ನೋಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಾರ್ಚ್ 01ರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಮಾರ್ಚ್ 03 ರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತಿದ್ದು, ನೋಂದಾಯಿತ ರೈತರು ಸಂಬಂಧಪಟ್ಟ ತಾಲ್ಲೂಕುಗಳ ಖರೀದಿ ಕೇಂದ್ರಗಳಿಗೆ ರಾಗಿಯನ್ನು ನಿಯಮಾನುಸಾರ ನೀಡಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.
2024-25 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ತೆರೆದು, ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ಅಗತ್ಯ ದಾಖಲೆಗಳನ್ನು ಪಡೆದು ನೋಂದಾಯಿಸಿಕೊಳ್ಳಲಾಗಿದೆ.
ರಾಗಿ ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಖರೀದಿ ಅಧಿಕಾರಿಗಳಾದ ನೆಲಮಂಗಲ ತಾಲ್ಲೂಕು ಖರೀದಿ ಅಧಿಕಾರಿ ವೈ.ಎಸ್ ನಾರಾಯಣಮೂರ್ತಿ (9482991630),
ದೊಡ್ಡಬಳ್ಳಾಪುರ ತಾಲ್ಲೂಕು ಖರೀದಿ ಅಧಿಕಾರಿ ಹೆಚ್.ಎನ್ ನಾರಾಯಣ್(9886141435),
ದೇವನಹಳ್ಳಿ ತಾಲ್ಲೂಕು ಖರೀದಿ ಅಧಿಕಾರಿ ಎಂ.ಅಚ್ಯೂತ್(9900136687),
ಹೊಸಕೋಟೆ ತಾಲ್ಲೂಕು ಖರೀದಿ ಅಧಿಕಾರಿ ಲಕ್ಷ್ಮೀ ನಾರಾಯಣ (9880700975) ಇವರನ್ನು ಸಂಪರ್ಗಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…