ಜಿಲ್ಲೆಯಲ್ಲಿ ಜಾನುವಾರು ಸಂತೆ, ಜಾತ್ರೆ, ಸಾಗಾಣಿಕೆ ನಿಷೇಧವನ್ನು ಫೆಬ್ರವರಿ 28ರವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಕ್ಕಪಕ್ಕದ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಚರ್ಮಗಂಟು ರೋಗವು ಪೂರ್ತಿಯಾಗಿ ಹತೋಟಿಗೆ ಬಾರದೇ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ The Prevention and control of infectious and Contagious Diseases in Animals Act-2009 Section-12 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಾನುವಾರುಗಳಿಗೆ ಚರ್ಮಗಂಟು ರೋಗ(Lumpy Skin disease) ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಜಾನುವಾರುಗಳ ಆರೋಗ್ಯದ ಹಿತದೃಷ್ಟಿಯಿಂದ 2023ರ ಫೆಬ್ರವರಿ 28 ರ ಸಂಜೆ 6.00 ಗಂಟೆಯವರೆಗೆ ಜಿಲ್ಲೆಯಾದ್ಯಂತ ಜಾನುವಾರುಗಳ ಜಾತ್ರೆ, ಸಂತೆ, ಸಾಗಾಣಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧ ಮುಂದುವರೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಆದೇಶಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಈವರೆಗೂ 2370 ಜಾನುವಾರುಗಳಲ್ಲಿ ಈ ರೋಗವು ಕಂಡುಬಂದಿದ್ದು, 206 ಜಾನುವಾರುಗಳು ಮರಣಹೊಂದಿರುತ್ತವೆ. ಇದು ಒಂದು ವೈರಾಣುನಿಂದ ಹರಡುವ ರೋಗವಾಗಿದೆ.

ಪ್ರಮುಖವಾಗಿ ಸೊಳ್ಳೆ, ನೊಣ, ಉಣ್ಣೆ ಇತ್ಯಾದಿ ಕೀಟಗಳಿಂದ ಹರಡುತ್ತದೆ. ಈ ರೋಗವು ಕಾಣಿಸಿಕೊಂಡ ಜಾನುವಾರುಗಳು ರೋಗದಿಂದ ಸಾಕಷ್ಟು ಬಳಲುವುದರಿಂದ ಉತ್ಪಾದನೆ ಕಡಿಮೆಯಾಗುವುದಲ್ಲದೆ, ಕೆಲವೊಮ್ಮೆ ಮರಣ ಹೊಂದುತ್ತವೆ. ಇದರಿಂದ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 1,60,087 ಜಾನುವಾರುಗಳಿಗೆ ಲಸಿಕೆಯನ್ನು ನೀಡಲಾಗಿದ್ದು, ರೋಗ ಪೀಡಿತ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸಲಾಗಿದೆ.

ಜಿಲ್ಲೆಯಲ್ಲಿ ಹಲವೆಡೆ ಜಾನುವಾರು ಸಂತೆ/ಜಾತ್ರೆಗಳು ನಡೆಯಲಿದ್ದು, ಇವುಗಳಿಂದ ಜಾನುವಾರುಗಳ ಸಾಗಾಣಿಕೆ/ಚಲನವಲನದಿಂದ ಹಾಗೂ ಹಲವಾರು ಜಾನುವಾರುಗಳನ್ನು ಒಂದೆಡೆ ಸೇರಿಸುವುದರಿಂದ ರೋಗೋದ್ರೇಕವು ಹೆಚ್ಚಾಗುವ ಸಾಧ್ಯತೆ ಇರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸ್ತುತ 1,62,980 ದನ/ಎಮ್ಮೆಗಳಿದ್ದು, ರೋಗೋದ್ರೇಕವನ್ನು ನಿಯಂತ್ರಿಸದಿದ್ದಲ್ಲಿ ಸಾಕಷ್ಟು ಆರ್ಥಿಕ ನಷ್ಟ ಉಂಟಾಗುವ ಸಂಭವವಿರುವುದರಿಂದ ಜಿಲ್ಲೆಯಾದ್ಯಂತ ಜಾನುವಾರು ಜಾತ್ರೆ/ಸಂತೆಗಳನ್ನು ಎರಡು ತಿಂಗಳ ಅವಧಿಗೆ Karnataka Animal Diseases (Control Act), 1961 ರಡಿ ಮತ್ತು ಸಿಆರ್‌ಪಿಸಿ ಕಲಂ 144 ರ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ಮಾಡುವುದನ್ನು ನಿಷೇಧಿಸುವಂತೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

15 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

19 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

19 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

21 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

22 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

1 day ago