2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಐದನೆಯ ದಿನವಾದ ಬುಧವಾರದಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 17 ಅಭ್ಯರ್ಥಿಗಳಿಂದ ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮಾಹಿತಿ ನೀಡಿದರು.
ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಇತರೆ ಪಕ್ಷದಿಂದ ಎಂ ಶ್ರೀಮತಿ ಇತರೆ ಪಕ್ಷದಿಂದ, ಸ್ವತಂತ್ರ ಅಭ್ಯರ್ಥಿಗಳಾಗಿ ನವೀನ್ ಕೆ, ಶರತ್ ಕುಮಾರ್ ಕೆ, ಎಸ್ ಆರ್ ರಘುನಾಥ್ ನಾಮಪತ್ರ ಸಲ್ಲಿಸಿದ್ದಾರೆ.
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿ ಮಂಜುನಾಥ್, ಬಿ ರಾಮಚಂದ್ರ, ಇತರೆ ಪಕ್ಷದಿಂದ ನಾಗೇಶ್ ಎಸ್, ಎ.ಎ.ಪಿ ಪಕ್ಷದಿಂದ ಬಿ.ಕೆ ಶಿವಪ್ಪ, ಬಿ.ಜೆ.ಪಿ ಪಕ್ಷದಿಂದ ಪಿಳ್ಳಮುನಿಶಾಮಪ್ಪ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಐ.ಎನ್.ಸಿ ಪಕ್ಷದಿಂದ ವೆಂಕಟರಮಣಯ್ಯ, ಇತರೆ ಪಕ್ಷದಿಂದ ವೆಂಕಟರಾಜು 2ನಾಮಪತ್ರ, ಸಮಾಜವಾದಿ ಪಕ್ಷದಿಂದ ಎಂ.ವಿ ನಾರಾಯಣ ನಾಮಪತ್ರ ಸಲ್ಲಿಸಿದ್ದಾರೆ.
181- ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಉಮಾದೇವಿ, ಜೆಡಿಎಸ್ ಪಕ್ಷದಿಂದ ಡಾ. ಕೆ.ಶ್ರೀನಿವಾಸಮೂರ್ತಿ ,ಬಿ.ಜೆ.ಪಿ ಪಕ್ಷದಿಂದ ಸಪ್ತಗಿರಿ ಮೇಘಾವತ್ ಶಂಕರ್ ನಾಯಕ್, ಸಂಯುಕ್ತ ಜನತಾ ದಳ ಪಕ್ಷದಿಂದ ಬಿ ರಾಮಯ್ಯ, ಐಎನ್ ಸಿ ಪಕ್ಷದಿಂದ ಶ್ರೀನಿವಾಸಯ್ಯ ಎನ್ ನಾಮ ಪತ್ರ ಸಲ್ಲಿಸಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…