2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆರನೆಯ ದಿನ ಹಾಗೂ ಕೊನೆಯ ದಿನವಾದ ಗುರುವಾರದಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 33 ಅಭ್ಯರ್ಥಿಗಳಿಂದ ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮಾಹಿತಿ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 13 ಅಭ್ಯರ್ಥಿಗಳು) ಎ.ಎ.ಪಿ. ಪಕ್ಷದ ಅಭ್ಯರ್ಥಿಯಾಗಿ ಪ್ರಶಾಂತ್ ಸುಬ್ರಮಣಿ, ಬಿ.ಎಸ್.ಪಿ ಪಕ್ಷದಿಂದ ಡಿ.ಎಂ ಲಕ್ಷ್ಮಿನಾರಾಯಣ, ಪಕ್ಷೇತರ ಅಭ್ಯರ್ಥಿಗಳಾಗಿ ಜಿ.ನಾರಾಯಣಸ್ವಾಮಿ, ಅನುಷ.ಪಿ.ಆರ್, ಈರೇಗೌಡ, ಅಂಬುಜ, ನವೀನ್ ಕುಮಾರ್.ಎಸ್.ಆರ್, ಜಿ.ಅಶೋಕ್, ಸುರೇಶ್.ಕೆ, ಟಿ.ನಾಗರಾಜು ಹಾಗೂ ಇತರೆ ಪಕ್ಷಗಳಿಂದ ಬಿ. ಸೊಣ್ಣಪ್ಪ, ಶರತ್ ಬಚ್ಚೇಗೌಡ, ರಮೇಶ ನಾಮಪತ್ರ ಸಲ್ಲಿಸಿದ್ದಾರೆ.
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 07 ಅಭ್ಯರ್ಥಿಗಳು) ಜೆ.ಡಿ.ಎಸ್ ಪಕ್ಷದಿಂದ ನಾರಾಯಣ ಸ್ವಾಮಿ.ಎಲ್.ಎನ್, ಪಕ್ಷೇತರ ಅಭ್ಯರ್ಥಿಗಳಾಗಿ ನಾರಾಯಣಸ್ವಾಮಿ, ವಿ.ಮಂಜುನಾಥ್, ಕೆ.ಮುನಿಯಪ್ಪ, ನಿಸರ್ಗ.ವಿ, ಶಿವಪ್ಪ ಹಾಗೂ ಇತರೆ ಪಕ್ಷದಿಂದ ಡಾ. ಎಂ.ವೆಂಕಟಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ.
180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 08 ಅಭ್ಯರ್ಥಿಗಳು) ಬಿ.ಎಸ್.ಪಿ ಪಕ್ಷದಿಂದ ಬಿ.ಎಲ್.ಪಿಳ್ಳಪ್ಪ, ಜೆ.ಡಿ.ಎಸ್ ಪಕ್ಷದಿಂದ ಬಿ.ಮುನೇಗೌಡ, ಬಿ.ಜೆ. ಪಿ ಪಕ್ಷದಿಂದ ಧೀರಜ್ ಮುನಿರಾಜ್, ಐ.ಎನ್. ಸಿ ಪಕ್ಷದಿಂದ ಟಿ.ವೆಂಕಟರಮಣಯ್ಯ, ಸ್ವತಂತ್ರ ಅಭ್ಯರ್ಥಿಗಳಾಗಿ ಆನಂದ್ಮೂರ್ತಿ ಜೆ, ಇಬ್ರಾಹಿಂ ಷರೀಫ್ ತೂಬಗೆರೆ ಶರೀಫ್, ಇತರೆ ಪಕ್ಷದಿಂದ ಬಿ.ಶಿವಶಂಕರ್, ಗಂಗಮ್ಮ.ಎಂ ನಾಮಪತ್ರ ಸಲ್ಲಿಸಿದ್ದಾರೆ.
181- ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 05 ಅಭ್ಯರ್ಥಿಗಳು) ಬಿ.ಎಸ್.ಪಿ ಪಕ್ಷದಿಂದ ಬಿ.ಎಮ್.ಮಹದೇವ್, ಬಿ.ಜೆ.ಪಿ ಪಕ್ಷದಿಂದ ಸಪ್ತಗಿರಿ ಮೇಘಾವತ್ ಶಂಕರ್ ನಾಯಕ್, ಪಕ್ಷೇತರ ಅಭ್ಯರ್ಥಿಗಳಾಗಿ ಉಮಾದೇವಿ, ಶ್ರೀನಿವಾಸ್.ವಿ, ಅರುಣ್ ಕುಮಾರ್.ಬಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…