ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ- ಅಪರ ಜಿಲ್ಲಾಧಿಕಾರಿ ಸುಮಾ

2024-25 ನೇ ಸಾಲಿನ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ‌ ದಸರಾ ಕ್ರೀಡಾ ಕೂಟವನ್ನು ಮಹಿಳೆ ಹಾಗೂ ಪುರುಷರಿಗೆ ನಡಸಲಾಗುತ್ತಿದ್ದು, ಕ್ರೀಡಾ ಕೂಟವನ್ನು ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಸುಮಾ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

2024-25 ನೇ ಸಾಲಿನ ತಾಲ್ಲೂಕು, ಜಿಲ್ಲಾ ಮತ್ತು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಆಯೋಜನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದ್ದು,

ಈ ಕ್ರೀಡಾಕೂಟವು ಸೆಪ್ಟೆಂಬರ್ 27 ಮತ್ತು 28 ಎರಡು ದಿನಗಳ ಕಾಲ ನಡೆಯಲಿದೆ‌‌. ಸಮಾರಂಭದ ಉದ್ಘಾಟನೆಯನ್ನು ಶಿಷ್ಠಾಚಾರದಂತೆ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳನ್ನು ಆಹ್ವಾನಿಸಿ ಉದ್ಘಾಟಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲದಲ್ಲಿ ತಾಲ್ಲೂಕು ಮಟ್ಟದಲ್ಲಿ ದಸರಾ ಕ್ರೀಡಾಕೂಟ ನಡೆಯಲಿದ್ದು, ಸೆಪ್ಟೆಂಬರ್ 25 ರಂದು ದೇವನಹಳ್ಳಿ (ಟೌನ್ ಕ್ರೀಡಾಂಗಣ), ದೊಡ್ಡಬಳ್ಳಾಪುರ (ಭಗತ್ ಸಿಂಗ್ ಕ್ರೀಡಾಂಗಣ) ಹಾಗೂ ಹೊಸಕೋಟೆ (ಚನ್ನಬೈರೇಗೌಡ ಕ್ರೀಡಾಂಗಣ) ದಲ್ಲಿ ಏಕಕಾಲದಲ್ಲಿ ಚಾಲನೆಗೊಳ್ಳಲಿದೆ. ಸೆಪ್ಟೆಂಬರ್ 24 ರಂದು ನೆಲಮಂಗಲ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ ನಡೆಯಲಿದೆ‌ ಎಂದು ತಿಳಿಸಿದರು.

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸಂಘಟನೆಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೈಹಿಕ ಶಿಕ್ಷಕರ ಸೇವೆ ಆಯೋಜನೆ, ಆರೋಗ್ಯ ಇಲಾಖೆ ವತಿಯಿಂದ ಆ್ಯಂಬುಲೆನ್ಸ್ ಮತ್ತು ವೈದ್ಯರ ವ್ಯವಸ್ಥೆ, ಜಿಲ್ಲಾ, ತಾಲ್ಲೂಕು ಹಾಗೂ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕ್ರಮ ವಹಿಸಿ ಸಮಾರಂಭದಲ್ಲಿ ಕುಡಿಯುವ ನೀರು, ಉಟೋಪಹಾರ ಕಲ್ಪಿಸಲು ಸಂಬಂಧಿಸಿದ‌ ಅಧಿಕಾರಿಗಳಿಗೆ‌ ಸೂಚಿಸಿದರು.

ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಟಿ.ಜಯಲಕ್ಷ್ಮಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕರಾದ ರಮೇಶ್ ಸೇರಿದಂತೆ ಜಿಲ್ಲಾ‌ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…

ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…

7 hours ago

ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…

8 hours ago

ಸ್ನೇಹಿತರ ದಿನದ ಅಂಗವಾಗಿ ನಂದಿಬೆಟ್ಟಕ್ಕೆ ತೆರಳಿದ್ದ ಸ್ನೇಹಿತರು: ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತ: ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ

ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…

17 hours ago

ಭೂಗಳ್ಳರಿಂದ 8 ಎಕರೆ ಜಮೀನು ರಕ್ಷಣೆ: ಆಶ್ರಯ ಯೋಜನೆಗೆ ಭೂಮಿ ಮಂಜೂರು: ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…

1 day ago

ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಪ್ರಕರಣ: ಸಿಎಂ ಸಿದ್ದರಾಮಯ್ಯ ಏನಂದ್ರು…?

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…

1 day ago

ಹೋರಾಟ ಮತ್ತು ಹೋರಾಟಗಾರರು……

ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…

2 days ago