ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕು ವ್ಯಾಪ್ತಿಯ ರೈತ ಬಾಂಧವರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ಸುಮಾರು 50-60 ವರ್ಷಗಳಿಂದಲೂ, ಹಿಡುವಳಿ ಜಮೀನುಗಳ ಖಾತೆದಾರರು ನಿಧನ ಹೊಂದಿದ್ದರೂ ಸಹ ವಾರಸುದಾರರಿಗೆ ಖಾತೆಯಾಗದೇ ಇರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ.
ಈ ಬಗ್ಗೆ ವಿಶೇಷ ಆಂದೋಲನದ ರೀತಿಯಲ್ಲಿ ಬಾಕಿ ಇರುವ ಎಲ್ಲಾ ಫವತಿ ಖಾತೆ ಪ್ರಕರಣಗಳನ್ನು ವಿಲೇವಾರಿ ಮಾಡಲು ಜಿಲ್ಲಾಡಳಿತದಿಂದ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಯಾವುದೇ ತಾಲ್ಲೂಕಿನಲ್ಲಿ ಫವತಿ ಖಾತೆಯಾಗದೆ ಇರುವ ಹಕ್ಕುದಾರರು ಸರ್ಕಾರದ ಯಾವುದೇ ಯೋಜನೆಗಳನ್ನು ರೈತರು ಪಡೆಯಲು ಸಾಧ್ಯವಾಗದೆ ಆರ್ಥಿಕ ನಷ್ಟವನ್ನು ಅನುಭವಿಸುತ್ತಿರುತ್ತಾರೆ. ಸರ್ಕಾರದ ಮಹತ್ವ ಯೋಜನೆಗಳಾದ ಪಿ.ಎಂ.ಕಿಸಾನ್ ಯೋಜನೆ, ಬರ, ಅತಿವೃಷ್ಟಿ ಪರಿಹಾರ ಹಾಗೂ ಇನ್ನುಳಿದ ಸರ್ಕಾರದ ಯಾವುದೇ ಯೋಜನೆಗಳ ಸವಲತ್ತುಗಳನ್ನು ಫವತಿ ಖಾತೆ ಬದಲಾವಣೆಯಾಗದೆ ಯಾವುದೇ ಪರಿಹಾರವನ್ನು ಪಡೆಯಲು ರೈತರಿಗೆ ಸಾಧ್ಯವಾಗುತ್ತಿರುವುದಿಲ್ಲ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಪ್ರತಿ ನಾಡಕಚೇರಿ ವ್ಯಾಪ್ತಿಯ ಕೇಂದ್ರ ಸ್ಥಾನದಲ್ಲಿ ಫವತಿ ವಾರಸು ಖಾತೆ ಆಂದೋಲನ ಕಾರ್ಯಕ್ರಮವನ್ನು 2024 ರ ಜನವರಿ 05 ರಿಂದ ಫೆಬ್ರವರಿ 05 ರ ವರೆಗೆ ಹಮ್ಮಿಕೊಳ್ಳಲಾಗಿದೆ.
ಖಾತೆ ಬದಲಾವಣೆಗೆ ಅರ್ಜಿಯೊಂದಿಗೆ ಅರ್ಜಿದಾರರ ಆಧಾರ್ ಕಾರ್ಡ್ (ನೀಡಲು ಒಪ್ಪಿದಲ್ಲಿ), ಗಣಕೀಕೃತ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಪ್ರಮಾಣ ಪತ್ರ ( affidavit) ಇನ್ನಿತರೆ ದಾಖಲಾತಿಗಳು (ಅಗತ್ಯವಿದ್ದಲ್ಲಿ) ಸಲ್ಲಿಸಬೇಕು.
ರೈತರು ದಾಖಲಾತಿಗಳೊಂದಿಗೆ ಸಂಬಂಧಿಸಿದ ತಹಶೀಲ್ದಾರ್, ಗ್ರೇಡ್-2 ತಹಶೀಲ್ದಾರ್, ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಅಥವಾ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸುವ ಮೂಲಕ ಸದುಪಯೋಗ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…