ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕು ವ್ಯಾಪ್ತಿಯ ರೈತ ಬಾಂಧವರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ಸುಮಾರು 50-60 ವರ್ಷಗಳಿಂದಲೂ, ಹಿಡುವಳಿ ಜಮೀನುಗಳ ಖಾತೆದಾರರು ನಿಧನ ಹೊಂದಿದ್ದರೂ ಸಹ ವಾರಸುದಾರರಿಗೆ ಖಾತೆಯಾಗದೇ ಇರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ.
ಈ ಬಗ್ಗೆ ವಿಶೇಷ ಆಂದೋಲನದ ರೀತಿಯಲ್ಲಿ ಬಾಕಿ ಇರುವ ಎಲ್ಲಾ ಫವತಿ ಖಾತೆ ಪ್ರಕರಣಗಳನ್ನು ವಿಲೇವಾರಿ ಮಾಡಲು ಜಿಲ್ಲಾಡಳಿತದಿಂದ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಯಾವುದೇ ತಾಲ್ಲೂಕಿನಲ್ಲಿ ಫವತಿ ಖಾತೆಯಾಗದೆ ಇರುವ ಹಕ್ಕುದಾರರು ಸರ್ಕಾರದ ಯಾವುದೇ ಯೋಜನೆಗಳನ್ನು ರೈತರು ಪಡೆಯಲು ಸಾಧ್ಯವಾಗದೆ ಆರ್ಥಿಕ ನಷ್ಟವನ್ನು ಅನುಭವಿಸುತ್ತಿರುತ್ತಾರೆ. ಸರ್ಕಾರದ ಮಹತ್ವ ಯೋಜನೆಗಳಾದ ಪಿ.ಎಂ.ಕಿಸಾನ್ ಯೋಜನೆ, ಬರ, ಅತಿವೃಷ್ಟಿ ಪರಿಹಾರ ಹಾಗೂ ಇನ್ನುಳಿದ ಸರ್ಕಾರದ ಯಾವುದೇ ಯೋಜನೆಗಳ ಸವಲತ್ತುಗಳನ್ನು ಫವತಿ ಖಾತೆ ಬದಲಾವಣೆಯಾಗದೆ ಯಾವುದೇ ಪರಿಹಾರವನ್ನು ಪಡೆಯಲು ರೈತರಿಗೆ ಸಾಧ್ಯವಾಗುತ್ತಿರುವುದಿಲ್ಲ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಪ್ರತಿ ನಾಡಕಚೇರಿ ವ್ಯಾಪ್ತಿಯ ಕೇಂದ್ರ ಸ್ಥಾನದಲ್ಲಿ ಫವತಿ ವಾರಸು ಖಾತೆ ಆಂದೋಲನ ಕಾರ್ಯಕ್ರಮವನ್ನು 2024 ರ ಜನವರಿ 05 ರಿಂದ ಫೆಬ್ರವರಿ 05 ರ ವರೆಗೆ ಹಮ್ಮಿಕೊಳ್ಳಲಾಗಿದೆ.
ಖಾತೆ ಬದಲಾವಣೆಗೆ ಅರ್ಜಿಯೊಂದಿಗೆ ಅರ್ಜಿದಾರರ ಆಧಾರ್ ಕಾರ್ಡ್ (ನೀಡಲು ಒಪ್ಪಿದಲ್ಲಿ), ಗಣಕೀಕೃತ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಪ್ರಮಾಣ ಪತ್ರ ( affidavit) ಇನ್ನಿತರೆ ದಾಖಲಾತಿಗಳು (ಅಗತ್ಯವಿದ್ದಲ್ಲಿ) ಸಲ್ಲಿಸಬೇಕು.
ರೈತರು ದಾಖಲಾತಿಗಳೊಂದಿಗೆ ಸಂಬಂಧಿಸಿದ ತಹಶೀಲ್ದಾರ್, ಗ್ರೇಡ್-2 ತಹಶೀಲ್ದಾರ್, ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಅಥವಾ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸುವ ಮೂಲಕ ಸದುಪಯೋಗ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…