ಜಿಲ್ಲೆಯಲ್ಲಿ ಜಾನುವಾರು ಸಂತೆ, ಜಾತ್ರೆ, ಸಾಗಾಣಿಕೆ ನಿಷೇಧವನ್ನು ಫೆಬ್ರವರಿ 28ರವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಕ್ಕಪಕ್ಕದ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಚರ್ಮಗಂಟು ರೋಗವು ಪೂರ್ತಿಯಾಗಿ ಹತೋಟಿಗೆ ಬಾರದೇ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ The Prevention and control of infectious and Contagious Diseases in Animals Act-2009 Section-12 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಾನುವಾರುಗಳಿಗೆ ಚರ್ಮಗಂಟು ರೋಗ(Lumpy Skin disease) ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಜಾನುವಾರುಗಳ ಆರೋಗ್ಯದ ಹಿತದೃಷ್ಟಿಯಿಂದ 2023ರ ಫೆಬ್ರವರಿ 28 ರ ಸಂಜೆ 6.00 ಗಂಟೆಯವರೆಗೆ ಜಿಲ್ಲೆಯಾದ್ಯಂತ ಜಾನುವಾರುಗಳ ಜಾತ್ರೆ, ಸಂತೆ, ಸಾಗಾಣಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧ ಮುಂದುವರೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಆದೇಶಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಈವರೆಗೂ 2370 ಜಾನುವಾರುಗಳಲ್ಲಿ ಈ ರೋಗವು ಕಂಡುಬಂದಿದ್ದು, 206 ಜಾನುವಾರುಗಳು ಮರಣಹೊಂದಿರುತ್ತವೆ. ಇದು ಒಂದು ವೈರಾಣುನಿಂದ ಹರಡುವ ರೋಗವಾಗಿದೆ.

ಪ್ರಮುಖವಾಗಿ ಸೊಳ್ಳೆ, ನೊಣ, ಉಣ್ಣೆ ಇತ್ಯಾದಿ ಕೀಟಗಳಿಂದ ಹರಡುತ್ತದೆ. ಈ ರೋಗವು ಕಾಣಿಸಿಕೊಂಡ ಜಾನುವಾರುಗಳು ರೋಗದಿಂದ ಸಾಕಷ್ಟು ಬಳಲುವುದರಿಂದ ಉತ್ಪಾದನೆ ಕಡಿಮೆಯಾಗುವುದಲ್ಲದೆ, ಕೆಲವೊಮ್ಮೆ ಮರಣ ಹೊಂದುತ್ತವೆ. ಇದರಿಂದ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 1,60,087 ಜಾನುವಾರುಗಳಿಗೆ ಲಸಿಕೆಯನ್ನು ನೀಡಲಾಗಿದ್ದು, ರೋಗ ಪೀಡಿತ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸಲಾಗಿದೆ.

ಜಿಲ್ಲೆಯಲ್ಲಿ ಹಲವೆಡೆ ಜಾನುವಾರು ಸಂತೆ/ಜಾತ್ರೆಗಳು ನಡೆಯಲಿದ್ದು, ಇವುಗಳಿಂದ ಜಾನುವಾರುಗಳ ಸಾಗಾಣಿಕೆ/ಚಲನವಲನದಿಂದ ಹಾಗೂ ಹಲವಾರು ಜಾನುವಾರುಗಳನ್ನು ಒಂದೆಡೆ ಸೇರಿಸುವುದರಿಂದ ರೋಗೋದ್ರೇಕವು ಹೆಚ್ಚಾಗುವ ಸಾಧ್ಯತೆ ಇರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸ್ತುತ 1,62,980 ದನ/ಎಮ್ಮೆಗಳಿದ್ದು, ರೋಗೋದ್ರೇಕವನ್ನು ನಿಯಂತ್ರಿಸದಿದ್ದಲ್ಲಿ ಸಾಕಷ್ಟು ಆರ್ಥಿಕ ನಷ್ಟ ಉಂಟಾಗುವ ಸಂಭವವಿರುವುದರಿಂದ ಜಿಲ್ಲೆಯಾದ್ಯಂತ ಜಾನುವಾರು ಜಾತ್ರೆ/ಸಂತೆಗಳನ್ನು ಎರಡು ತಿಂಗಳ ಅವಧಿಗೆ Karnataka Animal Diseases (Control Act), 1961 ರಡಿ ಮತ್ತು ಸಿಆರ್‌ಪಿಸಿ ಕಲಂ 144 ರ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ಮಾಡುವುದನ್ನು ನಿಷೇಧಿಸುವಂತೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

9 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

10 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

10 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

11 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

16 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

17 hours ago