ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಆರಂಭ-ಜಿಲ್ಲಾಧಿಕಾರಿ ಎ.ಬಿ ಬಸವರಾಜು

ನೋಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಾರ್ಚ್ 01ರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಮಾರ್ಚ್ 03 ರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತಿದ್ದು, ನೋಂದಾಯಿತ ರೈತರು ಸಂಬಂಧಪಟ್ಟ ತಾಲ್ಲೂಕುಗಳ ಖರೀದಿ ಕೇಂದ್ರಗಳಿಗೆ ರಾಗಿಯನ್ನು ನಿಯಮಾನುಸಾರ ನೀಡಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

2024-25 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ತೆರೆದು, ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ಅಗತ್ಯ ದಾಖಲೆಗಳನ್ನು ಪಡೆದು ನೋಂದಾಯಿಸಿಕೊಳ್ಳಲಾಗಿದೆ.

ರಾಗಿ ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಖರೀದಿ ಅಧಿಕಾರಿಗಳಾದ ನೆಲಮಂಗಲ ತಾಲ್ಲೂಕು ಖರೀದಿ ಅಧಿಕಾರಿ ವೈ.ಎಸ್ ನಾರಾಯಣಮೂರ್ತಿ (9482991630),

ದೊಡ್ಡಬಳ್ಳಾಪುರ ತಾಲ್ಲೂಕು ಖರೀದಿ ಅಧಿಕಾರಿ ಹೆಚ್.ಎನ್ ನಾರಾಯಣ್(9886141435),

ದೇವನಹಳ್ಳಿ ತಾಲ್ಲೂಕು ಖರೀದಿ ಅಧಿಕಾರಿ ಎಂ.ಅಚ್ಯೂತ್(9900136687),

ಹೊಸಕೋಟೆ ತಾಲ್ಲೂಕು ಖರೀದಿ ಅಧಿಕಾರಿ ಲಕ್ಷ್ಮೀ ನಾರಾಯಣ (9880700975) ಇವರನ್ನು ಸಂಪರ್ಗಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…

42 minutes ago

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

2 hours ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

9 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

10 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

11 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

21 hours ago