ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆ ದೊರಕಬೇಕು- ಸಿಎಂ ಸಿದ್ದರಾಮಯ್ಯ ಹೇಳಿಕೆ

ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ  ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2 ಸಾವಿರ ರೂ.ಗಳಿಗಿಂತ ಹೆಚ್ಚಿದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ ಎಂದರು.

ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ. 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಹಿಂದೆ ನಮ್ಮ ಸರ್ಕಾರವಿದ್ದಾಗ ಹಾಗೂ ಈಗಲೂ ಕೂಡ ಸಾಧ್ಯವಾದ ಮಟ್ಟಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿಕೊಡಬೇಕೆಂಬ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.

ಸಣ್ಣ ವಯಸ್ಸಿನವರಿಗೂ ಕಿಡ್ನಿ ಸಮಸ್ಯೆ ಬರುತ್ತದೆ. ಅದಕ್ಕಾಗಿ ಸರ್ಕಾರ ಎಷ್ಟು ಸಾಧ್ಯವೋ ಅಷ್ಟು ಜನರಿಗೆ ಡಯಾಲಿಸಿಸ್  ಮಾಡಿಸುವ ಕೆಲಸ ಮಾಡುತ್ತಿದೆ. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಈ ಸೇವೆ ದೊರಕಬೇಕು. ಜನರಿಗೆ ಹತ್ತಿರದಲ್ಲಿಯೇ ಈ ಸೇವೆ ಪಡೆಯಬಹುದು ಎಂದು ತಿಳಿಸಿದರು.

ಏಕಬಳಕೆ ಮಾಡುವ ಡಯಾಲೈಸರ್ ಗಳನ್ನು ಪರಿಚಯಿಸಲಾಗಿದೆ. ಇದರಿಂದ ಸೋಂಕು ಕಡಿಮೆ ಮಾಡಬಹುದಾಗಿದೆ. ಡಯಾಲಿಸಿಸ್ ಕೇಂದ್ರಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂಅನುದಾನ ಒದಗಿಸಿಕೊಟ್ಟಿದೆ. ರಾಜ್ಯ ಸರ್ಕಾರ ಶೇ.60 ಹಾಗೂ ಕೇಂದ್ರ ಸರ್ಕಾರ ಶೇ.40 ರಷ್ಟು ಅನುದಾನ ನೀಡಲಿದೆ. ಆದರೆ ಹೆಸರು ಮಾತ್ರ ಪ್ರಧಾನಮಂತ್ರಿ ಡಯಾಲಿಸಿಸ್ ಎಂದಿದೆ. ಹೆಚ್ಚಾಗಿ ಅನುದಾನ ಒದಗಿಸುವುದು ರಾಜ್ಯ ಸರ್ಕಾರ ಎಂದರು.

ಸಮಾಜದಲ್ಲಿ ಅಸಮಾನತೆ ಇದ್ದು ಬಹಳ ಜನ ಕಷ್ಟದಲ್ಲಿ ಕೈತೊಳೆಯುವ ಪರಿಸ್ಥಿತಿ ಇದೆ. ಅಸಮಾನತೆ ಹೋಗಲಾಡಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಅಸಮಾನತೆ ಹೋಗಲಾಡಿಸಲು 5 ಗ್ಯಾರಂಟಿ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸಲಿವೆ. ಶಕ್ತಿ ಯೋಜನೆಯಡಿ ಮಹಿಳೆಯರು 141 ಕೋಟಿ ಬಾರಿ ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ ಎಂದು ಹೇಳಿದರು.

1.18 ಕೋಟಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ, 5 ಕೆಜಿ ಅಕ್ಕಿಗೆ 170 ರೂಪಾಯಿ, ಪ್ರತಿ ತಿಂಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಯುವನಿಧಿ ಕಾರ್ಯಕ್ರಮ ನಿರುದ್ಯೋಗಿ ಯುವಕರಿಗೆ ಜಾರಿಯಾಗಿದೆ. ಜನರ ಕೊಳ್ಳುವ ಶಕ್ತಿ ಹೆಚ್ಚು ಮಾಡಲು ಈ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ ಎಂದರು.

ಡಯಾಲಿಸಿಸ್ ಸೇವೆಯನ್ನು ಹೆಚ್ಚು ಮಾಡುವ ಕೆಲಸ ಮಾಡುತ್ತೇವೆ. ಆರೋಗ್ಯ ಇಲಾಖೆಯನ್ನು ಸಚಿವ ದಿನೇಶ್ ಗುಂಡೂರಾವ್ ಸುಧಾರಣೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಆಗಬೇಕು, ಶವಾಗಾರ, ಅಡುಗೆ ಮನೆ, ಜೈವಿಕ ತ್ಯಾಜ್ಯ ಕೊಠಡಿ, ಮೂಲಭೂತ ಸೌಕರ್ಯಗಳನ್ನು 150 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಇದನ್ನು ಸಚಿವ ಸಂಪುದಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

59 minutes ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

5 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

14 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

21 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

22 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago