ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಅನಿರೀಕ್ಷಿತ ದಾಳಿಗಳನ್ನು ಹೆಚ್ಚಿಸಿ-ಅಪರ ಜಿಲ್ಲಾಧಿಕಾರಿ ಅಮರೇಶ್.ಎಚ್

ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆಮಾಡಿ ಪುನರ್ವಸತಿ ಕಲ್ಪಿಸಲು ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಅನಿರೀಕ್ಷಿತ ದಾಳಿ, ತಪಾಸಣೆ ನಡೆಸಿ ಬಾಲಕಾರ್ಮಿಕರನ್ನು ರಕ್ಷಿಸಿ ಬಾಲಕಾರ್ಮಿಕ ಪದ್ದತಿಯನ್ನು ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಾಲಕಾರ್ಮಿಕರು ಕಂಡುಬರುವ ಸ್ಥಳದ ಮಾಹಿತಿ ಬಂದ ನಂತರ ಕೂಡಲೆ ತ್ವರಿತವಾಗಿ ಸಂಬಂಧಿಸಿದ ಅಧಿಕಾರಿಗಳು ದಾಳಿ ನಡೆಸಿ ಮಕ್ಕಳನ್ನು ರಕ್ಷಿಸಿ ಪನರ್ವಸತಿ ಕೇಂದ್ರಗಳಿಗೆ ಕಳುಹಿಸಬೇಕು. ಅನಿರೀಕ್ಷಿತ ದಾಳಿಗಳು, ತಪಾಸಣೆ ಗಳನ್ನು ನಡೆಸಿ ಬಾಲಕಾರ್ಮಿಕ ಪದ್ಧತಿಯನ್ನು ತೊಡೆದು ಹಾಕಲು ಅಧಿಕಾರಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಲು ಸೂಚಿಸಿದರು.

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ರೂ. 20,000/- ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. 50,000/- ಗಳ ವರೆಗೆ ಹೆಚ್ಚಿಸಬಹುದಾದಂತಹ ದಂಡ ಅಥವಾ ಎರಡನ್ನು ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ತಿಳಿಸಿದರು.

ಅನಿರೀಕ್ಷಿತ ತಪಾಸಣೆ ಮತ್ತು ದಾಳಿಯ ವೇಳೆ ವಿವಿಧ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ, ಸಾರ್ವಜನಿಕರಿಗೆ ಹಾಗೂ ಶಾಲಾ-ಕಾಲೇಜುಗಳಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು, ಆಟೊ ಪ್ರಚಾರ ಕಾರ್ಯಕ್ರಮಗಳನ್ನು, ಬೀದಿ ನಾಟಕಗಳನ್ನು, ಗೋಡೆ ಬರಹಗಳನ್ನು, ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು, ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಿ ಎಂದರು.

ಸಾರ್ವಜನಿಕರು ಕೂಡ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ದುಡಿಮೆಗೆ ನೇಮಿಸಿ ಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕ್ಕೆ ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಸಹಕಾರ ನೀಡಬೇಕು‌ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ಮಾತನಾಡಿ, ವಿವಿಧ ಅಂಗಡಿ-ಮುಂಗಟ್ಟುಗಳ ಮೇಲೆ ಅನಿರೀಕ್ಷಿತ ದಾಳಿ ಹಾಗೂ ತಪಾಸಣೆ ನಡೆಸಿ 2023-24ನೇ ಸಾಲಿನಲ್ಲಿ 10ಬಾಲಕಾರ್ಮಿಕ ಹಾಗೂ 27 ಕಿಶೋರ ಕಾರ್ಮಿಕರನ್ನು ಒಟ್ಟು 37 ಮಕ್ಕಳನ್ನು ಹಾಗೂ 2024-25ನೇ ಸಾಲಿನ ಆಗಸ್ಟ್ ಮಾಹೆಯ ಅಂತ್ಯಕ್ಕೆ 02 ಬಾಲ ಕಾರ್ಮಿಕ ಮತ್ತು 28 ಕಿಶೋರ ಕಾರ್ಮಿಕ ಒಟ್ಟು 30 ಮಕ್ಕಳನ್ನು ರಕ್ಷಿಸಲಾಗಿದ್ದು. ರಕ್ಷಿಸಿದ ಎಲ್ಲಾ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮುಂದಿನ ಕ್ರಮಕ್ಕಾಗಿ ಹಾಜರುಪಡಿಸಲಾಯಿತು ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರೋಗ್ಯಾಧಿಕಾರಿ ಡಾ. ಸುನಿಲ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬರಾವ್.ಎಸ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕಿನ ಕಾರ್ಮಿಕ ಅಧಿಕಾರಿಗಳು ಉಪಸ್ಥಿತರಿದ್ದರು ಹಾಜರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

5 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

5 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

8 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

9 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

13 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

17 hours ago