Categories: ತುಮಕೂರು

ಜಿಲ್ಲೆಯಲ್ಲಿರುವ ಸಮಸ್ಯೆ ಬಗೆಹರಿಸಲು ಶ್ರಮಿಸುವೆ- ಉಸ್ತುವಾರಿ ಸಚಿವ ಡಾ.ಜಿ‌.ಪರಮೇಶ್ವರ್

ಮೂರನೇ ಬಾರಿ‌ ತುಮಕೂರು ಜಿಲ್ಲಾ‌ ಉಸ್ತುವಾರಿ ವಹಿಸಿಕೊಂಡಿದ್ದೇ‌ನೆ. ಜಿಲ್ಲೆಯ ಅಭಿವೃದ್ಧಿ, ಶಾಂತಿ ಕಾಪಾಡುವ ಜವಾಬ್ಧಾರಿ ಉಸ್ತುವಾರಿಗಳಿಗಿರುತ್ತದೆ. ಪ್ರತಿ ಜಿಲ್ಲೆಯಲ್ಲೂ ಒಂದೊಂದು‌ ಸಮಸ್ಯೆ‌ ಇರುತ್ತದೆ. ಮಳೆ, ಪ್ರವಾಹದಿಂದ ಬೆಳೆ‌ ಹಾನಿಯಾಗುತ್ತದೆ. ಕೆಲ ಜಿಲ್ಲೆಗಳಲ್ಲಿ ಮಳೆಯಾಗದೆ ನೀರಿನ‌ ಸಮಸ್ಯೆ ಇರುತ್ತದೆ. ಜಿಲ್ಲೆಯ ಸಮಸ್ಯೆಗಳಿಗೆ ತಕ್ಕಂತೆ ಸಚಿವರುಗಳು ಕ್ರಮ‌ಕೈಗೊಳ್ಳ‌ಬೇಕು ಎಂದು ತುಮಕೂರಿನಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ನಮ್ಮ‌ ಜಿಲ್ಲೆಯ ಮಧುಗಿರಿ ಪಾವಗಡ ಕೊರಟಗೆರೆ, ಶಿರಾದಲ್ಲಿ‌ ಮಳೆ ಕಡಿಮೆ ಇದ್ದು ಬರ ಹೆಚ್ಚಾಗಿರುತ್ತದೆ. ಕುಣಿಗಲ್, ಗುಬ್ಬಿ ,ತಿಪಟೂರಿನಲ್ಲಿ ಒಳ್ಳೆ ಮಳೆಯಾಗುತ್ತದೆ. ರೈತರಿಗೆ ಬೇಕಾದ ಗೊಬ್ಬರ, ಬಿತ್ತನೆ ಬೀಜವನ್ನು ಸಮರ್ಪಕವಾಗಿ ಸರಬರಾಜು ಮಾಡಬೇಕೆಂದು ಸಿಎಂ ಕ್ರಮ ಕೈಗೊಂಡಿದ್ದಾರೆ‌ ಜಿಲ್ಲೆಯಲ್ಲಿ ಕೊಬ್ಬರಿ ಬೆಲೆ ಇಳಿಕೆಯಿಂದ ರೈತರಿಗೆ ಸಮಸ್ಯೆಯಾಗಿದೆ ಎಂದರು.

ಸರ್ಕಾರಿ ಕಚೇರಿಗಳಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಆಚರಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದನ್ನು ಮುಂದಿನ‌ ದಿನಗಳಲ್ಲಿ ನೋಡೋಣ. ಯಾವುದನ್ನು ಮಾಡಬಾರದು, ಯಾವುದನ್ನು ಮಾಡಬೇಕು ಎಂಬುದರ ಬಗ್ಗೆ ಸರ್ಕಾರದಲ್ಲಿ ನಿಯಮಗಳಿವೆ ಅವುಗಳ ಮೂಲಕ ಮಾಡಲಾಗುತ್ತದೆ ಎಂದರು.

