2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆರನೆಯ ದಿನ ಹಾಗೂ ಕೊನೆಯ ದಿನವಾದ ಗುರುವಾರದಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 33 ಅಭ್ಯರ್ಥಿಗಳಿಂದ ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮಾಹಿತಿ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 13 ಅಭ್ಯರ್ಥಿಗಳು) ಎ.ಎ.ಪಿ. ಪಕ್ಷದ ಅಭ್ಯರ್ಥಿಯಾಗಿ ಪ್ರಶಾಂತ್ ಸುಬ್ರಮಣಿ, ಬಿ.ಎಸ್.ಪಿ ಪಕ್ಷದಿಂದ ಡಿ.ಎಂ ಲಕ್ಷ್ಮಿನಾರಾಯಣ, ಪಕ್ಷೇತರ ಅಭ್ಯರ್ಥಿಗಳಾಗಿ ಜಿ.ನಾರಾಯಣಸ್ವಾಮಿ, ಅನುಷ.ಪಿ.ಆರ್, ಈರೇಗೌಡ, ಅಂಬುಜ, ನವೀನ್ ಕುಮಾರ್.ಎಸ್.ಆರ್, ಜಿ.ಅಶೋಕ್, ಸುರೇಶ್.ಕೆ, ಟಿ.ನಾಗರಾಜು ಹಾಗೂ ಇತರೆ ಪಕ್ಷಗಳಿಂದ ಬಿ. ಸೊಣ್ಣಪ್ಪ, ಶರತ್ ಬಚ್ಚೇಗೌಡ, ರಮೇಶ ನಾಮಪತ್ರ ಸಲ್ಲಿಸಿದ್ದಾರೆ.
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 07 ಅಭ್ಯರ್ಥಿಗಳು) ಜೆ.ಡಿ.ಎಸ್ ಪಕ್ಷದಿಂದ ನಾರಾಯಣ ಸ್ವಾಮಿ.ಎಲ್.ಎನ್, ಪಕ್ಷೇತರ ಅಭ್ಯರ್ಥಿಗಳಾಗಿ ನಾರಾಯಣಸ್ವಾಮಿ, ವಿ.ಮಂಜುನಾಥ್, ಕೆ.ಮುನಿಯಪ್ಪ, ನಿಸರ್ಗ.ವಿ, ಶಿವಪ್ಪ ಹಾಗೂ ಇತರೆ ಪಕ್ಷದಿಂದ ಡಾ. ಎಂ.ವೆಂಕಟಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ.
180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 08 ಅಭ್ಯರ್ಥಿಗಳು) ಬಿ.ಎಸ್.ಪಿ ಪಕ್ಷದಿಂದ ಬಿ.ಎಲ್.ಪಿಳ್ಳಪ್ಪ, ಜೆ.ಡಿ.ಎಸ್ ಪಕ್ಷದಿಂದ ಬಿ.ಮುನೇಗೌಡ, ಬಿ.ಜೆ. ಪಿ ಪಕ್ಷದಿಂದ ಧೀರಜ್ ಮುನಿರಾಜ್, ಐ.ಎನ್. ಸಿ ಪಕ್ಷದಿಂದ ಟಿ.ವೆಂಕಟರಮಣಯ್ಯ, ಸ್ವತಂತ್ರ ಅಭ್ಯರ್ಥಿಗಳಾಗಿ ಆನಂದ್ಮೂರ್ತಿ ಜೆ, ಇಬ್ರಾಹಿಂ ಷರೀಫ್ ತೂಬಗೆರೆ ಶರೀಫ್, ಇತರೆ ಪಕ್ಷದಿಂದ ಬಿ.ಶಿವಶಂಕರ್, ಗಂಗಮ್ಮ.ಎಂ ನಾಮಪತ್ರ ಸಲ್ಲಿಸಿದ್ದಾರೆ.
181- ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 05 ಅಭ್ಯರ್ಥಿಗಳು) ಬಿ.ಎಸ್.ಪಿ ಪಕ್ಷದಿಂದ ಬಿ.ಎಮ್.ಮಹದೇವ್, ಬಿ.ಜೆ.ಪಿ ಪಕ್ಷದಿಂದ ಸಪ್ತಗಿರಿ ಮೇಘಾವತ್ ಶಂಕರ್ ನಾಯಕ್, ಪಕ್ಷೇತರ ಅಭ್ಯರ್ಥಿಗಳಾಗಿ ಉಮಾದೇವಿ, ಶ್ರೀನಿವಾಸ್.ವಿ, ಅರುಣ್ ಕುಮಾರ್.ಬಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…