ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ ಉಂಟಾಗಿಲ್ಲ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.
ಹೊಸಕೋಟೆ ಟೌನ್ ನಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಕೇಂದ್ರಕ್ಕೆ ಎಸ್ಪಿ ಸಿ.ಕೆ ಬಾಬಾ ಅವರೊಂದಿಗೆ ಭೇಟಿ ನೀಡಿ ಜಂಟಿ ತಪಾಸಣೆ ನಡೆಸಿದರು.
ನಂತರ ಮಾತನಾಡಿದ ಅವರು ಆಗಸ್ಟ್ ಮಾಹೆಯಲ್ಲಿ ನಮಗೆ 5559 ಮೆಟ್ರಿಕ್ ಟನ್ ರಸಗೊಬ್ಬರ ಅವಶ್ಯಕತೆ ಇದ್ದು, 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದೆ. ಅದರಲ್ಲಿ 1716.68 ಮೆ.ಟನ್ ಯೂರಿಯಾ, 1834.7 ಮೆ.ಟನ್ ಡಿಎಪಿ, 756.5 ಮೆ.ಟನ್ ಎಂಒಪಿ, 5358.4 ಮೆ.ಟನ್ ಎನ್ಪಿಕೆಎಸ್(ಕಾಂಪ್ಲೆಕ್ಸ್), 498.9 ಮೆ.ಟನ್ ಎಸ್.ಎಸ್.ಪಿ ರಸಗೊಬ್ಬರ ದಾಸ್ತಾನು ಇದೆ ಎಂದು ಹೇಳಿದರು.
ರೈತರು ಆತಂಕ ಪಡುವ ಅಗತ್ಯವಿಲ್ಲ. ಕೃಷಿ ಚಟುವಟಿಕೆಗಳಿಗೆ ಅನುಗುಣವಾಗಿ ಬೇಡಿಕೆಗಿಂತ ಹೆಚ್ಚು ರಸಗೊಬ್ಬರ ಲಭ್ಯವಿದ್ದು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದರು. ಹಾಗೇಯೇ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ಯಾರಾದರೂ ಮಾರಟ ಮಾಡುವುದು ಕಂಡುಬಂದಲ್ಲಿ ನಮ್ಮ ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಹೊಸಕೋಟೆ ತಹಶೀಲ್ದಾರ್ ಸೋಮಶೇಖರ್, ಸಹಾಯಕ ಕೃಷಿ ನಿರ್ದೇಶಕರಾದ ಚಂದ್ರಪ್ಪ, ಕೃಷಿ ಅಧಿಕಾರಿ ರಾಮಾಂಜಿನಯ್ಯ, ಇತರೆ ಅಧಿಕಾರಿಗಳು ಇದ್ದರು.
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…