ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ರಸ್ತೆ ಅಪಘಾತದಿಂದ 297 ಜನ ಸಾವು – 38 ಬ್ಲಾಕ್ ಸ್ಪಾಟ್ ಗುರುತು- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ

ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ಕ್ರಮಬದ್ಧ ಯೋಜನೆ ರೂಪಿಸಿ ಕಾರ್ಯರೂಪಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರಕ್ಕೆ ಹೊಂದಿಕೊಂಡಿರುವ ಜಿಲ್ಲೆಯಾದ್ದರಿಂದ ವಾಹನ ಸಂಚಾರ ದಟ್ಟಣೆ ಹೆಚ್ಚಿರುತ್ತದೆ. ನೆಲಮಂಗಲ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚು ಅಪಘಾತಗಳಾಗುತ್ತಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾರ್ವಜನಿಕ ಸಂಚಾರ ಹೆಚ್ಚಿರುವ, ಶಾಲಾ ಕಾಲೇಜು, ಅಪಘಾತ ವಲಯಗಳಲ್ಲಿ ಶೀಘ್ರ ಸ್ಕೈ ವಾಕ್ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನೆಲಮಂಗಲ ಸರ್ಕಲ್ ನಲ್ಲಿ ವಾಹನ ಸಂಚಾರ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು ಕುಣಿಗಲ್ ಗೆ ಹೋಗುವ ಕಡೆ ರಸ್ತೆ ಅಗಲೀಕರಣ ಮಾಡಿದರೆ ವಾಹನ ಸಂಚಾರ ಸುಗಮವಾಗುತ್ತದೆ ಎಂದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೈನ್ ಬೋರ್ಡ್ಗಳನ್ನು ಅಳವಡಿಸಬೇಕು, ರಸ್ತೆಗಳಲ್ಲಿ ಅಮ್ಸ್ ಗಳನ್ನು ಹಾಕಬೇಕು, ಸರ್ವಿಸ್ ರಸ್ತೆಗಳಲ್ಲಿ ಅತಿಕ್ರಮಣವಾಗಿ ಹಾಕಿರುವ ಅಂಗಡಿಗಳು, ವಾಹನ ಪಾರ್ಕಿಂಗ್ ತೆರವುಗೊಳಿಸಲು ಸೂಚಿಸಿದರು.

ಜಿಲ್ಲೆಯಲ್ಲಿ ಅನಧಿಕೃತವಾಗಿ ಎಲ್ಲೆಂದರಲ್ಲಿ ಹಾಕಿರುವ ಜಾಹಿರಾತು ಫಲಕಗಳನ್ನು ತೆರವುಗೊಳಿಸಿ, ಯಾರ ಒತ್ತಡಕ್ಕೂ ಮಣಿಯಬೇಡಿ. ತೆರವುಗೊಳಿಸುವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ರಕ್ಷಣೆ ಪಡೆಯಿರಿ. ಯಾವುದಾದರು ಬೆದರಿಕೆ ಕರೆಗಳು ಬಂದಲ್ಲಿ ದೂರು ನೀಡಿ ಎಂದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಕಸದ ತ್ಯಾಜ್ಯ, ಹಳೇ ಕಟ್ಟಡಗಳ ತ್ಯಾಜ್ಯ ಸುರಿಯುತ್ತಿದ್ದು ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದರು.

*ರಸ್ತೆ ಅಪಘಾತದಿಂದ 297 ಸಾವು, ಹೆಚ್ಚು ಅಪಘಾತಗಳು ಸಂಭವಿಸುವ 38 ಬ್ಲಾಕ್ ಸ್ಪಾಟ್ ಗುರುತು-ಎಸ್ಪಿ*

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ಅವರು ಮಾತನಾಡಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ರಸ್ತೆ ಅಪಘಾತಗಳಿಂದ 297 ಜನ ಸಾವನ್ನಪ್ಪಿದ್ದಾರೆ. ಹೆಚ್ಚು ಅಪಘಾತಗಳು ಸಂಭವಿಸುವ 38 ಅಪಾಯಕಾರಿ ಸ್ಥಳ(ಬ್ಲಾಕ್ ಸ್ಪಾಟ್)ಗಳನ್ನು ಗುರುತಿಸಲಾಗಿದ್ದು ಅದರಲ್ಲಿ 35 ರಾಷ್ಟ್ರೀಯ ಹೆದ್ದಾರಿ ಅಪಾಯಕಾರಿ ಸ್ಥಳಗಳಾದರೆ, 3 ರಾಜ್ಯ ಹೆದ್ದಾರಿಗಳಾಗಿವೆ.

ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ತಾಲ್ಲೂಕಿನ ಕುಲುವನಹಳ್ಳಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತವೆ. ರಸ್ತೆಯಲ್ಲಿ ಶಾಲೆ ಒಂದು ಬದಿ ಆದರೆ ಊರು ಮತ್ತೊಂದು ಬದಿ , ದಿನನಿತ್ಯ ರಸ್ತೆ ದಾಟುವಾಗ ವಾಹಾನಗಳ ವೇಗದ ಚಾಲನೆ ಯಿಂದ ಅಫಘಾತಗಳು ಸಂಭವಿಸುತ್ತಿವೆ. ಹಾಗಾಗಿ ನಾವೆಲ್ಲ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ.

ಟೋಲ್ ಗಳಲ್ಲಿ ವಿಐಪಿಗಳಿಗೆ ಹಾಗೂ ಅಂಬುಲೆನ್ಸ್ ಓಡಾಟಕ್ಕೆ ಮೀಸಲಿರುವ ಲೈನ್ ಗಳಲ್ಲಿ ಯಾವುದೇ ಕಾರಣಕ್ಕೂ ಸಾರ್ವಜನಿಕರ ವಾಹನಗಳಿಗೆ ಪ್ರವೇಶ ಕಲ್ಪಿಸಬೇಡಿ ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಪಿಡಬ್ಲ್ಯೂಡಿ ನ ಎಕ್ಸಿಕ್ಯುಟಿವ್ ಇಂಜಿನಿಯರ್ ಚಂದ್ರಶೇಖರ್, ಪ್ರೋಫೆಸರ್ ಅರ್ಚನ, ತಾಲೂಕು ಟ್ರಾಫಿಕ್ ಇನ್ಸ್ಪೆಕ್ಟರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

20 minutes ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

42 minutes ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

4 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago