ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ ಉಂಟಾಗಿಲ್ಲ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಹೊಸಕೋಟೆ ಟೌನ್ ನಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಕೇಂದ್ರಕ್ಕೆ ಎಸ್ಪಿ ಸಿ.ಕೆ ಬಾಬಾ ಅವರೊಂದಿಗೆ ಭೇಟಿ ನೀಡಿ ಜಂಟಿ ತಪಾಸಣೆ ನಡೆಸಿದರು.

ನಂತರ ಮಾತನಾಡಿದ ಅವರು ಆಗಸ್ಟ್ ಮಾಹೆಯಲ್ಲಿ ನಮಗೆ 5559 ಮೆಟ್ರಿಕ್ ಟನ್ ರಸಗೊಬ್ಬರ ಅವಶ್ಯಕತೆ ಇದ್ದು, 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದೆ. ಅದರಲ್ಲಿ 1716.68 ಮೆ.ಟನ್ ಯೂರಿಯಾ, 1834.7 ಮೆ.ಟನ್ ಡಿಎಪಿ, 756.5 ಮೆ.ಟನ್ ಎಂಒಪಿ, 5358.4 ಮೆ.ಟನ್ ಎನ್ಪಿಕೆಎಸ್(ಕಾಂಪ್ಲೆಕ್ಸ್), 498.9 ಮೆ.ಟನ್ ಎಸ್.ಎಸ್.ಪಿ ರಸಗೊಬ್ಬರ ದಾಸ್ತಾನು ಇದೆ ಎಂದು ಹೇಳಿದರು.

ರೈತರು ಆತಂಕ ಪಡುವ ಅಗತ್ಯವಿಲ್ಲ. ಕೃಷಿ ಚಟುವಟಿಕೆಗಳಿಗೆ ಅನುಗುಣವಾಗಿ ಬೇಡಿಕೆಗಿಂತ ಹೆಚ್ಚು ರಸಗೊಬ್ಬರ ಲಭ್ಯವಿದ್ದು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದರು. ಹಾಗೇಯೇ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ಯಾರಾದರೂ ಮಾರಟ ಮಾಡುವುದು ಕಂಡುಬಂದಲ್ಲಿ ನಮ್ಮ ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಹೊಸಕೋಟೆ ತಹಶೀಲ್ದಾರ್ ಸೋಮಶೇಖರ್, ಸಹಾಯಕ ಕೃಷಿ ನಿರ್ದೇಶಕರಾದ ಚಂದ್ರಪ್ಪ, ಕೃಷಿ ಅಧಿಕಾರಿ ರಾಮಾಂಜಿನಯ್ಯ, ಇತರೆ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

14 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

1 day ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

1 day ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

2 days ago