ಜಿಲ್ಲೆಯಲ್ಲಿ ತೀವ್ರಗೊಂಡ ಬಿಸಿ ಗಾಳಿ ಮತ್ತು ಬಿಸಿಲು: ಬಿಸಿಲಿನ ತಾಪದಿಂದ ಪಾರಾಗಲು ಮುಂಜಾಗ್ರತಾ ಕ್ರಮ ಇಲ್ಲಿದೆ

ಹವಾಮಾನ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸ್ತುತ ದಿನಗಳಲ್ಲಿ ಉಷ್ಣಾಂಶವು ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾಗುವ ಬಗ್ಗೆ ವರದಿ ಮಾಡಿದ್ದು ಅತಿಯಾದ ಬಿಸಿಲು ಮತ್ತು ಬಿಸಿ ಗಾಳಿ ಉಂಟಾಗಬಹುದೆಂದು ಮುನ್ಸೂಚನೆ ನೀಡಿದ್ದು ಇದರಿಂದ ಜಿಲ್ಲೆಯ ಸಾರ್ವಜನಿಕರು ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಈ ಕೆಳಕಂಡ ಕ್ರಮಗಳನ್ನು ಅನುಸರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು(Do’s)ಮತ್ತು ಏನು ಮಾಡಬಾರದು(Don’t)ಎಂಬ ವಿಷಯಗಳ ಕುರಿತು ಮುಂಜಾಗ್ರತ ಕ್ರಮ ವಹಿಸಬೇಕಾಗಿ ಕೋರಿದ್ದಾರೆ.

ಏನು ಮಾಡಬೇಕು(Do’s)?

1) ಸಾರ್ವಜನಿಕರು ರೇಡಿಯೋ ಟಿವಿ ದಿನಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಮುನ್ಸೂಚನೆಗಳನ್ನು ಪಡೆದುಕೊಳ್ಳುವುದು.

2) ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯುವುದು.

3)ಹಗುರವಾದ ತಿಳಿ ಬಣ್ಣದ ತಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸುವುದು.

4) ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋಪಿ, ಬೂಟು ಅಥವಾ ಚಪ್ಪಲಿಗಳನ್ನು ಬಳಸುವುದು.

5) ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದಲ್ಲಿ ಕುಡಿಯುವ ನೀರನ್ನು ತೆಗೆದುಕೊಂಡು ಹೋಗುವುದು.

6) ಹೊರಗಡೆ ಕೆಲಸ ಮಾಡುತ್ತಿದ್ದವರು ಟೋಪಿ ಅಥವಾ ಛತ್ರಿಯನ್ನು ಬಳಸುವುದು ಮತ್ತು ತಲೆ ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸುವುದು.

7) ಓ. ಆರ್. ಎಸ್ ಮನೆಯಲ್ಲಿ ತಯಾರಿಸಿದ ಲಸ್ಸಿ ಶರಬತ್, ನಿಂಬೆ ನೀರು, ಮಜ್ಜಿಗೆಗಳನ್ನು ಬಳಸುವುದು.

8) ಮನೆಯನ್ನು ತಂಪಾಗಿಸಿಕೊಳ್ಳುವುದು, ಒದ್ದೆಯಾದ ಬಟ್ಟೆಗಳನ್ನು ಬಳಸುವುದು ಮತ್ತು ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡುವುದು ಹಾಗೂ ತಂಪಾದ ಸಮಯದಲ್ಲಿ ಕೆಲಸ ಮಾಡುವುದು.

9) ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರ ಕಡೆಗೆ ಹೆಚ್ಚಿನ ಗಮನ ವಹಿಸುವುದು.

ಏನು ಮಾಡಬಾರದು(Don’ts)

1) ಮಕ್ಕಳು ಸಾಕುಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಬಾರದು, ವಾಹನಗಳ ಹತ್ತಿರ ಬಿಡಬೇಡಿ. ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 3:00 ಗಂಟೆಯ ನಡುವೆ ಬಿಸಿಲಿಗೆ ಹೋಗುವುದು ತಪ್ಪಿಸಿ.

2) ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಿ.

3) ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ, ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ಕೆಲಸ ಮಾಡುವುದನ್ನು ತಪ್ಪಿಸಿ.

4) ಅಡುಗೆ ಪ್ರದೇಶವನ್ನು ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆಯುವುದು.

5) ದೇಹವನ್ನು ನಿರ್ಜಲೀಕರಣ ಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯ, ಆಹಾರ ಹಾಗೂ ಹಳಸಿದ ಆಹಾರವನ್ನು ಸೇವಿಸಬಾರದು ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

5 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

16 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

17 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

17 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

19 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

22 hours ago