ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ- ಅಪರ ಜಿಲ್ಲಾಧಿಕಾರಿ ಸುಮಾ

2024-25 ನೇ ಸಾಲಿನ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ‌ ದಸರಾ ಕ್ರೀಡಾ ಕೂಟವನ್ನು ಮಹಿಳೆ ಹಾಗೂ ಪುರುಷರಿಗೆ ನಡಸಲಾಗುತ್ತಿದ್ದು, ಕ್ರೀಡಾ ಕೂಟವನ್ನು ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಸುಮಾ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

2024-25 ನೇ ಸಾಲಿನ ತಾಲ್ಲೂಕು, ಜಿಲ್ಲಾ ಮತ್ತು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಆಯೋಜನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದ್ದು,

ಈ ಕ್ರೀಡಾಕೂಟವು ಸೆಪ್ಟೆಂಬರ್ 27 ಮತ್ತು 28 ಎರಡು ದಿನಗಳ ಕಾಲ ನಡೆಯಲಿದೆ‌‌. ಸಮಾರಂಭದ ಉದ್ಘಾಟನೆಯನ್ನು ಶಿಷ್ಠಾಚಾರದಂತೆ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳನ್ನು ಆಹ್ವಾನಿಸಿ ಉದ್ಘಾಟಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲದಲ್ಲಿ ತಾಲ್ಲೂಕು ಮಟ್ಟದಲ್ಲಿ ದಸರಾ ಕ್ರೀಡಾಕೂಟ ನಡೆಯಲಿದ್ದು, ಸೆಪ್ಟೆಂಬರ್ 25 ರಂದು ದೇವನಹಳ್ಳಿ (ಟೌನ್ ಕ್ರೀಡಾಂಗಣ), ದೊಡ್ಡಬಳ್ಳಾಪುರ (ಭಗತ್ ಸಿಂಗ್ ಕ್ರೀಡಾಂಗಣ) ಹಾಗೂ ಹೊಸಕೋಟೆ (ಚನ್ನಬೈರೇಗೌಡ ಕ್ರೀಡಾಂಗಣ) ದಲ್ಲಿ ಏಕಕಾಲದಲ್ಲಿ ಚಾಲನೆಗೊಳ್ಳಲಿದೆ. ಸೆಪ್ಟೆಂಬರ್ 24 ರಂದು ನೆಲಮಂಗಲ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ ನಡೆಯಲಿದೆ‌ ಎಂದು ತಿಳಿಸಿದರು.

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸಂಘಟನೆಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೈಹಿಕ ಶಿಕ್ಷಕರ ಸೇವೆ ಆಯೋಜನೆ, ಆರೋಗ್ಯ ಇಲಾಖೆ ವತಿಯಿಂದ ಆ್ಯಂಬುಲೆನ್ಸ್ ಮತ್ತು ವೈದ್ಯರ ವ್ಯವಸ್ಥೆ, ಜಿಲ್ಲಾ, ತಾಲ್ಲೂಕು ಹಾಗೂ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕ್ರಮ ವಹಿಸಿ ಸಮಾರಂಭದಲ್ಲಿ ಕುಡಿಯುವ ನೀರು, ಉಟೋಪಹಾರ ಕಲ್ಪಿಸಲು ಸಂಬಂಧಿಸಿದ‌ ಅಧಿಕಾರಿಗಳಿಗೆ‌ ಸೂಚಿಸಿದರು.

ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಟಿ.ಜಯಲಕ್ಷ್ಮಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕರಾದ ರಮೇಶ್ ಸೇರಿದಂತೆ ಜಿಲ್ಲಾ‌ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

8 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

9 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

10 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

11 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

18 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago