ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ಕ್ರಮಬದ್ಧ ಯೋಜನೆ ರೂಪಿಸಿ ಕಾರ್ಯರೂಪಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.
ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರಕ್ಕೆ ಹೊಂದಿಕೊಂಡಿರುವ ಜಿಲ್ಲೆಯಾದ್ದರಿಂದ ವಾಹನ ಸಂಚಾರ ದಟ್ಟಣೆ ಹೆಚ್ಚಿರುತ್ತದೆ. ನೆಲಮಂಗಲ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚು ಅಪಘಾತಗಳಾಗುತ್ತಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾರ್ವಜನಿಕ ಸಂಚಾರ ಹೆಚ್ಚಿರುವ, ಶಾಲಾ ಕಾಲೇಜು, ಅಪಘಾತ ವಲಯಗಳಲ್ಲಿ ಶೀಘ್ರ ಸ್ಕೈ ವಾಕ್ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದರು.
ನೆಲಮಂಗಲ ಸರ್ಕಲ್ ನಲ್ಲಿ ವಾಹನ ಸಂಚಾರ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು ಕುಣಿಗಲ್ ಗೆ ಹೋಗುವ ಕಡೆ ರಸ್ತೆ ಅಗಲೀಕರಣ ಮಾಡಿದರೆ ವಾಹನ ಸಂಚಾರ ಸುಗಮವಾಗುತ್ತದೆ ಎಂದರು.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೈನ್ ಬೋರ್ಡ್ಗಳನ್ನು ಅಳವಡಿಸಬೇಕು, ರಸ್ತೆಗಳಲ್ಲಿ ಅಮ್ಸ್ ಗಳನ್ನು ಹಾಕಬೇಕು, ಸರ್ವಿಸ್ ರಸ್ತೆಗಳಲ್ಲಿ ಅತಿಕ್ರಮಣವಾಗಿ ಹಾಕಿರುವ ಅಂಗಡಿಗಳು, ವಾಹನ ಪಾರ್ಕಿಂಗ್ ತೆರವುಗೊಳಿಸಲು ಸೂಚಿಸಿದರು.
ಜಿಲ್ಲೆಯಲ್ಲಿ ಅನಧಿಕೃತವಾಗಿ ಎಲ್ಲೆಂದರಲ್ಲಿ ಹಾಕಿರುವ ಜಾಹಿರಾತು ಫಲಕಗಳನ್ನು ತೆರವುಗೊಳಿಸಿ, ಯಾರ ಒತ್ತಡಕ್ಕೂ ಮಣಿಯಬೇಡಿ. ತೆರವುಗೊಳಿಸುವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ರಕ್ಷಣೆ ಪಡೆಯಿರಿ. ಯಾವುದಾದರು ಬೆದರಿಕೆ ಕರೆಗಳು ಬಂದಲ್ಲಿ ದೂರು ನೀಡಿ ಎಂದರು.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಕಸದ ತ್ಯಾಜ್ಯ, ಹಳೇ ಕಟ್ಟಡಗಳ ತ್ಯಾಜ್ಯ ಸುರಿಯುತ್ತಿದ್ದು ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದರು.
*ರಸ್ತೆ ಅಪಘಾತದಿಂದ 297 ಸಾವು, ಹೆಚ್ಚು ಅಪಘಾತಗಳು ಸಂಭವಿಸುವ 38 ಬ್ಲಾಕ್ ಸ್ಪಾಟ್ ಗುರುತು-ಎಸ್ಪಿ*
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ಅವರು ಮಾತನಾಡಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ರಸ್ತೆ ಅಪಘಾತಗಳಿಂದ 297 ಜನ ಸಾವನ್ನಪ್ಪಿದ್ದಾರೆ. ಹೆಚ್ಚು ಅಪಘಾತಗಳು ಸಂಭವಿಸುವ 38 ಅಪಾಯಕಾರಿ ಸ್ಥಳ(ಬ್ಲಾಕ್ ಸ್ಪಾಟ್)ಗಳನ್ನು ಗುರುತಿಸಲಾಗಿದ್ದು ಅದರಲ್ಲಿ 35 ರಾಷ್ಟ್ರೀಯ ಹೆದ್ದಾರಿ ಅಪಾಯಕಾರಿ ಸ್ಥಳಗಳಾದರೆ, 3 ರಾಜ್ಯ ಹೆದ್ದಾರಿಗಳಾಗಿವೆ.
ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ತಾಲ್ಲೂಕಿನ ಕುಲುವನಹಳ್ಳಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತವೆ. ರಸ್ತೆಯಲ್ಲಿ ಶಾಲೆ ಒಂದು ಬದಿ ಆದರೆ ಊರು ಮತ್ತೊಂದು ಬದಿ , ದಿನನಿತ್ಯ ರಸ್ತೆ ದಾಟುವಾಗ ವಾಹಾನಗಳ ವೇಗದ ಚಾಲನೆ ಯಿಂದ ಅಫಘಾತಗಳು ಸಂಭವಿಸುತ್ತಿವೆ. ಹಾಗಾಗಿ ನಾವೆಲ್ಲ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ.
ಟೋಲ್ ಗಳಲ್ಲಿ ವಿಐಪಿಗಳಿಗೆ ಹಾಗೂ ಅಂಬುಲೆನ್ಸ್ ಓಡಾಟಕ್ಕೆ ಮೀಸಲಿರುವ ಲೈನ್ ಗಳಲ್ಲಿ ಯಾವುದೇ ಕಾರಣಕ್ಕೂ ಸಾರ್ವಜನಿಕರ ವಾಹನಗಳಿಗೆ ಪ್ರವೇಶ ಕಲ್ಪಿಸಬೇಡಿ ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಪಿಡಬ್ಲ್ಯೂಡಿ ನ ಎಕ್ಸಿಕ್ಯುಟಿವ್ ಇಂಜಿನಿಯರ್ ಚಂದ್ರಶೇಖರ್, ಪ್ರೋಫೆಸರ್ ಅರ್ಚನ, ತಾಲೂಕು ಟ್ರಾಫಿಕ್ ಇನ್ಸ್ಪೆಕ್ಟರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…