ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಅನಿರೀಕ್ಷಿತ ದಾಳಿಗಳನ್ನು ಹೆಚ್ಚಿಸಿ-ಅಪರ ಜಿಲ್ಲಾಧಿಕಾರಿ ಅಮರೇಶ್.ಎಚ್

ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆಮಾಡಿ ಪುನರ್ವಸತಿ ಕಲ್ಪಿಸಲು ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಅನಿರೀಕ್ಷಿತ ದಾಳಿ, ತಪಾಸಣೆ ನಡೆಸಿ ಬಾಲಕಾರ್ಮಿಕರನ್ನು ರಕ್ಷಿಸಿ ಬಾಲಕಾರ್ಮಿಕ ಪದ್ದತಿಯನ್ನು ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಾಲಕಾರ್ಮಿಕರು ಕಂಡುಬರುವ ಸ್ಥಳದ ಮಾಹಿತಿ ಬಂದ ನಂತರ ಕೂಡಲೆ ತ್ವರಿತವಾಗಿ ಸಂಬಂಧಿಸಿದ ಅಧಿಕಾರಿಗಳು ದಾಳಿ ನಡೆಸಿ ಮಕ್ಕಳನ್ನು ರಕ್ಷಿಸಿ ಪನರ್ವಸತಿ ಕೇಂದ್ರಗಳಿಗೆ ಕಳುಹಿಸಬೇಕು. ಅನಿರೀಕ್ಷಿತ ದಾಳಿಗಳು, ತಪಾಸಣೆ ಗಳನ್ನು ನಡೆಸಿ ಬಾಲಕಾರ್ಮಿಕ ಪದ್ಧತಿಯನ್ನು ತೊಡೆದು ಹಾಕಲು ಅಧಿಕಾರಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಲು ಸೂಚಿಸಿದರು.

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ರೂ. 20,000/- ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. 50,000/- ಗಳ ವರೆಗೆ ಹೆಚ್ಚಿಸಬಹುದಾದಂತಹ ದಂಡ ಅಥವಾ ಎರಡನ್ನು ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ತಿಳಿಸಿದರು.

ಅನಿರೀಕ್ಷಿತ ತಪಾಸಣೆ ಮತ್ತು ದಾಳಿಯ ವೇಳೆ ವಿವಿಧ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ, ಸಾರ್ವಜನಿಕರಿಗೆ ಹಾಗೂ ಶಾಲಾ-ಕಾಲೇಜುಗಳಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು, ಆಟೊ ಪ್ರಚಾರ ಕಾರ್ಯಕ್ರಮಗಳನ್ನು, ಬೀದಿ ನಾಟಕಗಳನ್ನು, ಗೋಡೆ ಬರಹಗಳನ್ನು, ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು, ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಿ ಎಂದರು.

ಸಾರ್ವಜನಿಕರು ಕೂಡ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ದುಡಿಮೆಗೆ ನೇಮಿಸಿ ಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕ್ಕೆ ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಸಹಕಾರ ನೀಡಬೇಕು‌ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ಮಾತನಾಡಿ, ವಿವಿಧ ಅಂಗಡಿ-ಮುಂಗಟ್ಟುಗಳ ಮೇಲೆ ಅನಿರೀಕ್ಷಿತ ದಾಳಿ ಹಾಗೂ ತಪಾಸಣೆ ನಡೆಸಿ 2023-24ನೇ ಸಾಲಿನಲ್ಲಿ 10ಬಾಲಕಾರ್ಮಿಕ ಹಾಗೂ 27 ಕಿಶೋರ ಕಾರ್ಮಿಕರನ್ನು ಒಟ್ಟು 37 ಮಕ್ಕಳನ್ನು ಹಾಗೂ 2024-25ನೇ ಸಾಲಿನ ಆಗಸ್ಟ್ ಮಾಹೆಯ ಅಂತ್ಯಕ್ಕೆ 02 ಬಾಲ ಕಾರ್ಮಿಕ ಮತ್ತು 28 ಕಿಶೋರ ಕಾರ್ಮಿಕ ಒಟ್ಟು 30 ಮಕ್ಕಳನ್ನು ರಕ್ಷಿಸಲಾಗಿದ್ದು. ರಕ್ಷಿಸಿದ ಎಲ್ಲಾ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮುಂದಿನ ಕ್ರಮಕ್ಕಾಗಿ ಹಾಜರುಪಡಿಸಲಾಯಿತು ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರೋಗ್ಯಾಧಿಕಾರಿ ಡಾ. ಸುನಿಲ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬರಾವ್.ಎಸ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕಿನ ಕಾರ್ಮಿಕ ಅಧಿಕಾರಿಗಳು ಉಪಸ್ಥಿತರಿದ್ದರು ಹಾಜರಿದ್ದರು.

Ramesh Babu

Journalist

Recent Posts

ಅನಾಥರು, ಅಶಕ್ತ ಹೆಣ್ಣು ಮಕ್ಕಳಿಗೆ ಯುವಿಕಾ ವರದಾನ

ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…

10 hours ago

ಮೇ.8ರಂದು ಜೆಡಿಎಸ್ ರಜತ ಮಹೋತ್ಸವ: ನಿಖಿಲ್ ಕುಮಾರಸ್ವಾಮಿ ಭಾಗಿ- ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ

ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…

11 hours ago

ಹನ್ನೊಂದು ಮಂದಿ ಬಾಲ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…

12 hours ago

ತಾಲ್ಲೂಕಿನಲ್ಲಿ ಜೆಡಿಎಸ್ ತನ್ನ ಶಕ್ತಿ ಕಳೆದುಕೊಳ್ಳಲು ಪಕ್ಷ ವಿರೋಧಿ ಚಟುವಟಿಕೆಗಳೇ ಕಾರಣ- ಜೆಡಿಎಸ್ ಮುಖಂಡ ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…

12 hours ago

ಖಾಸಗಿ ಟೆಂಡರ್ ದಾರರ ಬೇಜವಾಬ್ದಾರಿ: ಕುಡಿಯಲು ನೀರಿಲ್ಲದೇ ಜನ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…

13 hours ago

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

21 hours ago