ಜಿಲ್ಲೆಯಲ್ಲಿ ಜಾನುವಾರು ಸಂತೆ, ಜಾತ್ರೆ, ಸಾಗಾಣಿಕೆ ನಿಷೇಧವನ್ನು ಫೆಬ್ರವರಿ 28ರವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಕ್ಕಪಕ್ಕದ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಚರ್ಮಗಂಟು ರೋಗವು ಪೂರ್ತಿಯಾಗಿ ಹತೋಟಿಗೆ ಬಾರದೇ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ The Prevention and control of infectious and Contagious Diseases in Animals Act-2009 Section-12 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಾನುವಾರುಗಳಿಗೆ ಚರ್ಮಗಂಟು ರೋಗ(Lumpy Skin disease) ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಜಾನುವಾರುಗಳ ಆರೋಗ್ಯದ ಹಿತದೃಷ್ಟಿಯಿಂದ 2023ರ ಫೆಬ್ರವರಿ 28 ರ ಸಂಜೆ 6.00 ಗಂಟೆಯವರೆಗೆ ಜಿಲ್ಲೆಯಾದ್ಯಂತ ಜಾನುವಾರುಗಳ ಜಾತ್ರೆ, ಸಂತೆ, ಸಾಗಾಣಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧ ಮುಂದುವರೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಆದೇಶಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಈವರೆಗೂ 2370 ಜಾನುವಾರುಗಳಲ್ಲಿ ಈ ರೋಗವು ಕಂಡುಬಂದಿದ್ದು, 206 ಜಾನುವಾರುಗಳು ಮರಣಹೊಂದಿರುತ್ತವೆ. ಇದು ಒಂದು ವೈರಾಣುನಿಂದ ಹರಡುವ ರೋಗವಾಗಿದೆ.

ಪ್ರಮುಖವಾಗಿ ಸೊಳ್ಳೆ, ನೊಣ, ಉಣ್ಣೆ ಇತ್ಯಾದಿ ಕೀಟಗಳಿಂದ ಹರಡುತ್ತದೆ. ಈ ರೋಗವು ಕಾಣಿಸಿಕೊಂಡ ಜಾನುವಾರುಗಳು ರೋಗದಿಂದ ಸಾಕಷ್ಟು ಬಳಲುವುದರಿಂದ ಉತ್ಪಾದನೆ ಕಡಿಮೆಯಾಗುವುದಲ್ಲದೆ, ಕೆಲವೊಮ್ಮೆ ಮರಣ ಹೊಂದುತ್ತವೆ. ಇದರಿಂದ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 1,60,087 ಜಾನುವಾರುಗಳಿಗೆ ಲಸಿಕೆಯನ್ನು ನೀಡಲಾಗಿದ್ದು, ರೋಗ ಪೀಡಿತ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸಲಾಗಿದೆ.

ಜಿಲ್ಲೆಯಲ್ಲಿ ಹಲವೆಡೆ ಜಾನುವಾರು ಸಂತೆ/ಜಾತ್ರೆಗಳು ನಡೆಯಲಿದ್ದು, ಇವುಗಳಿಂದ ಜಾನುವಾರುಗಳ ಸಾಗಾಣಿಕೆ/ಚಲನವಲನದಿಂದ ಹಾಗೂ ಹಲವಾರು ಜಾನುವಾರುಗಳನ್ನು ಒಂದೆಡೆ ಸೇರಿಸುವುದರಿಂದ ರೋಗೋದ್ರೇಕವು ಹೆಚ್ಚಾಗುವ ಸಾಧ್ಯತೆ ಇರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸ್ತುತ 1,62,980 ದನ/ಎಮ್ಮೆಗಳಿದ್ದು, ರೋಗೋದ್ರೇಕವನ್ನು ನಿಯಂತ್ರಿಸದಿದ್ದಲ್ಲಿ ಸಾಕಷ್ಟು ಆರ್ಥಿಕ ನಷ್ಟ ಉಂಟಾಗುವ ಸಂಭವವಿರುವುದರಿಂದ ಜಿಲ್ಲೆಯಾದ್ಯಂತ ಜಾನುವಾರು ಜಾತ್ರೆ/ಸಂತೆಗಳನ್ನು ಎರಡು ತಿಂಗಳ ಅವಧಿಗೆ Karnataka Animal Diseases (Control Act), 1961 ರಡಿ ಮತ್ತು ಸಿಆರ್‌ಪಿಸಿ ಕಲಂ 144 ರ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ಮಾಡುವುದನ್ನು ನಿಷೇಧಿಸುವಂತೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

8 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

12 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

19 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

20 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago