ಜಿಲ್ಲೆಯಲ್ಲಿ ಮೇ.2 ರಿಂದ 4ರವರೆಗೆ ಅಂಚೆ ಮತದಾನ

ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಚುನಾವಣಾ ಆಯೋಗದ ನಿರ್ದೇಶನದಂತೆ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವ ಗೈರು ಹಾಜರಿ ಮತದಾರರಿಗೆ ಅಂಚೆ ಮತದಾನ ಕಾರ್ಯವು ಮೇ 02(ಮಂಗಳವಾರ) ರಿಂದ 04(ಗುರುವಾರ) ರವರೆಗೆ ನಡೆಯಲಿದೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತದಾನವು ತಾಲ್ಲೂಕು ಆಡಳಿತ ಸೌಧ, ಗ್ರೇಡ್-2 ತಹಶೀಲ್ದಾರ್ ರವರ ಕೊಠಡಿಯಲ್ಲಿ ನಡೆಯಲಿದೆ. ಅಂಚೆ ಮತದಾನ ಕೇಂದ್ರದ (ಪಿ.ವಿ.ಸಿ) ಮೇಲ್ವಿಚಾರಣೆಗಾಗಿ ಶಾಲಾ ಶಿಕ್ಷಣ ಇಲಾಖೆಯ ದೇವನಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಕ್ಷೇತ್ರ ಸಮನ್ವಯಾಧಿಕಾರಿ ಮಂಜುಳ ಅವರನ್ನು ಗೆಜೆಟೆಡ್ ಅಧಿಕಾರಿಯಾಗಿ ಹಾಗೂ ದೇವನಹಳ್ಳಿ ತಾಲ್ಲೂಕು ಕಛೇರಿಯ ಗ್ರೇಡ್-2 ತಹಶೀಲ್ದಾರ್ ಉಷಾ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತದಾನವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಾದಗೊಂಡನಹಳ್ಳಿ, ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ. ಅಂಚೆ ಮತದಾನ ಕೇಂದ್ರದ ಮೇಲ್ವಿಚಾರಣೆಗಾಗಿ ದೊಡ್ಡಬಳ್ಳಾಪುರ ತಾಲ್ಲೂಕು ಉಪ ಖಜಾನೆಯ ಸಹಾಯಕ ನಿರ್ದೇಶಕರು ರವಿಕುಮಾರ್ ಅವರನ್ನು ಗೆಜೆಟೆಡ್ ಅಧಿಕಾರಿಯಾಗಿ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ಕಛೇರಿಯ ಗ್ರೇಡ್-2 ತಹಶೀಲ್ದಾರ್ ಎನ್ ಆರ್ ಕರಿಯಾ ನಾಯ್ಕ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತದಾನವು ತಾಲ್ಲೂಕು ಕಛೇರಿ ಸಭಾಂಗಣ, ನೆಲಮಂಗಲದಲ್ಲಿ ನಡೆಯಲಿದೆ. ಅಂಚೆ ಮತದಾನ ಕೇಂದ್ರದ ಮೇಲ್ವಿಚಾರಣೆಗಾಗಿ ನೆಲಮಂಗಲ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಗೆಜೆಟೆಡ್ ಮ್ಯಾನೇಜರ್ ಕೆ.ಎನ್ ರವೀಂದ್ರನಾಥ ಅವರನ್ನು ಗೆಜೆಟೆಡ್ ಅಧಿಕಾರಿಯನ್ನಾಗಿ ಹಾಗೂ ನೆಲಮಂಗಲ ತಾಲ್ಲೂಕು ಕಛೇರಿಯ ಗ್ರೇಡ್-2 ತಹಶೀಲ್ದಾರ್ ವಿ ಭಾಗ್ಯ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
178- ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಗೈರು ಹಾಜರಿ ಮತದಾರರು ಇಲ್ಲದ ಕಾರಣ ಅಂಚೆ ಮತದಾನ ಇರುವುದಿಲ್ಲ.

2023ರ ಮೇ 02, 03 ಹಾಗೂ 04 ರಂದು ಬೆಳಿಗ್ಗೆ 9.00 ಗಂಟೆಯಿಂದ 5.00 ಗಂಟೆಯವರೆಗೆ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತದಾನ ನಡೆಯಲಿದೆ.
ವಿವಿಧ ಇಲಾಖೆಗಳಲ್ಲಿ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನಾಂಕದಂದು ಕಾರ್ಯನಿರ್ವಹಿಸುತ್ತಿರುವ ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ನಿಗದಿತ ಸಮಯ, ಸ್ಥಳದಲ್ಲಿ ಹಾಜರಾಗಿ ಅಂಚೆ ಮತದಾನ ಕಾರ್ಯನಿರ್ವಹಿಸುವಂತೆ ಸೂಚಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್ ಲತಾ ಅವರು ಕೋರಿರುತ್ತಾರೆ.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

3 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

14 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

22 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago