ಜಿಲ್ಲೆಯಲ್ಲಿ ಜಾನುವಾರು ಸಂತೆ, ಜಾತ್ರೆ, ಸಾಗಾಣಿಕೆ ನಿಷೇಧವನ್ನು ಫೆಬ್ರವರಿ 28ರವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಕ್ಕಪಕ್ಕದ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಚರ್ಮಗಂಟು ರೋಗವು ಪೂರ್ತಿಯಾಗಿ ಹತೋಟಿಗೆ ಬಾರದೇ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ The Prevention and control of infectious and Contagious Diseases in Animals Act-2009 Section-12 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಾನುವಾರುಗಳಿಗೆ ಚರ್ಮಗಂಟು ರೋಗ(Lumpy Skin disease) ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಜಾನುವಾರುಗಳ ಆರೋಗ್ಯದ ಹಿತದೃಷ್ಟಿಯಿಂದ 2023ರ ಫೆಬ್ರವರಿ 28 ರ ಸಂಜೆ 6.00 ಗಂಟೆಯವರೆಗೆ ಜಿಲ್ಲೆಯಾದ್ಯಂತ ಜಾನುವಾರುಗಳ ಜಾತ್ರೆ, ಸಂತೆ, ಸಾಗಾಣಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧ ಮುಂದುವರೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಆದೇಶಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಈವರೆಗೂ 2370 ಜಾನುವಾರುಗಳಲ್ಲಿ ಈ ರೋಗವು ಕಂಡುಬಂದಿದ್ದು, 206 ಜಾನುವಾರುಗಳು ಮರಣಹೊಂದಿರುತ್ತವೆ. ಇದು ಒಂದು ವೈರಾಣುನಿಂದ ಹರಡುವ ರೋಗವಾಗಿದೆ.

ಪ್ರಮುಖವಾಗಿ ಸೊಳ್ಳೆ, ನೊಣ, ಉಣ್ಣೆ ಇತ್ಯಾದಿ ಕೀಟಗಳಿಂದ ಹರಡುತ್ತದೆ. ಈ ರೋಗವು ಕಾಣಿಸಿಕೊಂಡ ಜಾನುವಾರುಗಳು ರೋಗದಿಂದ ಸಾಕಷ್ಟು ಬಳಲುವುದರಿಂದ ಉತ್ಪಾದನೆ ಕಡಿಮೆಯಾಗುವುದಲ್ಲದೆ, ಕೆಲವೊಮ್ಮೆ ಮರಣ ಹೊಂದುತ್ತವೆ. ಇದರಿಂದ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 1,60,087 ಜಾನುವಾರುಗಳಿಗೆ ಲಸಿಕೆಯನ್ನು ನೀಡಲಾಗಿದ್ದು, ರೋಗ ಪೀಡಿತ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸಲಾಗಿದೆ.

ಜಿಲ್ಲೆಯಲ್ಲಿ ಹಲವೆಡೆ ಜಾನುವಾರು ಸಂತೆ/ಜಾತ್ರೆಗಳು ನಡೆಯಲಿದ್ದು, ಇವುಗಳಿಂದ ಜಾನುವಾರುಗಳ ಸಾಗಾಣಿಕೆ/ಚಲನವಲನದಿಂದ ಹಾಗೂ ಹಲವಾರು ಜಾನುವಾರುಗಳನ್ನು ಒಂದೆಡೆ ಸೇರಿಸುವುದರಿಂದ ರೋಗೋದ್ರೇಕವು ಹೆಚ್ಚಾಗುವ ಸಾಧ್ಯತೆ ಇರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸ್ತುತ 1,62,980 ದನ/ಎಮ್ಮೆಗಳಿದ್ದು, ರೋಗೋದ್ರೇಕವನ್ನು ನಿಯಂತ್ರಿಸದಿದ್ದಲ್ಲಿ ಸಾಕಷ್ಟು ಆರ್ಥಿಕ ನಷ್ಟ ಉಂಟಾಗುವ ಸಂಭವವಿರುವುದರಿಂದ ಜಿಲ್ಲೆಯಾದ್ಯಂತ ಜಾನುವಾರು ಜಾತ್ರೆ/ಸಂತೆಗಳನ್ನು ಎರಡು ತಿಂಗಳ ಅವಧಿಗೆ Karnataka Animal Diseases (Control Act), 1961 ರಡಿ ಮತ್ತು ಸಿಆರ್‌ಪಿಸಿ ಕಲಂ 144 ರ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ಮಾಡುವುದನ್ನು ನಿಷೇಧಿಸುವಂತೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

3 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

4 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

6 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

9 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

20 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

21 hours ago