Categories: ತುಮಕೂರು

ಜಿಲ್ಲೆಯಲ್ಲಿರುವ ಸಮಸ್ಯೆ ಬಗೆಹರಿಸಲು ಶ್ರಮಿಸುವೆ- ಉಸ್ತುವಾರಿ ಸಚಿವ ಡಾ.ಜಿ‌.ಪರಮೇಶ್ವರ್

ಮೂರನೇ ಬಾರಿ‌ ತುಮಕೂರು ಜಿಲ್ಲಾ‌ ಉಸ್ತುವಾರಿ ವಹಿಸಿಕೊಂಡಿದ್ದೇ‌ನೆ. ಜಿಲ್ಲೆಯ ಅಭಿವೃದ್ಧಿ, ಶಾಂತಿ ಕಾಪಾಡುವ ಜವಾಬ್ಧಾರಿ ಉಸ್ತುವಾರಿಗಳಿಗಿರುತ್ತದೆ. ಪ್ರತಿ ಜಿಲ್ಲೆಯಲ್ಲೂ ಒಂದೊಂದು‌ ಸಮಸ್ಯೆ‌ ಇರುತ್ತದೆ. ಮಳೆ, ಪ್ರವಾಹದಿಂದ ಬೆಳೆ‌ ಹಾನಿಯಾಗುತ್ತದೆ. ಕೆಲ ಜಿಲ್ಲೆಗಳಲ್ಲಿ ಮಳೆಯಾಗದೆ ನೀರಿನ‌ ಸಮಸ್ಯೆ ಇರುತ್ತದೆ. ಜಿಲ್ಲೆಯ ಸಮಸ್ಯೆಗಳಿಗೆ ತಕ್ಕಂತೆ ಸಚಿವರುಗಳು ಕ್ರಮ‌ಕೈಗೊಳ್ಳ‌ಬೇಕು ಎಂದು ತುಮಕೂರಿನಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ನಮ್ಮ‌ ಜಿಲ್ಲೆಯ ಮಧುಗಿರಿ ಪಾವಗಡ ಕೊರಟಗೆರೆ, ಶಿರಾದಲ್ಲಿ‌ ಮಳೆ ಕಡಿಮೆ ಇದ್ದು ಬರ ಹೆಚ್ಚಾಗಿರುತ್ತದೆ. ಕುಣಿಗಲ್, ಗುಬ್ಬಿ ,ತಿಪಟೂರಿನಲ್ಲಿ ಒಳ್ಳೆ ಮಳೆಯಾಗುತ್ತದೆ. ರೈತರಿಗೆ ಬೇಕಾದ ಗೊಬ್ಬರ, ಬಿತ್ತನೆ ಬೀಜವನ್ನು ಸಮರ್ಪಕವಾಗಿ ಸರಬರಾಜು ಮಾಡಬೇಕೆಂದು ಸಿಎಂ ಕ್ರಮ ಕೈಗೊಂಡಿದ್ದಾರೆ‌ ಜಿಲ್ಲೆಯಲ್ಲಿ ಕೊಬ್ಬರಿ ಬೆಲೆ ಇಳಿಕೆಯಿಂದ ರೈತರಿಗೆ ಸಮಸ್ಯೆಯಾಗಿದೆ ಎಂದರು.

ಸರ್ಕಾರಿ ಕಚೇರಿಗಳಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಆಚರಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದನ್ನು ಮುಂದಿನ‌ ದಿನಗಳಲ್ಲಿ ನೋಡೋಣ. ಯಾವುದನ್ನು ಮಾಡಬಾರದು, ಯಾವುದನ್ನು ಮಾಡಬೇಕು ಎಂಬುದರ ಬಗ್ಗೆ ಸರ್ಕಾರದಲ್ಲಿ ನಿಯಮಗಳಿವೆ ಅವುಗಳ ಮೂಲಕ ಮಾಡಲಾಗುತ್ತದೆ ಎಂದರು.