ಸರ್ಕಾರದಲ್ಲಿ ಬ್ಲೂಬುಕ್ ಇದೆ, ಅದರಲ್ಲಿ ಏನಿರುತ್ತೊ ಅದೇ ಆಗಬೇಕು. ಸಚಿವರಾಗಿದ್ದೇನೆ ಎಂದು ನಾವು ವೈಯಕ್ತಿಕವಾಗಿ ಪ್ರತ್ಯೇಕ ಕಾನೂನು ಮಾಡಲು ಬರಲ್ಲ. ಗೃಹ ಇಲಾಖೆಯಲ್ಲಿ ನಾನೊಂದು ಕಾನೂನು ಮಾಡಲು ಬರಲ್ಲ. ಇನ್ನೊಬ್ಬರು ಇನ್ನೊಂದು ಮಾಡಲು ಬರಲ್ಲ. ಕುಂಕುಮ, ವಿಭೂತಿ, ಇಟ್ಟುಕೊಳ್ಳಬಾರದು ಎಂದು ಹೇಳಿದ್ದೇನೆಂದು ವೈರಲ್ ಮಾಡಿದ್ದಾರೆ. ಅದನ್ನು ನಾನು ಹೇಳಿಯೇ ಇಲ್ಲ. ನನಗೆ ಪ್ರಜ್ಞೆಯಿದೆ, ನಾನು ಮೂರು ಬಾರಿ ಗೃಹ ಸಚಿವರಾಗಿ ಅಧಿಕಾರವಹಿಸಿಕೊಂಡಿದ್ದೇನೆ. ಪೊಲೀಸ್ ಇಲಾಖೆಯಲ್ಲಿ ಮಾನ್ಯೂಯಲ್ ಇದೆ. ಅದನ್ನು ಬಿಟ್ಟು ಬೇರೆ ಮಾಡಲು ಬರೊದಿಲ್ಲ ಎಂದು ಹೇಳಿದರು.

ಹಿರಿಯ ಅಧಿಕಾರಿಗಳು ಮಾನ್ಯೂಯಲ್ ಅನುಷ್ಟಾನ ಮಾಡುತ್ತಾರೆ. ನಾನು ಗೃಹ ಸಚಿವನಾಗಿದ್ದಾಗ ಒಂದು ಕಾನೂನು ಮಾಡಲು ಹೋಗುವುದು, ಇನ್ನೊಬ್ಬರು ಇನ್ನೊಂದು ಕಾನೂನು ಮಾಡಲು ಅವಕಾಶವಿಲ್ಲ.‌ ಯಾರು ವೈರಲ್ ಮಾಡಿದ್ದಾರೋ ಅವರನ್ನು ಹುಡುಕುತ್ತಿದ್ದೇವೆ. ಇಂತಹವನ್ನೆಲ್ಲಾ ಸುಮ್ಮನೆ ಬಿಡೊಕ್ಕೆ ಆಗಲ್ಲ. ಸುಳ್ಳು ಸುದ್ದಿಗಳನ್ನು ಮಾಡಬಾರದು, ರಾಜ್ಯದಲ್ಲಿ ಶಾಂತಿ ಹಾಳಾಗುತ್ತದೆ, ಪ್ರಚೋದನೆಯಾಗುತ್ತದೆ. ರಾಜ್ಯದಲ್ಲಿ‌ ಕೋಮು ಪ್ರೇರಿತ ಗಲಾಟೆಗಳು ಆಗಬಾರದು ಎಂಬುದು ನಮ್ಮ ನಿರೀಕ್ಷೆ- ಅಪೇಕ್ಷೆ ಎಂದರು.

ನಮ್ಮ ಪ್ರಣಾಳಿಕೆ ಶೀರ್ಷಿಕೆಯಲ್ಲೇ ಸರ್ವ ಜನಾಂಗದ ಶಾಂತಿಯ ತೋಟ ಮಾಡ್ತಿವಿ ಅಂತಾ ಹೇಳಿದ್ದೇವೆ. ಎಲ್ಲಾರೂ ಶಾಂತಿಯಿಂದ ಬಾಳೋಣ ಅನ್ನೊದು ನಮ್ಮ‌ ಅಪೇಕ್ಷೆ ಎಂದರು.

ಕಾಂಗ್ರೆಸ್ ಸರ್ಕಾರದಲ್ಲಿ ವರ್ಗವಣೆ ದಂಧೆ ಶುರುವಾಗಿದೆ,‌ ನಾವು ಪೇ ಸಿ.ಎಂ‌ ಪೋಸ್ಟರ್ ಅಂಟಿಸುತ್ತೆವೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರಿಗೇನಾದರೂ ಅಂತಹದ್ದು ಮಾಹಿತಿ ಇದ್ರೆ ಅಂಟಿಸಲಿ. ಪಾಪಾ..ಅವರಿಗೆ ಯಾಕೆ ಬ್ಯಾಡಾ ಅನ್ನಲಿ ಎಂದು ವ್ಯಂಗ್ಯವಾಡಿದರು.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

4 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

6 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 day ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago