ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ರಸ್ತೆ ಅಪಘಾತದಿಂದ 297 ಜನ ಸಾವು – 38 ಬ್ಲಾಕ್ ಸ್ಪಾಟ್ ಗುರುತು- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ

ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ಕ್ರಮಬದ್ಧ ಯೋಜನೆ ರೂಪಿಸಿ ಕಾರ್ಯರೂಪಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರಕ್ಕೆ ಹೊಂದಿಕೊಂಡಿರುವ ಜಿಲ್ಲೆಯಾದ್ದರಿಂದ ವಾಹನ ಸಂಚಾರ ದಟ್ಟಣೆ ಹೆಚ್ಚಿರುತ್ತದೆ. ನೆಲಮಂಗಲ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚು ಅಪಘಾತಗಳಾಗುತ್ತಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾರ್ವಜನಿಕ ಸಂಚಾರ ಹೆಚ್ಚಿರುವ, ಶಾಲಾ ಕಾಲೇಜು, ಅಪಘಾತ ವಲಯಗಳಲ್ಲಿ ಶೀಘ್ರ ಸ್ಕೈ ವಾಕ್ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನೆಲಮಂಗಲ ಸರ್ಕಲ್ ನಲ್ಲಿ ವಾಹನ ಸಂಚಾರ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು ಕುಣಿಗಲ್ ಗೆ ಹೋಗುವ ಕಡೆ ರಸ್ತೆ ಅಗಲೀಕರಣ ಮಾಡಿದರೆ ವಾಹನ ಸಂಚಾರ ಸುಗಮವಾಗುತ್ತದೆ ಎಂದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೈನ್ ಬೋರ್ಡ್ಗಳನ್ನು ಅಳವಡಿಸಬೇಕು, ರಸ್ತೆಗಳಲ್ಲಿ ಅಮ್ಸ್ ಗಳನ್ನು ಹಾಕಬೇಕು, ಸರ್ವಿಸ್ ರಸ್ತೆಗಳಲ್ಲಿ ಅತಿಕ್ರಮಣವಾಗಿ ಹಾಕಿರುವ ಅಂಗಡಿಗಳು, ವಾಹನ ಪಾರ್ಕಿಂಗ್ ತೆರವುಗೊಳಿಸಲು ಸೂಚಿಸಿದರು.

ಜಿಲ್ಲೆಯಲ್ಲಿ ಅನಧಿಕೃತವಾಗಿ ಎಲ್ಲೆಂದರಲ್ಲಿ ಹಾಕಿರುವ ಜಾಹಿರಾತು ಫಲಕಗಳನ್ನು ತೆರವುಗೊಳಿಸಿ, ಯಾರ ಒತ್ತಡಕ್ಕೂ ಮಣಿಯಬೇಡಿ. ತೆರವುಗೊಳಿಸುವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ರಕ್ಷಣೆ ಪಡೆಯಿರಿ. ಯಾವುದಾದರು ಬೆದರಿಕೆ ಕರೆಗಳು ಬಂದಲ್ಲಿ ದೂರು ನೀಡಿ ಎಂದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಕಸದ ತ್ಯಾಜ್ಯ, ಹಳೇ ಕಟ್ಟಡಗಳ ತ್ಯಾಜ್ಯ ಸುರಿಯುತ್ತಿದ್ದು ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದರು.

*ರಸ್ತೆ ಅಪಘಾತದಿಂದ 297 ಸಾವು, ಹೆಚ್ಚು ಅಪಘಾತಗಳು ಸಂಭವಿಸುವ 38 ಬ್ಲಾಕ್ ಸ್ಪಾಟ್ ಗುರುತು-ಎಸ್ಪಿ*

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ಅವರು ಮಾತನಾಡಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ರಸ್ತೆ ಅಪಘಾತಗಳಿಂದ 297 ಜನ ಸಾವನ್ನಪ್ಪಿದ್ದಾರೆ. ಹೆಚ್ಚು ಅಪಘಾತಗಳು ಸಂಭವಿಸುವ 38 ಅಪಾಯಕಾರಿ ಸ್ಥಳ(ಬ್ಲಾಕ್ ಸ್ಪಾಟ್)ಗಳನ್ನು ಗುರುತಿಸಲಾಗಿದ್ದು ಅದರಲ್ಲಿ 35 ರಾಷ್ಟ್ರೀಯ ಹೆದ್ದಾರಿ ಅಪಾಯಕಾರಿ ಸ್ಥಳಗಳಾದರೆ, 3 ರಾಜ್ಯ ಹೆದ್ದಾರಿಗಳಾಗಿವೆ.

ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ತಾಲ್ಲೂಕಿನ ಕುಲುವನಹಳ್ಳಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತವೆ. ರಸ್ತೆಯಲ್ಲಿ ಶಾಲೆ ಒಂದು ಬದಿ ಆದರೆ ಊರು ಮತ್ತೊಂದು ಬದಿ , ದಿನನಿತ್ಯ ರಸ್ತೆ ದಾಟುವಾಗ ವಾಹಾನಗಳ ವೇಗದ ಚಾಲನೆ ಯಿಂದ ಅಫಘಾತಗಳು ಸಂಭವಿಸುತ್ತಿವೆ. ಹಾಗಾಗಿ ನಾವೆಲ್ಲ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ.

ಟೋಲ್ ಗಳಲ್ಲಿ ವಿಐಪಿಗಳಿಗೆ ಹಾಗೂ ಅಂಬುಲೆನ್ಸ್ ಓಡಾಟಕ್ಕೆ ಮೀಸಲಿರುವ ಲೈನ್ ಗಳಲ್ಲಿ ಯಾವುದೇ ಕಾರಣಕ್ಕೂ ಸಾರ್ವಜನಿಕರ ವಾಹನಗಳಿಗೆ ಪ್ರವೇಶ ಕಲ್ಪಿಸಬೇಡಿ ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಪಿಡಬ್ಲ್ಯೂಡಿ ನ ಎಕ್ಸಿಕ್ಯುಟಿವ್ ಇಂಜಿನಿಯರ್ ಚಂದ್ರಶೇಖರ್, ಪ್ರೋಫೆಸರ್ ಅರ್ಚನ, ತಾಲೂಕು ಟ್ರಾಫಿಕ್ ಇನ್ಸ್ಪೆಕ್ಟರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

9 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

12 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

12 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

23 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

24 hours ago