ಜಿಲ್ಲೆಯಲ್ಲಿ ಮೇ.2 ರಿಂದ 4ರವರೆಗೆ ಅಂಚೆ ಮತದಾನ

ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಚುನಾವಣಾ ಆಯೋಗದ ನಿರ್ದೇಶನದಂತೆ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವ ಗೈರು ಹಾಜರಿ ಮತದಾರರಿಗೆ ಅಂಚೆ ಮತದಾನ ಕಾರ್ಯವು ಮೇ 02(ಮಂಗಳವಾರ) ರಿಂದ 04(ಗುರುವಾರ) ರವರೆಗೆ ನಡೆಯಲಿದೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತದಾನವು ತಾಲ್ಲೂಕು ಆಡಳಿತ ಸೌಧ, ಗ್ರೇಡ್-2 ತಹಶೀಲ್ದಾರ್ ರವರ ಕೊಠಡಿಯಲ್ಲಿ ನಡೆಯಲಿದೆ. ಅಂಚೆ ಮತದಾನ ಕೇಂದ್ರದ (ಪಿ.ವಿ.ಸಿ) ಮೇಲ್ವಿಚಾರಣೆಗಾಗಿ ಶಾಲಾ ಶಿಕ್ಷಣ ಇಲಾಖೆಯ ದೇವನಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಕ್ಷೇತ್ರ ಸಮನ್ವಯಾಧಿಕಾರಿ ಮಂಜುಳ ಅವರನ್ನು ಗೆಜೆಟೆಡ್ ಅಧಿಕಾರಿಯಾಗಿ ಹಾಗೂ ದೇವನಹಳ್ಳಿ ತಾಲ್ಲೂಕು ಕಛೇರಿಯ ಗ್ರೇಡ್-2 ತಹಶೀಲ್ದಾರ್ ಉಷಾ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತದಾನವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಾದಗೊಂಡನಹಳ್ಳಿ, ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ. ಅಂಚೆ ಮತದಾನ ಕೇಂದ್ರದ ಮೇಲ್ವಿಚಾರಣೆಗಾಗಿ ದೊಡ್ಡಬಳ್ಳಾಪುರ ತಾಲ್ಲೂಕು ಉಪ ಖಜಾನೆಯ ಸಹಾಯಕ ನಿರ್ದೇಶಕರು ರವಿಕುಮಾರ್ ಅವರನ್ನು ಗೆಜೆಟೆಡ್ ಅಧಿಕಾರಿಯಾಗಿ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ಕಛೇರಿಯ ಗ್ರೇಡ್-2 ತಹಶೀಲ್ದಾರ್ ಎನ್ ಆರ್ ಕರಿಯಾ ನಾಯ್ಕ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತದಾನವು ತಾಲ್ಲೂಕು ಕಛೇರಿ ಸಭಾಂಗಣ, ನೆಲಮಂಗಲದಲ್ಲಿ ನಡೆಯಲಿದೆ. ಅಂಚೆ ಮತದಾನ ಕೇಂದ್ರದ ಮೇಲ್ವಿಚಾರಣೆಗಾಗಿ ನೆಲಮಂಗಲ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಗೆಜೆಟೆಡ್ ಮ್ಯಾನೇಜರ್ ಕೆ.ಎನ್ ರವೀಂದ್ರನಾಥ ಅವರನ್ನು ಗೆಜೆಟೆಡ್ ಅಧಿಕಾರಿಯನ್ನಾಗಿ ಹಾಗೂ ನೆಲಮಂಗಲ ತಾಲ್ಲೂಕು ಕಛೇರಿಯ ಗ್ರೇಡ್-2 ತಹಶೀಲ್ದಾರ್ ವಿ ಭಾಗ್ಯ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
178- ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಗೈರು ಹಾಜರಿ ಮತದಾರರು ಇಲ್ಲದ ಕಾರಣ ಅಂಚೆ ಮತದಾನ ಇರುವುದಿಲ್ಲ.

2023ರ ಮೇ 02, 03 ಹಾಗೂ 04 ರಂದು ಬೆಳಿಗ್ಗೆ 9.00 ಗಂಟೆಯಿಂದ 5.00 ಗಂಟೆಯವರೆಗೆ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತದಾನ ನಡೆಯಲಿದೆ.
ವಿವಿಧ ಇಲಾಖೆಗಳಲ್ಲಿ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನಾಂಕದಂದು ಕಾರ್ಯನಿರ್ವಹಿಸುತ್ತಿರುವ ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ನಿಗದಿತ ಸಮಯ, ಸ್ಥಳದಲ್ಲಿ ಹಾಜರಾಗಿ ಅಂಚೆ ಮತದಾನ ಕಾರ್ಯನಿರ್ವಹಿಸುವಂತೆ ಸೂಚಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್ ಲತಾ ಅವರು ಕೋರಿರುತ್ತಾರೆ.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

10 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

10 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

14 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

20 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 day ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago