ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದ 30.03 ಹೆಕ್ಟೇರ್ ಬೆಳೆ ನಾಶ

ಜಿಲ್ಲೆಯಾದ್ಯಂತ 2023ರ ಮೇ.20 ರಿಂದ ಮೇ.23 ರವರೆಗೆ ಸುರಿದ ಅಕಾಲಿಕ ಮಳೆ, ಗಾಳಿಯಿಂದ 30.03 ಹೆಕ್ಟೇರ್ ವಿಸ್ತೀರ್ಣದ ಕೃಷಿ ಹಾಗೂ ತೋಟಗಾರಿಕೆ ಬೆಳೆ ನಾಶವಾಗಿದೆ. ಮುಂಗಾರು ಮಳೆ ಆರಂಭವಾಗುವ ಹಿನ್ನೆಲೆಯಲ್ಲಿ ಸನ್ನದ್ಧತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್ ಲತಾ ಅವರು ಅಧಿಕಾರಿಗಳಿಗೆ ತಿಳಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮುಂಗಾರು ಮಳೆ ಸನ್ನದ್ದತೆ ಕ್ರಮಗಳನ್ನು ಕೈಗೊಳ್ಳುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 1.31 ಹೆಕ್ಟೇರ್ ಹಾಗೂ ಹೊಸಕೋಟೆ ತಾಲೂಕಿನಲ್ಲಿ 5.62 ಹೆಕ್ಟೇರ್ ಸೇರಿದಂತೆ ಒಟ್ಟು 6.93 ಹೆಕ್ಟೇರ್ ರಷ್ಟು ವಿರ್ಸೀರ್ಣದ ಕೃಷಿ ಬೆಳೆಯಾದ ಸ್ವೀಟ್ ಕಾರ್ನ್(ಸಿಹಿ ಮೆಕ್ಕೆಜೋಳ) ಬೆಳೆ ಹಾನಿಯಾಗಿದೆ ಎಂದು ಕೃಷಿ ಜಂಟಿ ನಿರ್ದೇಶಕರು ಮಾಹಿತಿ ನೀಡಿದರು. ತೋಟಗಾರಿಕೆ ಬೆಳೆಗಳಾದ ಮಾವು 11.70 ಹೆಕ್ಟೇರ್, ಟೊಮ್ಯಾಟೋ 2 ಹೆಕ್ಟೇರ್, ಸೇವಂತಿಗೆ 5 ಹೆಕ್ಟೇರ್, ಬದನೆಕಾಯಿ 1.2 ಹೆಕ್ಟೇರ್ , ಹೀರೆ ಗಿಡ 1.28 ಹೆಕ್ಟೇರ್, ಬೀನ್ಸ್ 1.00 ಹೆಕ್ಟೇರ್ ವಿರ್ಸೀರ್ಣದ ಬೆಳೆಯು ಹಾನಿಯಾಗಿದೆ. ಉಳಿದಂತೆ ಎಲೆಕೋಸು, ಹೂಕೋಸು, ಚೆಂಡು ಹೂಗಳಿಗೆ ಅಲ್ಪ ಪ್ರಮಾಣದ ಹಾನಿಯಾಗಿದೆ.

ಒಟ್ಟಾರೆ ಹೊಸಕೋಟೆ ತಾಲ್ಲೂಕಿನಲ್ಲಿ 17 ಹೆಕ್ಟೇರ್ ಹಾಗೂ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 6.10 ಹೆಕ್ಟೇರ್ ಒಟ್ಟು 23.10 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು ಸಭೆಯಲ್ಲಿ ತಿಳಿಸಿದರು.

ಅಕಾಲಿಕ ಮಳೆ, ಗಾಳಿಯಿಂದ 30.03 ಹೆಕ್ಟೇರ್ ವಿಸ್ತೀರ್ಣದ ಕೃಷಿ ಹಾಗೂ ತೋಟಗಾರಿಕೆ ಬೆಳೆ ನಾಶವಾಗಿದೆ. ಶೀಘ್ರವೇ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ದೊಡ್ಡಬಳ್ಳಾಪುರದಲ್ಲಿ ಒಂದು ಮನೆ ಸೇರಿದಂತೆ, ಶಾಲೆಯ ಮೇಲ್ಚಾವಣಿಗೆ ಅಲ್ಪ ಹಾನಿಯಾಗಿದೆ. ಹೊಸಕೋಟೆ ವ್ಯಾಪ್ತಿಯಲ್ಲಿ ಒಂದು ಮನೆಗೆ ಹೆಚ್ಚು ಪ್ರಮಾಣದ ಹಾನಿಯಾಗಿದೆ. ಉಳಿದಂತೆ ನೆಲಮಂಗಲ ಹಾಗೂ ದೇವನಹಳ್ಳಿಯಲ್ಲಿ ಯಾವುದೇ ರೀತಿಯ ಮನೆಗಳಿಗೆ, ಶಾಲೆಗಳಿಗೆ, ಅಂಗನವಾಡಿ ಕಟ್ಟಡಗಳಿಗೆ ಹಾನಿಯಾಗಿರುವುದಿಲ್ಲ ಎಂದು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರು ಮಾತನಾಡಿ ಹಾನಿಯಾದ ಮನೆ ಕಟ್ಟಡಗಳಿಗೆ ಶೀಘ್ರ ಪರಿಹಾರ ಹಾಗೂ ದುರಸ್ತಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಹೆಚ್ಚು ಮಳೆ ಮತ್ತು ಗಾಳಿಯಿಂದ ನೆಲಮಂಗಲ ವ್ಯಾಪ್ತಿಯಲ್ಲಿ 41 ವಿದ್ಯುತ್ ಕಂಬಗಳು, 32 ಟ್ರಾನ್ಸಫಾರ್ಮರ್ಗಳು, ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ 22 ವಿದ್ಯುತ್ ಕಂಬಗಳು, 26 ಟ್ರಾನ್ಸಫಾರ್ಮರ್ಗಳು, ಹೊಸಕೋಟೆ ವ್ಯಾಪ್ತಿಯಲ್ಲಿ 27 ವಿದ್ಯುತ್ ಕಂಬಗಳು, 03 ಟ್ರಾನ್ಸಫಾರ್ಮರ್ಗಳು ದೇವನಹಳ್ಳಿಯಲ್ಲಿ 25 ವಿದ್ಯುತ್ ಕಂಬಗಳು , 02 ಟ್ರಾನ್ಸಫಾರ್ಮರ್ಗಳು ಒಟ್ಟು 115 ವಿದ್ಯುತ್ ಕಂಬಗಳು ಹಾಗೂ 63 ಟ್ರಾನ್ಸಫಾರ್ಮರ್ಗಳಿಗೆ ಹಾನಿಯಾಗಿವೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದಾಗ ನೆಲಕ್ಕೆ ಉರುಳಿರುವ ಕಂಬಗಳನ್ನು, ಟ್ರಾನ್ಸಫಾರ್ಮರ್ ಗಳನ್ನು ಬದಲಾಯಿಸಿ ವಿದ್ಯುತ್ ವ್ಯತ್ಯಯವಾಗದಂತೆ ಶೀಘ್ರವೇ ಕ್ರಮ ಕೈಗೊಳ್ಳಿ ಎಂದು ಬೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

7 minutes ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

7 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

8 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

23 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago