2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆರನೆಯ ದಿನ ಹಾಗೂ ಕೊನೆಯ ದಿನವಾದ ಗುರುವಾರದಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 33 ಅಭ್ಯರ್ಥಿಗಳಿಂದ ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮಾಹಿತಿ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 13 ಅಭ್ಯರ್ಥಿಗಳು) ಎ.ಎ.ಪಿ. ಪಕ್ಷದ ಅಭ್ಯರ್ಥಿಯಾಗಿ ಪ್ರಶಾಂತ್ ಸುಬ್ರಮಣಿ, ಬಿ.ಎಸ್.ಪಿ ಪಕ್ಷದಿಂದ ಡಿ.ಎಂ ಲಕ್ಷ್ಮಿನಾರಾಯಣ, ಪಕ್ಷೇತರ ಅಭ್ಯರ್ಥಿಗಳಾಗಿ ಜಿ.ನಾರಾಯಣಸ್ವಾಮಿ, ಅನುಷ.ಪಿ.ಆರ್, ಈರೇಗೌಡ, ಅಂಬುಜ, ನವೀನ್ ಕುಮಾರ್.ಎಸ್.ಆರ್, ಜಿ.ಅಶೋಕ್, ಸುರೇಶ್.ಕೆ, ಟಿ.ನಾಗರಾಜು ಹಾಗೂ ಇತರೆ ಪಕ್ಷಗಳಿಂದ ಬಿ. ಸೊಣ್ಣಪ್ಪ, ಶರತ್ ಬಚ್ಚೇಗೌಡ, ರಮೇಶ ನಾಮಪತ್ರ ಸಲ್ಲಿಸಿದ್ದಾರೆ.
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 07 ಅಭ್ಯರ್ಥಿಗಳು) ಜೆ.ಡಿ.ಎಸ್ ಪಕ್ಷದಿಂದ ನಾರಾಯಣ ಸ್ವಾಮಿ.ಎಲ್.ಎನ್, ಪಕ್ಷೇತರ ಅಭ್ಯರ್ಥಿಗಳಾಗಿ ನಾರಾಯಣಸ್ವಾಮಿ, ವಿ.ಮಂಜುನಾಥ್, ಕೆ.ಮುನಿಯಪ್ಪ, ನಿಸರ್ಗ.ವಿ, ಶಿವಪ್ಪ ಹಾಗೂ ಇತರೆ ಪಕ್ಷದಿಂದ ಡಾ. ಎಂ.ವೆಂಕಟಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ.
180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 08 ಅಭ್ಯರ್ಥಿಗಳು) ಬಿ.ಎಸ್.ಪಿ ಪಕ್ಷದಿಂದ ಬಿ.ಎಲ್.ಪಿಳ್ಳಪ್ಪ, ಜೆ.ಡಿ.ಎಸ್ ಪಕ್ಷದಿಂದ ಬಿ.ಮುನೇಗೌಡ, ಬಿ.ಜೆ. ಪಿ ಪಕ್ಷದಿಂದ ಧೀರಜ್ ಮುನಿರಾಜ್, ಐ.ಎನ್. ಸಿ ಪಕ್ಷದಿಂದ ಟಿ.ವೆಂಕಟರಮಣಯ್ಯ, ಸ್ವತಂತ್ರ ಅಭ್ಯರ್ಥಿಗಳಾಗಿ ಆನಂದ್ಮೂರ್ತಿ ಜೆ, ಇಬ್ರಾಹಿಂ ಷರೀಫ್ ತೂಬಗೆರೆ ಶರೀಫ್, ಇತರೆ ಪಕ್ಷದಿಂದ ಬಿ.ಶಿವಶಂಕರ್, ಗಂಗಮ್ಮ.ಎಂ ನಾಮಪತ್ರ ಸಲ್ಲಿಸಿದ್ದಾರೆ.
181- ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ(ಒಟ್ಟು 05 ಅಭ್ಯರ್ಥಿಗಳು) ಬಿ.ಎಸ್.ಪಿ ಪಕ್ಷದಿಂದ ಬಿ.ಎಮ್.ಮಹದೇವ್, ಬಿ.ಜೆ.ಪಿ ಪಕ್ಷದಿಂದ ಸಪ್ತಗಿರಿ ಮೇಘಾವತ್ ಶಂಕರ್ ನಾಯಕ್, ಪಕ್ಷೇತರ ಅಭ್ಯರ್ಥಿಗಳಾಗಿ ಉಮಾದೇವಿ, ಶ್ರೀನಿವಾಸ್.ವಿ, ಅರುಣ್ ಕುಮಾರ್.ಬಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…