ಜಿಲ್ಲೆಯಲ್ಲಿ ಮೇ.2 ರಿಂದ 4ರವರೆಗೆ ಅಂಚೆ ಮತದಾನ

ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಚುನಾವಣಾ ಆಯೋಗದ ನಿರ್ದೇಶನದಂತೆ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವ ಗೈರು ಹಾಜರಿ ಮತದಾರರಿಗೆ ಅಂಚೆ ಮತದಾನ ಕಾರ್ಯವು ಮೇ 02(ಮಂಗಳವಾರ) ರಿಂದ 04(ಗುರುವಾರ) ರವರೆಗೆ ನಡೆಯಲಿದೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತದಾನವು ತಾಲ್ಲೂಕು ಆಡಳಿತ ಸೌಧ, ಗ್ರೇಡ್-2 ತಹಶೀಲ್ದಾರ್ ರವರ ಕೊಠಡಿಯಲ್ಲಿ ನಡೆಯಲಿದೆ. ಅಂಚೆ ಮತದಾನ ಕೇಂದ್ರದ (ಪಿ.ವಿ.ಸಿ) ಮೇಲ್ವಿಚಾರಣೆಗಾಗಿ ಶಾಲಾ ಶಿಕ್ಷಣ ಇಲಾಖೆಯ ದೇವನಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಕ್ಷೇತ್ರ ಸಮನ್ವಯಾಧಿಕಾರಿ ಮಂಜುಳ ಅವರನ್ನು ಗೆಜೆಟೆಡ್ ಅಧಿಕಾರಿಯಾಗಿ ಹಾಗೂ ದೇವನಹಳ್ಳಿ ತಾಲ್ಲೂಕು ಕಛೇರಿಯ ಗ್ರೇಡ್-2 ತಹಶೀಲ್ದಾರ್ ಉಷಾ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತದಾನವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಾದಗೊಂಡನಹಳ್ಳಿ, ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ. ಅಂಚೆ ಮತದಾನ ಕೇಂದ್ರದ ಮೇಲ್ವಿಚಾರಣೆಗಾಗಿ ದೊಡ್ಡಬಳ್ಳಾಪುರ ತಾಲ್ಲೂಕು ಉಪ ಖಜಾನೆಯ ಸಹಾಯಕ ನಿರ್ದೇಶಕರು ರವಿಕುಮಾರ್ ಅವರನ್ನು ಗೆಜೆಟೆಡ್ ಅಧಿಕಾರಿಯಾಗಿ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ಕಛೇರಿಯ ಗ್ರೇಡ್-2 ತಹಶೀಲ್ದಾರ್ ಎನ್ ಆರ್ ಕರಿಯಾ ನಾಯ್ಕ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತದಾನವು ತಾಲ್ಲೂಕು ಕಛೇರಿ ಸಭಾಂಗಣ, ನೆಲಮಂಗಲದಲ್ಲಿ ನಡೆಯಲಿದೆ. ಅಂಚೆ ಮತದಾನ ಕೇಂದ್ರದ ಮೇಲ್ವಿಚಾರಣೆಗಾಗಿ ನೆಲಮಂಗಲ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಗೆಜೆಟೆಡ್ ಮ್ಯಾನೇಜರ್ ಕೆ.ಎನ್ ರವೀಂದ್ರನಾಥ ಅವರನ್ನು ಗೆಜೆಟೆಡ್ ಅಧಿಕಾರಿಯನ್ನಾಗಿ ಹಾಗೂ ನೆಲಮಂಗಲ ತಾಲ್ಲೂಕು ಕಛೇರಿಯ ಗ್ರೇಡ್-2 ತಹಶೀಲ್ದಾರ್ ವಿ ಭಾಗ್ಯ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
178- ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಗೈರು ಹಾಜರಿ ಮತದಾರರು ಇಲ್ಲದ ಕಾರಣ ಅಂಚೆ ಮತದಾನ ಇರುವುದಿಲ್ಲ.

2023ರ ಮೇ 02, 03 ಹಾಗೂ 04 ರಂದು ಬೆಳಿಗ್ಗೆ 9.00 ಗಂಟೆಯಿಂದ 5.00 ಗಂಟೆಯವರೆಗೆ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತದಾನ ನಡೆಯಲಿದೆ.
ವಿವಿಧ ಇಲಾಖೆಗಳಲ್ಲಿ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನಾಂಕದಂದು ಕಾರ್ಯನಿರ್ವಹಿಸುತ್ತಿರುವ ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ನಿಗದಿತ ಸಮಯ, ಸ್ಥಳದಲ್ಲಿ ಹಾಜರಾಗಿ ಅಂಚೆ ಮತದಾನ ಕಾರ್ಯನಿರ್ವಹಿಸುವಂತೆ ಸೂಚಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್ ಲತಾ ಅವರು ಕೋರಿರುತ್ತಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

6 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

7 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

8 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

8 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

12 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

14 hours ago