್ರಮ ನಿರುದ್ಯೋಗಿ ಯುವಕರಿಗೆ ಜಾರಿಯಾಗಿದೆ. ಜನರ ಕೊಳ್ಳುವ ಶಕ್ತಿ ಹೆಚ್ಚು ಮಾಡಲು ಈ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ ಎಂದರು.

ಡಯಾಲಿಸಿಸ್ ಸೇವೆಯನ್ನು ಹೆಚ್ಚು ಮಾಡುವ ಕೆಲಸ ಮಾಡುತ್ತೇವೆ. ಆರೋಗ್ಯ ಇಲಾಖೆಯನ್ನು ಸಚಿವ ದಿನೇಶ್ ಗುಂಡೂರಾವ್ ಸುಧಾರಣೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಆಗಬೇಕು, ಶವಾಗಾರ, ಅಡುಗೆ ಮನೆ, ಜೈವಿಕ ತ್ಯಾಜ್ಯ ಕೊಠಡಿ, ಮೂಲಭೂತ ಸೌಕರ್ಯಗಳನ್ನು 150 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಇದನ್ನು ಸಚಿವ ಸಂಪುದಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP)ನಾಯಕರಾಗಿ ಡಿ.ಕೆ. ಶಿವಕುಮಾರ್ ಆಯ್ಕೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕ ರಾಜ್ಯದಲ್ಲಿ ನೂತನ ಸರ್ಕಾರ ರಚನೆಗೆ ಚಟುವಟಿಕೆಗಳು ವೇಗ ಪಡೆದಿದ್ದು, ಕೆಪಿಸಿಸಿ…

38 minutes ago

ಕೆ.ಎಚ್ ಮುನಿಯಪ್ಪನವರ ಅನುಭವಕ್ಕೆ ನ್ಯಾಯ ಸಿಗಲಿ: ಉಪಮುಖ್ಯಮಂತ್ರಿಯನ್ನಾಗಿ ನೇಮಿಸಲು ಆಗ್ರಹ

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಯ ಬೆನ್ನಲ್ಲೇ ಬದಲಾವಣೆಗೆ ಕ್ಷಣಗಣನೆ ಆರಂಭವಾಗಿದ್ದು ಇದರ ಜೊತೆಗೆ ಸಚಿವ ಸಂಪುಟ ಪುನರ್ ರಚನೆಯೂ…

2 hours ago

ಭಾರತದ ಉತ್ತರ ಮತ್ತು ದಕ್ಷಿಣ ಧ್ರುವ ಪ್ರವಾಸದ ನೆನಪುಗಳು…..

ಕಾಶ್ಮೀರ ಮತ್ತು ಕನ್ಯಾಕುಮಾರಿ...... ಭಾರತದ ಉತ್ತರ ಮತ್ತು ದಕ್ಷಿಣ ಧ್ರುವ ಪ್ರವಾಸದ ನೆನಪುಗಳು..... ಕನ್ಯಾಕುಮಾರಿ, ಧ್ಯಾನ, ಸ್ವಾಮಿ ವಿವೇಕಾನಂದ, ಕಾಶ್ಮೀರ,…

11 hours ago

ಶ್ರೀ ಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಎಣಿಕೆ: 79,72,502 ಕಾಣಿಕೆ ಸಂಗ್ರಹ

ದೊಡ್ಡಬಳ್ಳಾಪುರ ತಾಲೂಕಿನ ನಾಗಾರಾಧನೆಗೆ ಪ್ರಸಿದ್ಧಿ ಪಡೆದಿರುವ ಶ್ರೀ ಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ‌…

1 day ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅಂಗೀಕಾರ: ಸಚಿವ ಸಂಪುಟವನ್ನೂ ತಕ್ಷಣ ಜಾರಿಗೆ ಬರುವಂತೆ ವಿಸರ್ಜನೆ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ.‌‌ ಜೊತೆಗೆ ಸಿದ್ದರಾಮಯ್ಯ…

1 day ago

ಸಿದ್ದರಾಮಯ್ಯ 8 ವರ್ಷಗಳು, ನರೇಂದ್ರ ಮೋದಿ 12 ವರ್ಷಗಳು…..

ಸಿದ್ದರಾಮಯ್ಯ 8 ವರ್ಷಗಳು, ನರೇಂದ್ರ ಮೋದಿ 12 ವರ್ಷಗಳು,.. ಕರ್ನಾಟಕ ಮತ್ತು ಭಾರತದ ಈ 25 ವರ್ಷಗಳಲ್ಲಿ ಆಗಿದ್ದೇನು...... 2000/2025......…

2 days ago