ಜಿಲ್ಲೆಯಲ್ಲಿ ಏ.20ರಂದು 33 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ: ಜಿಲ್ಲಾಧಿಕಾರಿ ಆರ್ ಲತಾ

2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆರನೆಯ ದಿನ ಹಾಗೂ ಕೊನೆಯ ದಿನವಾದ ಗುರುವಾರದಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 33 ಅಭ್ಯರ್ಥಿಗಳಿಂದ ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮಾಹಿತಿ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 13 ಅಭ್ಯರ್ಥಿಗಳು) ಎ.ಎ.ಪಿ. ಪಕ್ಷದ ಅಭ್ಯರ್ಥಿಯಾಗಿ ಪ್ರಶಾಂತ್ ಸುಬ್ರಮಣಿ, ಬಿ.ಎಸ್.ಪಿ ಪಕ್ಷದಿಂದ ಡಿ.ಎಂ ಲಕ್ಷ್ಮಿನಾರಾಯಣ, ಪಕ್ಷೇತರ ಅಭ್ಯರ್ಥಿಗಳಾಗಿ ಜಿ.ನಾರಾಯಣಸ್ವಾಮಿ, ಅನುಷ.ಪಿ.ಆರ್, ಈರೇಗೌಡ, ಅಂಬುಜ, ನವೀನ್ ಕುಮಾರ್.ಎಸ್.ಆರ್, ಜಿ.ಅಶೋಕ್, ಸುರೇಶ್.ಕೆ, ಟಿ.ನಾಗರಾಜು ಹಾಗೂ ಇತರೆ ಪಕ್ಷಗಳಿಂದ ಬಿ. ಸೊಣ್ಣಪ್ಪ, ಶರತ್ ಬಚ್ಚೇಗೌಡ, ರಮೇಶ ನಾಮಪತ್ರ ಸಲ್ಲಿಸಿದ್ದಾರೆ.

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 07 ಅಭ್ಯರ್ಥಿಗಳು) ಜೆ.ಡಿ.ಎಸ್ ಪಕ್ಷದಿಂದ ನಾರಾಯಣ ಸ್ವಾಮಿ.ಎಲ್.ಎನ್, ಪಕ್ಷೇತರ ಅಭ್ಯರ್ಥಿಗಳಾಗಿ ನಾರಾಯಣಸ್ವಾಮಿ, ವಿ.ಮಂಜುನಾಥ್, ಕೆ.ಮುನಿಯಪ್ಪ, ನಿಸರ್ಗ.ವಿ, ಶಿವಪ್ಪ ಹಾಗೂ ಇತರೆ ಪಕ್ಷದಿಂದ ಡಾ. ಎಂ.ವೆಂಕಟಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ.

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 08 ಅಭ್ಯರ್ಥಿಗಳು) ಬಿ.ಎಸ್.ಪಿ ಪಕ್ಷದಿಂದ ಬಿ.ಎಲ್.ಪಿಳ್ಳಪ್ಪ, ಜೆ.ಡಿ.ಎಸ್ ಪಕ್ಷದಿಂದ ಬಿ.ಮುನೇಗೌಡ, ಬಿ.ಜೆ. ಪಿ ಪಕ್ಷದಿಂದ ಧೀರಜ್ ಮುನಿರಾಜ್, ಐ.ಎನ್. ಸಿ ಪಕ್ಷದಿಂದ ಟಿ.ವೆಂಕಟರಮಣಯ್ಯ, ಸ್ವತಂತ್ರ ಅಭ್ಯರ್ಥಿಗಳಾಗಿ ಆನಂದ್ಮೂರ್ತಿ ಜೆ, ಇಬ್ರಾಹಿಂ ಷರೀಫ್ ತೂಬಗೆರೆ ಶರೀಫ್, ಇತರೆ ಪಕ್ಷದಿಂದ ಬಿ.ಶಿವಶಂಕರ್, ಗಂಗಮ್ಮ.ಎಂ ನಾಮಪತ್ರ ಸಲ್ಲಿಸಿದ್ದಾರೆ.

181- ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 05 ಅಭ್ಯರ್ಥಿಗಳು) ಬಿ.ಎಸ್.ಪಿ ಪಕ್ಷದಿಂದ ಬಿ.ಎಮ್.ಮಹದೇವ್, ಬಿ.ಜೆ.ಪಿ ಪಕ್ಷದಿಂದ ಸಪ್ತಗಿರಿ ಮೇಘಾವತ್ ಶಂಕರ್ ನಾಯಕ್, ಪಕ್ಷೇತರ ಅಭ್ಯರ್ಥಿಗಳಾಗಿ ಉಮಾದೇವಿ, ಶ್ರೀನಿವಾಸ್.ವಿ, ಅರುಣ್ ಕುಮಾರ್.ಬಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

6 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago