ಜಿಲ್ಲೆಯಲ್ಲಿ ತೀವ್ರಗೊಂಡ ಬಿಸಿ ಗಾಳಿ ಮತ್ತು ಬಿಸಿಲು: ಬಿಸಿಲಿನ ತಾಪದಿಂದ ಪಾರಾಗಲು ಮುಂಜಾಗ್ರತಾ ಕ್ರಮ ಇಲ್ಲಿದೆ

ಹವಾಮಾನ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸ್ತುತ ದಿನಗಳಲ್ಲಿ ಉಷ್ಣಾಂಶವು ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾಗುವ ಬಗ್ಗೆ ವರದಿ ಮಾಡಿದ್ದು ಅತಿಯಾದ ಬಿಸಿಲು ಮತ್ತು ಬಿಸಿ ಗಾಳಿ ಉಂಟಾಗಬಹುದೆಂದು ಮುನ್ಸೂಚನೆ ನೀಡಿದ್ದು ಇದರಿಂದ ಜಿಲ್ಲೆಯ ಸಾರ್ವಜನಿಕರು ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಈ ಕೆಳಕಂಡ ಕ್ರಮಗಳನ್ನು ಅನುಸರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು(Do’s)ಮತ್ತು ಏನು ಮಾಡಬಾರದು(Don’t)ಎಂಬ ವಿಷಯಗಳ ಕುರಿತು ಮುಂಜಾಗ್ರತ ಕ್ರಮ ವಹಿಸಬೇಕಾಗಿ ಕೋರಿದ್ದಾರೆ.

ಏನು ಮಾಡಬೇಕು(Do’s)?

1) ಸಾರ್ವಜನಿಕರು ರೇಡಿಯೋ ಟಿವಿ ದಿನಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಮುನ್ಸೂಚನೆಗಳನ್ನು ಪಡೆದುಕೊಳ್ಳುವುದು.

2) ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯುವುದು.

3)ಹಗುರವಾದ ತಿಳಿ ಬಣ್ಣದ ತಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸುವುದು.

4) ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋಪಿ, ಬೂಟು ಅಥವಾ ಚಪ್ಪಲಿಗಳನ್ನು ಬಳಸುವುದು.

5) ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದಲ್ಲಿ ಕುಡಿಯುವ ನೀರನ್ನು ತೆಗೆದುಕೊಂಡು ಹೋಗುವುದು.

6) ಹೊರಗಡೆ ಕೆಲಸ ಮಾಡುತ್ತಿದ್ದವರು ಟೋಪಿ ಅಥವಾ ಛತ್ರಿಯನ್ನು ಬಳಸುವುದು ಮತ್ತು ತಲೆ ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸುವುದು.

7) ಓ. ಆರ್. ಎಸ್ ಮನೆಯಲ್ಲಿ ತಯಾರಿಸಿದ ಲಸ್ಸಿ ಶರಬತ್, ನಿಂಬೆ ನೀರು, ಮಜ್ಜಿಗೆಗಳನ್ನು ಬಳಸುವುದು.

8) ಮನೆಯನ್ನು ತಂಪಾಗಿಸಿಕೊಳ್ಳುವುದು, ಒದ್ದೆಯಾದ ಬಟ್ಟೆಗಳನ್ನು ಬಳಸುವುದು ಮತ್ತು ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡುವುದು ಹಾಗೂ ತಂಪಾದ ಸಮಯದಲ್ಲಿ ಕೆಲಸ ಮಾಡುವುದು.

9) ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರ ಕಡೆಗೆ ಹೆಚ್ಚಿನ ಗಮನ ವಹಿಸುವುದು.

ಏನು ಮಾಡಬಾರದು(Don’ts)

1) ಮಕ್ಕಳು ಸಾಕುಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಬಾರದು, ವಾಹನಗಳ ಹತ್ತಿರ ಬಿಡಬೇಡಿ. ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 3:00 ಗಂಟೆಯ ನಡುವೆ ಬಿಸಿಲಿಗೆ ಹೋಗುವುದು ತಪ್ಪಿಸಿ.

2) ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಿ.

3) ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ, ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ಕೆಲಸ ಮಾಡುವುದನ್ನು ತಪ್ಪಿಸಿ.

4) ಅಡುಗೆ ಪ್ರದೇಶವನ್ನು ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆಯುವುದು.

5) ದೇಹವನ್ನು ನಿರ್ಜಲೀಕರಣ ಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯ, ಆಹಾರ ಹಾಗೂ ಹಳಸಿದ ಆಹಾರವನ್ನು ಸೇವಿಸಬಾರದು ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

1 hour ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

3 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

3 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

4 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

8 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

9 hours ago