ಸರ್ಕಾರದಲ್ಲಿ ಬ್ಲೂಬುಕ್ ಇದೆ, ಅದರಲ್ಲಿ ಏನಿರುತ್ತೊ ಅದೇ ಆಗಬೇಕು. ಸಚಿವರಾಗಿದ್ದೇನೆ ಎಂದು ನಾವು ವೈಯಕ್ತಿಕವಾಗಿ ಪ್ರತ್ಯೇಕ ಕಾನೂನು ಮಾಡಲು ಬರಲ್ಲ. ಗೃಹ ಇಲಾಖೆಯಲ್ಲಿ ನಾನೊಂದು ಕಾನೂನು ಮಾಡಲು ಬರಲ್ಲ. ಇನ್ನೊಬ್ಬರು ಇನ್ನೊಂದು ಮಾಡಲು ಬರಲ್ಲ. ಕುಂಕುಮ, ವಿಭೂತಿ, ಇಟ್ಟುಕೊಳ್ಳಬಾರದು ಎಂದು ಹೇಳಿದ್ದೇನೆಂದು ವೈರಲ್ ಮಾಡಿದ್ದಾರೆ. ಅದನ್ನು ನಾನು ಹೇಳಿಯೇ ಇಲ್ಲ. ನನಗೆ ಪ್ರಜ್ಞೆಯಿದೆ, ನಾನು ಮೂರು ಬಾರಿ ಗೃಹ ಸಚಿವರಾಗಿ ಅಧಿಕಾರವಹಿಸಿಕೊಂಡಿದ್ದೇನೆ. ಪೊಲೀಸ್ ಇಲಾಖೆಯಲ್ಲಿ ಮಾನ್ಯೂಯಲ್ ಇದೆ. ಅದನ್ನು ಬಿಟ್ಟು ಬೇರೆ ಮಾಡಲು ಬರೊದಿಲ್ಲ ಎಂದು ಹೇಳಿದರು.

ಹಿರಿಯ ಅಧಿಕಾರಿಗಳು ಮಾನ್ಯೂಯಲ್ ಅನುಷ್ಟಾನ ಮಾಡುತ್ತಾರೆ. ನಾನು ಗೃಹ ಸಚಿವನಾಗಿದ್ದಾಗ ಒಂದು ಕಾನೂನು ಮಾಡಲು ಹೋಗುವುದು, ಇನ್ನೊಬ್ಬರು ಇನ್ನೊಂದು ಕಾನೂನು ಮಾಡಲು ಅವಕಾಶವಿಲ್ಲ.‌ ಯಾರು ವೈರಲ್ ಮಾಡಿದ್ದಾರೋ ಅವರನ್ನು ಹುಡುಕುತ್ತಿದ್ದೇವೆ. ಇಂತಹವನ್ನೆಲ್ಲಾ ಸುಮ್ಮನೆ ಬಿಡೊಕ್ಕೆ ಆಗಲ್ಲ. ಸುಳ್ಳು ಸುದ್ದಿಗಳನ್ನು ಮಾಡಬಾರದು, ರಾಜ್ಯದಲ್ಲಿ ಶಾಂತಿ ಹಾಳಾಗುತ್ತದೆ, ಪ್ರಚೋದನೆಯಾಗುತ್ತದೆ. ರಾಜ್ಯದಲ್ಲಿ‌ ಕೋಮು ಪ್ರೇರಿತ ಗಲಾಟೆಗಳು ಆಗಬಾರದು ಎಂಬುದು ನಮ್ಮ ನಿರೀಕ್ಷೆ- ಅಪೇಕ್ಷೆ ಎಂದರು.

ನಮ್ಮ ಪ್ರಣಾಳಿಕೆ ಶೀರ್ಷಿಕೆಯಲ್ಲೇ ಸರ್ವ ಜನಾಂಗದ ಶಾಂತಿಯ ತೋಟ ಮಾಡ್ತಿವಿ ಅಂತಾ ಹೇಳಿದ್ದೇವೆ. ಎಲ್ಲಾರೂ ಶಾಂತಿಯಿಂದ ಬಾಳೋಣ ಅನ್ನೊದು ನಮ್ಮ‌ ಅಪೇಕ್ಷೆ ಎಂದರು.

ಕಾಂಗ್ರೆಸ್ ಸರ್ಕಾರದಲ್ಲಿ ವರ್ಗವಣೆ ದಂಧೆ ಶುರುವಾಗಿದೆ,‌ ನಾವು ಪೇ ಸಿ.ಎಂ‌ ಪೋಸ್ಟರ್ ಅಂಟಿಸುತ್ತೆವೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರಿಗೇನಾದರೂ ಅಂತಹದ್ದು ಮಾಹಿತಿ ಇದ್ರೆ ಅಂಟಿಸಲಿ. ಪಾಪಾ..ಅವರಿಗೆ ಯಾಕೆ ಬ್ಯಾಡಾ ಅನ್ನಲಿ ಎಂದು ವ್ಯಂಗ್ಯವಾಡಿದರು.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

9 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

10 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

10 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

10 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

12 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

14 hours ago