ನೋಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಾರ್ಚ್ 01ರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಮಾರ್ಚ್ 03 ರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತಿದ್ದು, ನೋಂದಾಯಿತ ರೈತರು ಸಂಬಂಧಪಟ್ಟ ತಾಲ್ಲೂಕುಗಳ ಖರೀದಿ ಕೇಂದ್ರಗಳಿಗೆ ರಾಗಿಯನ್ನು ನಿಯಮಾನುಸಾರ ನೀಡಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.
2024-25 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ತೆರೆದು, ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ಅಗತ್ಯ ದಾಖಲೆಗಳನ್ನು ಪಡೆದು ನೋಂದಾಯಿಸಿಕೊಳ್ಳಲಾಗಿದೆ.
ರಾಗಿ ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಖರೀದಿ ಅಧಿಕಾರಿಗಳಾದ ನೆಲಮಂಗಲ ತಾಲ್ಲೂಕು ಖರೀದಿ ಅಧಿಕಾರಿ ವೈ.ಎಸ್ ನಾರಾಯಣಮೂರ್ತಿ (9482991630),
ದೊಡ್ಡಬಳ್ಳಾಪುರ ತಾಲ್ಲೂಕು ಖರೀದಿ ಅಧಿಕಾರಿ ಹೆಚ್.ಎನ್ ನಾರಾಯಣ್(9886141435),
ದೇವನಹಳ್ಳಿ ತಾಲ್ಲೂಕು ಖರೀದಿ ಅಧಿಕಾರಿ ಎಂ.ಅಚ್ಯೂತ್(9900136687),
ಹೊಸಕೋಟೆ ತಾಲ್ಲೂಕು ಖರೀದಿ ಅಧಿಕಾರಿ ಲಕ್ಷ್ಮೀ ನಾರಾಯಣ (9880700975) ಇವರನ್ನು ಸಂಪರ್ಗಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…
ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…