ಜಿಲ್ಲೆಯಲ್ಲಿ ಏ.20ರಂದು 33 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ: ಜಿಲ್ಲಾಧಿಕಾರಿ ಆರ್ ಲತಾ

2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆರನೆಯ ದಿನ ಹಾಗೂ ಕೊನೆಯ ದಿನವಾದ ಗುರುವಾರದಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 33 ಅಭ್ಯರ್ಥಿಗಳಿಂದ ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮಾಹಿತಿ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 13 ಅಭ್ಯರ್ಥಿಗಳು) ಎ.ಎ.ಪಿ. ಪಕ್ಷದ ಅಭ್ಯರ್ಥಿಯಾಗಿ ಪ್ರಶಾಂತ್ ಸುಬ್ರಮಣಿ, ಬಿ.ಎಸ್.ಪಿ ಪಕ್ಷದಿಂದ ಡಿ.ಎಂ ಲಕ್ಷ್ಮಿನಾರಾಯಣ, ಪಕ್ಷೇತರ ಅಭ್ಯರ್ಥಿಗಳಾಗಿ ಜಿ.ನಾರಾಯಣಸ್ವಾಮಿ, ಅನುಷ.ಪಿ.ಆರ್, ಈರೇಗೌಡ, ಅಂಬುಜ, ನವೀನ್ ಕುಮಾರ್.ಎಸ್.ಆರ್, ಜಿ.ಅಶೋಕ್, ಸುರೇಶ್.ಕೆ, ಟಿ.ನಾಗರಾಜು ಹಾಗೂ ಇತರೆ ಪಕ್ಷಗಳಿಂದ ಬಿ. ಸೊಣ್ಣಪ್ಪ, ಶರತ್ ಬಚ್ಚೇಗೌಡ, ರಮೇಶ ನಾಮಪತ್ರ ಸಲ್ಲಿಸಿದ್ದಾರೆ.

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 07 ಅಭ್ಯರ್ಥಿಗಳು) ಜೆ.ಡಿ.ಎಸ್ ಪಕ್ಷದಿಂದ ನಾರಾಯಣ ಸ್ವಾಮಿ.ಎಲ್.ಎನ್, ಪಕ್ಷೇತರ ಅಭ್ಯರ್ಥಿಗಳಾಗಿ ನಾರಾಯಣಸ್ವಾಮಿ, ವಿ.ಮಂಜುನಾಥ್, ಕೆ.ಮುನಿಯಪ್ಪ, ನಿಸರ್ಗ.ವಿ, ಶಿವಪ್ಪ ಹಾಗೂ ಇತರೆ ಪಕ್ಷದಿಂದ ಡಾ. ಎಂ.ವೆಂಕಟಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ.

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 08 ಅಭ್ಯರ್ಥಿಗಳು) ಬಿ.ಎಸ್.ಪಿ ಪಕ್ಷದಿಂದ ಬಿ.ಎಲ್.ಪಿಳ್ಳಪ್ಪ, ಜೆ.ಡಿ.ಎಸ್ ಪಕ್ಷದಿಂದ ಬಿ.ಮುನೇಗೌಡ, ಬಿ.ಜೆ. ಪಿ ಪಕ್ಷದಿಂದ ಧೀರಜ್ ಮುನಿರಾಜ್, ಐ.ಎನ್. ಸಿ ಪಕ್ಷದಿಂದ ಟಿ.ವೆಂಕಟರಮಣಯ್ಯ, ಸ್ವತಂತ್ರ ಅಭ್ಯರ್ಥಿಗಳಾಗಿ ಆನಂದ್ಮೂರ್ತಿ ಜೆ, ಇಬ್ರಾಹಿಂ ಷರೀಫ್ ತೂಬಗೆರೆ ಶರೀಫ್, ಇತರೆ ಪಕ್ಷದಿಂದ ಬಿ.ಶಿವಶಂಕರ್, ಗಂಗಮ್ಮ.ಎಂ ನಾಮಪತ್ರ ಸಲ್ಲಿಸಿದ್ದಾರೆ.

181- ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 05 ಅಭ್ಯರ್ಥಿಗಳು) ಬಿ.ಎಸ್.ಪಿ ಪಕ್ಷದಿಂದ ಬಿ.ಎಮ್.ಮಹದೇವ್, ಬಿ.ಜೆ.ಪಿ ಪಕ್ಷದಿಂದ ಸಪ್ತಗಿರಿ ಮೇಘಾವತ್ ಶಂಕರ್ ನಾಯಕ್, ಪಕ್ಷೇತರ ಅಭ್ಯರ್ಥಿಗಳಾಗಿ ಉಮಾದೇವಿ, ಶ್ರೀನಿವಾಸ್.ವಿ, ಅರುಣ್ ಕುಮಾರ್.ಬಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

11 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

11 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

14 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

22 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

24 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago