ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ರಸ್ತೆ ಅಪಘಾತದಿಂದ 297 ಜನ ಸಾವು – 38 ಬ್ಲಾಕ್ ಸ್ಪಾಟ್ ಗುರುತು- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ

ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ಕ್ರಮಬದ್ಧ ಯೋಜನೆ ರೂಪಿಸಿ ಕಾರ್ಯರೂಪಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರಕ್ಕೆ ಹೊಂದಿಕೊಂಡಿರುವ ಜಿಲ್ಲೆಯಾದ್ದರಿಂದ ವಾಹನ ಸಂಚಾರ ದಟ್ಟಣೆ ಹೆಚ್ಚಿರುತ್ತದೆ. ನೆಲಮಂಗಲ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚು ಅಪಘಾತಗಳಾಗುತ್ತಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾರ್ವಜನಿಕ ಸಂಚಾರ ಹೆಚ್ಚಿರುವ, ಶಾಲಾ ಕಾಲೇಜು, ಅಪಘಾತ ವಲಯಗಳಲ್ಲಿ ಶೀಘ್ರ ಸ್ಕೈ ವಾಕ್ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನೆಲಮಂಗಲ ಸರ್ಕಲ್ ನಲ್ಲಿ ವಾಹನ ಸಂಚಾರ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು ಕುಣಿಗಲ್ ಗೆ ಹೋಗುವ ಕಡೆ ರಸ್ತೆ ಅಗಲೀಕರಣ ಮಾಡಿದರೆ ವಾಹನ ಸಂಚಾರ ಸುಗಮವಾಗುತ್ತದೆ ಎಂದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೈನ್ ಬೋರ್ಡ್ಗಳನ್ನು ಅಳವಡಿಸಬೇಕು, ರಸ್ತೆಗಳಲ್ಲಿ ಅಮ್ಸ್ ಗಳನ್ನು ಹಾಕಬೇಕು, ಸರ್ವಿಸ್ ರಸ್ತೆಗಳಲ್ಲಿ ಅತಿಕ್ರಮಣವಾಗಿ ಹಾಕಿರುವ ಅಂಗಡಿಗಳು, ವಾಹನ ಪಾರ್ಕಿಂಗ್ ತೆರವುಗೊಳಿಸಲು ಸೂಚಿಸಿದರು.

ಜಿಲ್ಲೆಯಲ್ಲಿ ಅನಧಿಕೃತವಾಗಿ ಎಲ್ಲೆಂದರಲ್ಲಿ ಹಾಕಿರುವ ಜಾಹಿರಾತು ಫಲಕಗಳನ್ನು ತೆರವುಗೊಳಿಸಿ, ಯಾರ ಒತ್ತಡಕ್ಕೂ ಮಣಿಯಬೇಡಿ. ತೆರವುಗೊಳಿಸುವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ರಕ್ಷಣೆ ಪಡೆಯಿರಿ. ಯಾವುದಾದರು ಬೆದರಿಕೆ ಕರೆಗಳು ಬಂದಲ್ಲಿ ದೂರು ನೀಡಿ ಎಂದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಕಸದ ತ್ಯಾಜ್ಯ, ಹಳೇ ಕಟ್ಟಡಗಳ ತ್ಯಾಜ್ಯ ಸುರಿಯುತ್ತಿದ್ದು ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದರು.

*ರಸ್ತೆ ಅಪಘಾತದಿಂದ 297 ಸಾವು, ಹೆಚ್ಚು ಅಪಘಾತಗಳು ಸಂಭವಿಸುವ 38 ಬ್ಲಾಕ್ ಸ್ಪಾಟ್ ಗುರುತು-ಎಸ್ಪಿ*

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ಅವರು ಮಾತನಾಡಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ರಸ್ತೆ ಅಪಘಾತಗಳಿಂದ 297 ಜನ ಸಾವನ್ನಪ್ಪಿದ್ದಾರೆ. ಹೆಚ್ಚು ಅಪಘಾತಗಳು ಸಂಭವಿಸುವ 38 ಅಪಾಯಕಾರಿ ಸ್ಥಳ(ಬ್ಲಾಕ್ ಸ್ಪಾಟ್)ಗಳನ್ನು ಗುರುತಿಸಲಾಗಿದ್ದು ಅದರಲ್ಲಿ 35 ರಾಷ್ಟ್ರೀಯ ಹೆದ್ದಾರಿ ಅಪಾಯಕಾರಿ ಸ್ಥಳಗಳಾದರೆ, 3 ರಾಜ್ಯ ಹೆದ್ದಾರಿಗಳಾಗಿವೆ.

ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ತಾಲ್ಲೂಕಿನ ಕುಲುವನಹಳ್ಳಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತವೆ. ರಸ್ತೆಯಲ್ಲಿ ಶಾಲೆ ಒಂದು ಬದಿ ಆದರೆ ಊರು ಮತ್ತೊಂದು ಬದಿ , ದಿನನಿತ್ಯ ರಸ್ತೆ ದಾಟುವಾಗ ವಾಹಾನಗಳ ವೇಗದ ಚಾಲನೆ ಯಿಂದ ಅಫಘಾತಗಳು ಸಂಭವಿಸುತ್ತಿವೆ. ಹಾಗಾಗಿ ನಾವೆಲ್ಲ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ.

ಟೋಲ್ ಗಳಲ್ಲಿ ವಿಐಪಿಗಳಿಗೆ ಹಾಗೂ ಅಂಬುಲೆನ್ಸ್ ಓಡಾಟಕ್ಕೆ ಮೀಸಲಿರುವ ಲೈನ್ ಗಳಲ್ಲಿ ಯಾವುದೇ ಕಾರಣಕ್ಕೂ ಸಾರ್ವಜನಿಕರ ವಾಹನಗಳಿಗೆ ಪ್ರವೇಶ ಕಲ್ಪಿಸಬೇಡಿ ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಪಿಡಬ್ಲ್ಯೂಡಿ ನ ಎಕ್ಸಿಕ್ಯುಟಿವ್ ಇಂಜಿನಿಯರ್ ಚಂದ್ರಶೇಖರ್, ಪ್ರೋಫೆಸರ್ ಅರ್ಚನ, ತಾಲೂಕು ಟ್ರಾಫಿಕ್ ಇನ್ಸ್ಪೆಕ್ಟರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

4 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

5 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

8 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

14 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 day ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago