Categories: ತುಮಕೂರು

ಜಿಲ್ಲೆಯಲ್ಲಿರುವ ಸಮಸ್ಯೆ ಬಗೆಹರಿಸಲು ಶ್ರಮಿಸುವೆ- ಉಸ್ತುವಾರಿ ಸಚಿವ ಡಾ.ಜಿ‌.ಪರಮೇಶ್ವರ್

ಮೂರನೇ ಬಾರಿ‌ ತುಮಕೂರು ಜಿಲ್ಲಾ‌ ಉಸ್ತುವಾರಿ ವಹಿಸಿಕೊಂಡಿದ್ದೇ‌ನೆ. ಜಿಲ್ಲೆಯ ಅಭಿವೃದ್ಧಿ, ಶಾಂತಿ ಕಾಪಾಡುವ ಜವಾಬ್ಧಾರಿ ಉಸ್ತುವಾರಿಗಳಿಗಿರುತ್ತದೆ. ಪ್ರತಿ ಜಿಲ್ಲೆಯಲ್ಲೂ ಒಂದೊಂದು‌ ಸಮಸ್ಯೆ‌ ಇರುತ್ತದೆ. ಮಳೆ, ಪ್ರವಾಹದಿಂದ ಬೆಳೆ‌ ಹಾನಿಯಾಗುತ್ತದೆ. ಕೆಲ ಜಿಲ್ಲೆಗಳಲ್ಲಿ ಮಳೆಯಾಗದೆ ನೀರಿನ‌ ಸಮಸ್ಯೆ ಇರುತ್ತದೆ. ಜಿಲ್ಲೆಯ ಸಮಸ್ಯೆಗಳಿಗೆ ತಕ್ಕಂತೆ ಸಚಿವರುಗಳು ಕ್ರಮ‌ಕೈಗೊಳ್ಳ‌ಬೇಕು ಎಂದು ತುಮಕೂರಿನಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ನಮ್ಮ‌ ಜಿಲ್ಲೆಯ ಮಧುಗಿರಿ ಪಾವಗಡ ಕೊರಟಗೆರೆ, ಶಿರಾದಲ್ಲಿ‌ ಮಳೆ ಕಡಿಮೆ ಇದ್ದು ಬರ ಹೆಚ್ಚಾಗಿರುತ್ತದೆ. ಕುಣಿಗಲ್, ಗುಬ್ಬಿ ,ತಿಪಟೂರಿನಲ್ಲಿ ಒಳ್ಳೆ ಮಳೆಯಾಗುತ್ತದೆ. ರೈತರಿಗೆ ಬೇಕಾದ ಗೊಬ್ಬರ, ಬಿತ್ತನೆ ಬೀಜವನ್ನು ಸಮರ್ಪಕವಾಗಿ ಸರಬರಾಜು ಮಾಡಬೇಕೆಂದು ಸಿಎಂ ಕ್ರಮ ಕೈಗೊಂಡಿದ್ದಾರೆ‌ ಜಿಲ್ಲೆಯಲ್ಲಿ ಕೊಬ್ಬರಿ ಬೆಲೆ ಇಳಿಕೆಯಿಂದ ರೈತರಿಗೆ ಸಮಸ್ಯೆಯಾಗಿದೆ ಎಂದರು.

ಸರ್ಕಾರಿ ಕಚೇರಿಗಳಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಆಚರಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದನ್ನು ಮುಂದಿನ‌ ದಿನಗಳಲ್ಲಿ ನೋಡೋಣ. ಯಾವುದನ್ನು ಮಾಡಬಾರದು, ಯಾವುದನ್ನು ಮಾಡಬೇಕು ಎಂಬುದರ ಬಗ್ಗೆ ಸರ್ಕಾರದಲ್ಲಿ ನಿಯಮಗಳಿವೆ ಅವುಗಳ ಮೂಲಕ ಮಾಡಲಾಗುತ್ತದೆ ಎಂದರು.

ಸರ್ಕಾರದಲ್ಲಿ ಬ್ಲೂಬುಕ್ ಇದೆ, ಅದರಲ್ಲಿ ಏನಿರುತ್ತೊ ಅದೇ ಆಗಬೇಕು. ಸಚಿವರಾಗಿದ್ದೇನೆ ಎಂದು ನಾವು ವೈಯಕ್ತಿಕವಾಗಿ ಪ್ರತ್ಯೇಕ ಕಾನೂನು ಮಾಡಲು ಬರಲ್ಲ. ಗೃಹ ಇಲಾಖೆಯಲ್ಲಿ ನಾನೊಂದು ಕಾನೂನು ಮಾಡಲು ಬರಲ್ಲ. ಇನ್ನೊಬ್ಬರು ಇನ್ನೊಂದು ಮಾಡಲು ಬರಲ್ಲ. ಕುಂಕುಮ, ವಿಭೂತಿ, ಇಟ್ಟುಕೊಳ್ಳಬಾರದು ಎಂದು ಹೇಳಿದ್ದೇನೆಂದು ವೈರಲ್ ಮಾಡಿದ್ದಾರೆ. ಅದನ್ನು ನಾನು ಹೇಳಿಯೇ ಇಲ್ಲ. ನನಗೆ ಪ್ರಜ್ಞೆಯಿದೆ, ನಾನು ಮೂರು ಬಾರಿ ಗೃಹ ಸಚಿವರಾಗಿ ಅಧಿಕಾರವಹಿಸಿಕೊಂಡಿದ್ದೇನೆ. ಪೊಲೀಸ್ ಇಲಾಖೆಯಲ್ಲಿ ಮಾನ್ಯೂಯಲ್ ಇದೆ. ಅದನ್ನು ಬಿಟ್ಟು ಬೇರೆ ಮಾಡಲು ಬರೊದಿಲ್ಲ ಎಂದು ಹೇಳಿದರು.

ಹಿರಿಯ ಅಧಿಕಾರಿಗಳು ಮಾನ್ಯೂಯಲ್ ಅನುಷ್ಟಾನ ಮಾಡುತ್ತಾರೆ. ನಾನು ಗೃಹ ಸಚಿವನಾಗಿದ್ದಾಗ ಒಂದು ಕಾನೂನು ಮಾಡಲು ಹೋಗುವುದು, ಇನ್ನೊಬ್ಬರು ಇನ್ನೊಂದು ಕಾನೂನು ಮಾಡಲು ಅವಕಾಶವಿಲ್ಲ.‌ ಯಾರು ವೈರಲ್ ಮಾಡಿದ್ದಾರೋ ಅವರನ್ನು ಹುಡುಕುತ್ತಿದ್ದೇವೆ. ಇಂತಹವನ್ನೆಲ್ಲಾ ಸುಮ್ಮನೆ ಬಿಡೊಕ್ಕೆ ಆಗಲ್ಲ. ಸುಳ್ಳು ಸುದ್ದಿಗಳನ್ನು ಮಾಡಬಾರದು, ರಾಜ್ಯದಲ್ಲಿ ಶಾಂತಿ ಹಾಳಾಗುತ್ತದೆ, ಪ್ರಚೋದನೆಯಾಗುತ್ತದೆ. ರಾಜ್ಯದಲ್ಲಿ‌ ಕೋಮು ಪ್ರೇರಿತ ಗಲಾಟೆಗಳು ಆಗಬಾರದು ಎಂಬುದು ನಮ್ಮ ನಿರೀಕ್ಷೆ- ಅಪೇಕ್ಷೆ ಎಂದರು.

ನಮ್ಮ ಪ್ರಣಾಳಿಕೆ ಶೀರ್ಷಿಕೆಯಲ್ಲೇ ಸರ್ವ ಜನಾಂಗದ ಶಾಂತಿಯ ತೋಟ ಮಾಡ್ತಿವಿ ಅಂತಾ ಹೇಳಿದ್ದೇವೆ. ಎಲ್ಲಾರೂ ಶಾಂತಿಯಿಂದ ಬಾಳೋಣ ಅನ್ನೊದು ನಮ್ಮ‌ ಅಪೇಕ್ಷೆ ಎಂದರು.

ಕಾಂಗ್ರೆಸ್ ಸರ್ಕಾರದಲ್ಲಿ ವರ್ಗವಣೆ ದಂಧೆ ಶುರುವಾಗಿದೆ,‌ ನಾವು ಪೇ ಸಿ.ಎಂ‌ ಪೋಸ್ಟರ್ ಅಂಟಿಸುತ್ತೆವೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರಿಗೇನಾದರೂ ಅಂತಹದ್ದು ಮಾಹಿತಿ ಇದ್ರೆ ಅಂಟಿಸಲಿ. ಪಾಪಾ..ಅವರಿಗೆ ಯಾಕೆ ಬ್ಯಾಡಾ ಅನ್ನಲಿ ಎಂದು ವ್ಯಂಗ್ಯವಾಡಿದರು.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

9 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

3 days ago