ಜಿಲ್ಲೆಯ ನಾಲ್ಕು ತಾಲ್ಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು, ಸಾರ್ವಜನಿಕರಿಗೆ ತುರ್ತು ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಆಹಾರ, ಮೇವುಗಳ ಲಭ್ಯತೆಯ ಅಭಾವ ಕಂಡುಬಂದಲ್ಲಿ ಶೀಘ್ರ ಸ್ಪಂದಿಸಿ ಬಗೆಹರಿಸುವಂತೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಜಿಲ್ಲಾ ಕಛೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ 2023 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ವಿಪತ್ತು ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಪರ್ಯಾಯವಾಗಿ ನೀರು ಪೂರೈಸುವ ಕೊಳವೆ ಬಾವಿಗಳನ್ನು ಗುರುತಿಸಿ, ಅವಶ್ಯವಿದ್ದಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ಹಾಗೂ ಟ್ಯಾಂಕರ್ ಗಳ ಮೂಲಕ ನೀರನ್ನು ಪೂರೈಸಲು ಸಿದ್ಧತೆ ಮಾಡಿಕೊಳ್ಳಿ ಎಂದರು.
ಬರದ ಹಿನ್ನೆಲೆಯಲ್ಲಿ ಜಾನುವಾರಗಳ ಆಹಾರ ಮತ್ತು ಮೇವುಗಳಿಗೆ ತೊಂದರೆ ಉಂಟಾಗಬಹುದಾದ ಹಿನ್ನೆಲೆಯಲ್ಲಿ ಜಾನುವಾರಗಳ ಗಣತಿಯನ್ನು ಆಧರಿಸಿ ಮೇವು ಕಿಟ್ ಗಳನ್ನು ಅಗತ್ಯ ಇರುವ ಸ್ಥಳಗಳಿಗೆ ಪೂರೈಸಲು ಕ್ರಮ ವಹಿಸಲು ಪಶು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ದೊಡ್ಡಬಳ್ಳಾಪುರ ತಾಲ್ಲೂಕು ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್, ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಶಿವರಾಜ್, ನೆಲಮಂಗಲ ತಾಲ್ಲೂಕು ತಹಸೀಲ್ದಾರ್ ಅರುಂಧತಿ, ದೊಡ್ಡಬಳ್ಳಾಪುರ ಕಾರ್ಯ ನಿರ್ವಾಹಕ ಅಧಿಕಾರಿ ಮುನಿರಾಜು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…