ಜಿಲ್ಲೆಯಲ್ಲಿ ನಾಳೆಯಿಂದ ಫವತಿ ಖಾತೆ ವಿಶೇಷ ಆಂದೋಲನ: ರೈತರು ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಕರೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕು ವ್ಯಾಪ್ತಿಯ ರೈತ ಬಾಂಧವರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ಸುಮಾರು 50-60 ವರ್ಷಗಳಿಂದಲೂ, ಹಿಡುವಳಿ ಜಮೀನುಗಳ ಖಾತೆದಾರರು ನಿಧನ ಹೊಂದಿದ್ದರೂ ಸಹ ವಾರಸುದಾರರಿಗೆ ಖಾತೆಯಾಗದೇ ಇರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ.

ಈ ಬಗ್ಗೆ ವಿಶೇಷ ಆಂದೋಲನದ ರೀತಿಯಲ್ಲಿ ಬಾಕಿ ಇರುವ ಎಲ್ಲಾ ಫವತಿ ಖಾತೆ ಪ್ರಕರಣಗಳನ್ನು ವಿಲೇವಾರಿ ಮಾಡಲು ಜಿಲ್ಲಾಡಳಿತದಿಂದ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಯಾವುದೇ ತಾಲ್ಲೂಕಿನಲ್ಲಿ ಫವತಿ ಖಾತೆಯಾಗದೆ ಇರುವ ಹಕ್ಕುದಾರರು ಸರ್ಕಾರದ ಯಾವುದೇ ಯೋಜನೆಗಳನ್ನು ರೈತರು ಪಡೆಯಲು ಸಾಧ್ಯವಾಗದೆ ಆರ್ಥಿಕ ನಷ್ಟವನ್ನು ಅನುಭವಿಸುತ್ತಿರುತ್ತಾರೆ. ಸರ್ಕಾರದ ಮಹತ್ವ ಯೋಜನೆಗಳಾದ ಪಿ.ಎಂ.ಕಿಸಾನ್ ಯೋಜನೆ, ಬರ, ಅತಿವೃಷ್ಟಿ ಪರಿಹಾರ ಹಾಗೂ ಇನ್ನುಳಿದ ಸರ್ಕಾರದ ಯಾವುದೇ ಯೋಜನೆಗಳ ಸವಲತ್ತುಗಳನ್ನು ಫವತಿ ಖಾತೆ ಬದಲಾವಣೆಯಾಗದೆ ಯಾವುದೇ ಪರಿಹಾರವನ್ನು ಪಡೆಯಲು ರೈತರಿಗೆ ಸಾಧ್ಯವಾಗುತ್ತಿರುವುದಿಲ್ಲ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಪ್ರತಿ ನಾಡಕಚೇರಿ ವ್ಯಾಪ್ತಿಯ ಕೇಂದ್ರ ಸ್ಥಾನದಲ್ಲಿ ಫವತಿ ವಾರಸು ಖಾತೆ ಆಂದೋಲನ ಕಾರ್ಯಕ್ರಮವನ್ನು 2024 ರ ಜನವರಿ 05 ರಿಂದ ಫೆಬ್ರವರಿ 05 ರ ವರೆಗೆ ಹಮ್ಮಿಕೊಳ್ಳಲಾಗಿದೆ.

ಖಾತೆ ಬದಲಾವಣೆಗೆ ಅರ್ಜಿಯೊಂದಿಗೆ ಅರ್ಜಿದಾರರ ಆಧಾರ್ ಕಾರ್ಡ್ (ನೀಡಲು ಒಪ್ಪಿದಲ್ಲಿ), ಗಣಕೀಕೃತ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಪ್ರಮಾಣ ಪತ್ರ ( affidavit) ಇನ್ನಿತರೆ ದಾಖಲಾತಿಗಳು (ಅಗತ್ಯವಿದ್ದಲ್ಲಿ) ಸಲ್ಲಿಸಬೇಕು.

ರೈತರು ದಾಖಲಾತಿಗಳೊಂದಿಗೆ ಸಂಬಂಧಿಸಿದ ತಹಶೀಲ್ದಾರ್, ಗ್ರೇಡ್-2 ತಹಶೀಲ್ದಾರ್, ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಅಥವಾ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸುವ ಮೂಲಕ  ಸದುಪಯೋಗ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

2 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

10 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

11 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago