ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕು ವ್ಯಾಪ್ತಿಯ ರೈತ ಬಾಂಧವರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ಸುಮಾರು 50-60 ವರ್ಷಗಳಿಂದಲೂ, ಹಿಡುವಳಿ ಜಮೀನುಗಳ ಖಾತೆದಾರರು ನಿಧನ ಹೊಂದಿದ್ದರೂ ಸಹ ವಾರಸುದಾರರಿಗೆ ಖಾತೆಯಾಗದೇ ಇರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ.
ಈ ಬಗ್ಗೆ ವಿಶೇಷ ಆಂದೋಲನದ ರೀತಿಯಲ್ಲಿ ಬಾಕಿ ಇರುವ ಎಲ್ಲಾ ಫವತಿ ಖಾತೆ ಪ್ರಕರಣಗಳನ್ನು ವಿಲೇವಾರಿ ಮಾಡಲು ಜಿಲ್ಲಾಡಳಿತದಿಂದ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಯಾವುದೇ ತಾಲ್ಲೂಕಿನಲ್ಲಿ ಫವತಿ ಖಾತೆಯಾಗದೆ ಇರುವ ಹಕ್ಕುದಾರರು ಸರ್ಕಾರದ ಯಾವುದೇ ಯೋಜನೆಗಳನ್ನು ರೈತರು ಪಡೆಯಲು ಸಾಧ್ಯವಾಗದೆ ಆರ್ಥಿಕ ನಷ್ಟವನ್ನು ಅನುಭವಿಸುತ್ತಿರುತ್ತಾರೆ. ಸರ್ಕಾರದ ಮಹತ್ವ ಯೋಜನೆಗಳಾದ ಪಿ.ಎಂ.ಕಿಸಾನ್ ಯೋಜನೆ, ಬರ, ಅತಿವೃಷ್ಟಿ ಪರಿಹಾರ ಹಾಗೂ ಇನ್ನುಳಿದ ಸರ್ಕಾರದ ಯಾವುದೇ ಯೋಜನೆಗಳ ಸವಲತ್ತುಗಳನ್ನು ಫವತಿ ಖಾತೆ ಬದಲಾವಣೆಯಾಗದೆ ಯಾವುದೇ ಪರಿಹಾರವನ್ನು ಪಡೆಯಲು ರೈತರಿಗೆ ಸಾಧ್ಯವಾಗುತ್ತಿರುವುದಿಲ್ಲ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಪ್ರತಿ ನಾಡಕಚೇರಿ ವ್ಯಾಪ್ತಿಯ ಕೇಂದ್ರ ಸ್ಥಾನದಲ್ಲಿ ಫವತಿ ವಾರಸು ಖಾತೆ ಆಂದೋಲನ ಕಾರ್ಯಕ್ರಮವನ್ನು 2024 ರ ಜನವರಿ 05 ರಿಂದ ಫೆಬ್ರವರಿ 05 ರ ವರೆಗೆ ಹಮ್ಮಿಕೊಳ್ಳಲಾಗಿದೆ.
ಖಾತೆ ಬದಲಾವಣೆಗೆ ಅರ್ಜಿಯೊಂದಿಗೆ ಅರ್ಜಿದಾರರ ಆಧಾರ್ ಕಾರ್ಡ್ (ನೀಡಲು ಒಪ್ಪಿದಲ್ಲಿ), ಗಣಕೀಕೃತ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಪ್ರಮಾಣ ಪತ್ರ ( affidavit) ಇನ್ನಿತರೆ ದಾಖಲಾತಿಗಳು (ಅಗತ್ಯವಿದ್ದಲ್ಲಿ) ಸಲ್ಲಿಸಬೇಕು.
ರೈತರು ದಾಖಲಾತಿಗಳೊಂದಿಗೆ ಸಂಬಂಧಿಸಿದ ತಹಶೀಲ್ದಾರ್, ಗ್ರೇಡ್-2 ತಹಶೀಲ್ದಾರ್, ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಅಥವಾ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸುವ ಮೂಲಕ ಸದುಪಯೋಗ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…