ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ ಉಂಟಾಗಿಲ್ಲ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಹೊಸಕೋಟೆ ಟೌನ್ ನಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಕೇಂದ್ರಕ್ಕೆ ಎಸ್ಪಿ ಸಿ.ಕೆ ಬಾಬಾ ಅವರೊಂದಿಗೆ ಭೇಟಿ ನೀಡಿ ಜಂಟಿ ತಪಾಸಣೆ ನಡೆಸಿದರು.

ನಂತರ ಮಾತನಾಡಿದ ಅವರು ಆಗಸ್ಟ್ ಮಾಹೆಯಲ್ಲಿ ನಮಗೆ 5559 ಮೆಟ್ರಿಕ್ ಟನ್ ರಸಗೊಬ್ಬರ ಅವಶ್ಯಕತೆ ಇದ್ದು, 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದೆ. ಅದರಲ್ಲಿ 1716.68 ಮೆ.ಟನ್ ಯೂರಿಯಾ, 1834.7 ಮೆ.ಟನ್ ಡಿಎಪಿ, 756.5 ಮೆ.ಟನ್ ಎಂಒಪಿ, 5358.4 ಮೆ.ಟನ್ ಎನ್ಪಿಕೆಎಸ್(ಕಾಂಪ್ಲೆಕ್ಸ್), 498.9 ಮೆ.ಟನ್ ಎಸ್.ಎಸ್.ಪಿ ರಸಗೊಬ್ಬರ ದಾಸ್ತಾನು ಇದೆ ಎಂದು ಹೇಳಿದರು.

ರೈತರು ಆತಂಕ ಪಡುವ ಅಗತ್ಯವಿಲ್ಲ. ಕೃಷಿ ಚಟುವಟಿಕೆಗಳಿಗೆ ಅನುಗುಣವಾಗಿ ಬೇಡಿಕೆಗಿಂತ ಹೆಚ್ಚು ರಸಗೊಬ್ಬರ ಲಭ್ಯವಿದ್ದು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದರು. ಹಾಗೇಯೇ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ಯಾರಾದರೂ ಮಾರಟ ಮಾಡುವುದು ಕಂಡುಬಂದಲ್ಲಿ ನಮ್ಮ ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಹೊಸಕೋಟೆ ತಹಶೀಲ್ದಾರ್ ಸೋಮಶೇಖರ್, ಸಹಾಯಕ ಕೃಷಿ ನಿರ್ದೇಶಕರಾದ ಚಂದ್ರಪ್ಪ, ಕೃಷಿ ಅಧಿಕಾರಿ ರಾಮಾಂಜಿನಯ್ಯ, ಇತರೆ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

3 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

9 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

24 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago