ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದ 30.03 ಹೆಕ್ಟೇರ್ ಬೆಳೆ ನಾಶ

ಜಿಲ್ಲೆಯಾದ್ಯಂತ 2023ರ ಮೇ.20 ರಿಂದ ಮೇ.23 ರವರೆಗೆ ಸುರಿದ ಅಕಾಲಿಕ ಮಳೆ, ಗಾಳಿಯಿಂದ 30.03 ಹೆಕ್ಟೇರ್ ವಿಸ್ತೀರ್ಣದ ಕೃಷಿ ಹಾಗೂ ತೋಟಗಾರಿಕೆ ಬೆಳೆ ನಾಶವಾಗಿದೆ. ಮುಂಗಾರು ಮಳೆ ಆರಂಭವಾಗುವ ಹಿನ್ನೆಲೆಯಲ್ಲಿ ಸನ್ನದ್ಧತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್ ಲತಾ ಅವರು ಅಧಿಕಾರಿಗಳಿಗೆ ತಿಳಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮುಂಗಾರು ಮಳೆ ಸನ್ನದ್ದತೆ ಕ್ರಮಗಳನ್ನು ಕೈಗೊಳ್ಳುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 1.31 ಹೆಕ್ಟೇರ್ ಹಾಗೂ ಹೊಸಕೋಟೆ ತಾಲೂಕಿನಲ್ಲಿ 5.62 ಹೆಕ್ಟೇರ್ ಸೇರಿದಂತೆ ಒಟ್ಟು 6.93 ಹೆಕ್ಟೇರ್ ರಷ್ಟು ವಿರ್ಸೀರ್ಣದ ಕೃಷಿ ಬೆಳೆಯಾದ ಸ್ವೀಟ್ ಕಾರ್ನ್(ಸಿಹಿ ಮೆಕ್ಕೆಜೋಳ) ಬೆಳೆ ಹಾನಿಯಾಗಿದೆ ಎಂದು ಕೃಷಿ ಜಂಟಿ ನಿರ್ದೇಶಕರು ಮಾಹಿತಿ ನೀಡಿದರು. ತೋಟಗಾರಿಕೆ ಬೆಳೆಗಳಾದ ಮಾವು 11.70 ಹೆಕ್ಟೇರ್, ಟೊಮ್ಯಾಟೋ 2 ಹೆಕ್ಟೇರ್, ಸೇವಂತಿಗೆ 5 ಹೆಕ್ಟೇರ್, ಬದನೆಕಾಯಿ 1.2 ಹೆಕ್ಟೇರ್ , ಹೀರೆ ಗಿಡ 1.28 ಹೆಕ್ಟೇರ್, ಬೀನ್ಸ್ 1.00 ಹೆಕ್ಟೇರ್ ವಿರ್ಸೀರ್ಣದ ಬೆಳೆಯು ಹಾನಿಯಾಗಿದೆ. ಉಳಿದಂತೆ ಎಲೆಕೋಸು, ಹೂಕೋಸು, ಚೆಂಡು ಹೂಗಳಿಗೆ ಅಲ್ಪ ಪ್ರಮಾಣದ ಹಾನಿಯಾಗಿದೆ.

ಒಟ್ಟಾರೆ ಹೊಸಕೋಟೆ ತಾಲ್ಲೂಕಿನಲ್ಲಿ 17 ಹೆಕ್ಟೇರ್ ಹಾಗೂ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 6.10 ಹೆಕ್ಟೇರ್ ಒಟ್ಟು 23.10 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು ಸಭೆಯಲ್ಲಿ ತಿಳಿಸಿದರು.

ಅಕಾಲಿಕ ಮಳೆ, ಗಾಳಿಯಿಂದ 30.03 ಹೆಕ್ಟೇರ್ ವಿಸ್ತೀರ್ಣದ ಕೃಷಿ ಹಾಗೂ ತೋಟಗಾರಿಕೆ ಬೆಳೆ ನಾಶವಾಗಿದೆ. ಶೀಘ್ರವೇ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ದೊಡ್ಡಬಳ್ಳಾಪುರದಲ್ಲಿ ಒಂದು ಮನೆ ಸೇರಿದಂತೆ, ಶಾಲೆಯ ಮೇಲ್ಚಾವಣಿಗೆ ಅಲ್ಪ ಹಾನಿಯಾಗಿದೆ. ಹೊಸಕೋಟೆ ವ್ಯಾಪ್ತಿಯಲ್ಲಿ ಒಂದು ಮನೆಗೆ ಹೆಚ್ಚು ಪ್ರಮಾಣದ ಹಾನಿಯಾಗಿದೆ. ಉಳಿದಂತೆ ನೆಲಮಂಗಲ ಹಾಗೂ ದೇವನಹಳ್ಳಿಯಲ್ಲಿ ಯಾವುದೇ ರೀತಿಯ ಮನೆಗಳಿಗೆ, ಶಾಲೆಗಳಿಗೆ, ಅಂಗನವಾಡಿ ಕಟ್ಟಡಗಳಿಗೆ ಹಾನಿಯಾಗಿರುವುದಿಲ್ಲ ಎಂದು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರು ಮಾತನಾಡಿ ಹಾನಿಯಾದ ಮನೆ ಕಟ್ಟಡಗಳಿಗೆ ಶೀಘ್ರ ಪರಿಹಾರ ಹಾಗೂ ದುರಸ್ತಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಹೆಚ್ಚು ಮಳೆ ಮತ್ತು ಗಾಳಿಯಿಂದ ನೆಲಮಂಗಲ ವ್ಯಾಪ್ತಿಯಲ್ಲಿ 41 ವಿದ್ಯುತ್ ಕಂಬಗಳು, 32 ಟ್ರಾನ್ಸಫಾರ್ಮರ್ಗಳು, ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ 22 ವಿದ್ಯುತ್ ಕಂಬಗಳು, 26 ಟ್ರಾನ್ಸಫಾರ್ಮರ್ಗಳು, ಹೊಸಕೋಟೆ ವ್ಯಾಪ್ತಿಯಲ್ಲಿ 27 ವಿದ್ಯುತ್ ಕಂಬಗಳು, 03 ಟ್ರಾನ್ಸಫಾರ್ಮರ್ಗಳು ದೇವನಹಳ್ಳಿಯಲ್ಲಿ 25 ವಿದ್ಯುತ್ ಕಂಬಗಳು , 02 ಟ್ರಾನ್ಸಫಾರ್ಮರ್ಗಳು ಒಟ್ಟು 115 ವಿದ್ಯುತ್ ಕಂಬಗಳು ಹಾಗೂ 63 ಟ್ರಾನ್ಸಫಾರ್ಮರ್ಗಳಿಗೆ ಹಾನಿಯಾಗಿವೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದಾಗ ನೆಲಕ್ಕೆ ಉರುಳಿರುವ ಕಂಬಗಳನ್ನು, ಟ್ರಾನ್ಸಫಾರ್ಮರ್ ಗಳನ್ನು ಬದಲಾಯಿಸಿ ವಿದ್ಯುತ್ ವ್ಯತ್ಯಯವಾಗದಂತೆ ಶೀಘ್ರವೇ ಕ್ರಮ ಕೈಗೊಳ್ಳಿ ಎಂದು ಬೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago