ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ರಸ್ತೆ ಅಪಘಾತದಿಂದ 297 ಜನ ಸಾವು – 38 ಬ್ಲಾಕ್ ಸ್ಪಾಟ್ ಗುರುತು- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ

ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ಕ್ರಮಬದ್ಧ ಯೋಜನೆ ರೂಪಿಸಿ ಕಾರ್ಯರೂಪಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರಕ್ಕೆ ಹೊಂದಿಕೊಂಡಿರುವ ಜಿಲ್ಲೆಯಾದ್ದರಿಂದ ವಾಹನ ಸಂಚಾರ ದಟ್ಟಣೆ ಹೆಚ್ಚಿರುತ್ತದೆ. ನೆಲಮಂಗಲ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚು ಅಪಘಾತಗಳಾಗುತ್ತಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾರ್ವಜನಿಕ ಸಂಚಾರ ಹೆಚ್ಚಿರುವ, ಶಾಲಾ ಕಾಲೇಜು, ಅಪಘಾತ ವಲಯಗಳಲ್ಲಿ ಶೀಘ್ರ ಸ್ಕೈ ವಾಕ್ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನೆಲಮಂಗಲ ಸರ್ಕಲ್ ನಲ್ಲಿ ವಾಹನ ಸಂಚಾರ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು ಕುಣಿಗಲ್ ಗೆ ಹೋಗುವ ಕಡೆ ರಸ್ತೆ ಅಗಲೀಕರಣ ಮಾಡಿದರೆ ವಾಹನ ಸಂಚಾರ ಸುಗಮವಾಗುತ್ತದೆ ಎಂದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೈನ್ ಬೋರ್ಡ್ಗಳನ್ನು ಅಳವಡಿಸಬೇಕು, ರಸ್ತೆಗಳಲ್ಲಿ ಅಮ್ಸ್ ಗಳನ್ನು ಹಾಕಬೇಕು, ಸರ್ವಿಸ್ ರಸ್ತೆಗಳಲ್ಲಿ ಅತಿಕ್ರಮಣವಾಗಿ ಹಾಕಿರುವ ಅಂಗಡಿಗಳು, ವಾಹನ ಪಾರ್ಕಿಂಗ್ ತೆರವುಗೊಳಿಸಲು ಸೂಚಿಸಿದರು.

ಜಿಲ್ಲೆಯಲ್ಲಿ ಅನಧಿಕೃತವಾಗಿ ಎಲ್ಲೆಂದರಲ್ಲಿ ಹಾಕಿರುವ ಜಾಹಿರಾತು ಫಲಕಗಳನ್ನು ತೆರವುಗೊಳಿಸಿ, ಯಾರ ಒತ್ತಡಕ್ಕೂ ಮಣಿಯಬೇಡಿ. ತೆರವುಗೊಳಿಸುವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ರಕ್ಷಣೆ ಪಡೆಯಿರಿ. ಯಾವುದಾದರು ಬೆದರಿಕೆ ಕರೆಗಳು ಬಂದಲ್ಲಿ ದೂರು ನೀಡಿ ಎಂದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಕಸದ ತ್ಯಾಜ್ಯ, ಹಳೇ ಕಟ್ಟಡಗಳ ತ್ಯಾಜ್ಯ ಸುರಿಯುತ್ತಿದ್ದು ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದರು.

*ರಸ್ತೆ ಅಪಘಾತದಿಂದ 297 ಸಾವು, ಹೆಚ್ಚು ಅಪಘಾತಗಳು ಸಂಭವಿಸುವ 38 ಬ್ಲಾಕ್ ಸ್ಪಾಟ್ ಗುರುತು-ಎಸ್ಪಿ*

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ಅವರು ಮಾತನಾಡಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ರಸ್ತೆ ಅಪಘಾತಗಳಿಂದ 297 ಜನ ಸಾವನ್ನಪ್ಪಿದ್ದಾರೆ. ಹೆಚ್ಚು ಅಪಘಾತಗಳು ಸಂಭವಿಸುವ 38 ಅಪಾಯಕಾರಿ ಸ್ಥಳ(ಬ್ಲಾಕ್ ಸ್ಪಾಟ್)ಗಳನ್ನು ಗುರುತಿಸಲಾಗಿದ್ದು ಅದರಲ್ಲಿ 35 ರಾಷ್ಟ್ರೀಯ ಹೆದ್ದಾರಿ ಅಪಾಯಕಾರಿ ಸ್ಥಳಗಳಾದರೆ, 3 ರಾಜ್ಯ ಹೆದ್ದಾರಿಗಳಾಗಿವೆ.

ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ತಾಲ್ಲೂಕಿನ ಕುಲುವನಹಳ್ಳಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತವೆ. ರಸ್ತೆಯಲ್ಲಿ ಶಾಲೆ ಒಂದು ಬದಿ ಆದರೆ ಊರು ಮತ್ತೊಂದು ಬದಿ , ದಿನನಿತ್ಯ ರಸ್ತೆ ದಾಟುವಾಗ ವಾಹಾನಗಳ ವೇಗದ ಚಾಲನೆ ಯಿಂದ ಅಫಘಾತಗಳು ಸಂಭವಿಸುತ್ತಿವೆ. ಹಾಗಾಗಿ ನಾವೆಲ್ಲ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ.

ಟೋಲ್ ಗಳಲ್ಲಿ ವಿಐಪಿಗಳಿಗೆ ಹಾಗೂ ಅಂಬುಲೆನ್ಸ್ ಓಡಾಟಕ್ಕೆ ಮೀಸಲಿರುವ ಲೈನ್ ಗಳಲ್ಲಿ ಯಾವುದೇ ಕಾರಣಕ್ಕೂ ಸಾರ್ವಜನಿಕರ ವಾಹನಗಳಿಗೆ ಪ್ರವೇಶ ಕಲ್ಪಿಸಬೇಡಿ ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಪಿಡಬ್ಲ್ಯೂಡಿ ನ ಎಕ್ಸಿಕ್ಯುಟಿವ್ ಇಂಜಿನಿಯರ್ ಚಂದ್ರಶೇಖರ್, ಪ್ರೋಫೆಸರ್ ಅರ್ಚನ, ತಾಲೂಕು ಟ್ರಾಫಿಕ್ ಇನ್ಸ್ಪೆಕ್ಟರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

2 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

2 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

7 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

16 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago