ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಜೊತೆಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಹಾಲು ಉತ್ಪಾದಕರು ಹಾಲಿನ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಮೂಲಕ ಹಾಲು ಉತ್ಪಾದನೆಯಲ್ಲಿ ಜಿಲ್ಲೆಯ ಹೆಸರು ಮುಂಚೂಣಿಯಲ್ಲಿ ಇರಬೇಕು ಎಂದು
ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.
ದೇವನಹಳ್ಳಿ ಟೌನ್ ನಲ್ಲಿ ಬೆಂಗಳೂರು ಹಾಲು ಒಕ್ಕೂಟದ ದೇವನಹಳ್ಳಿ ಶಿಬಿರ ಕಚೇರಿಯ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಾಲು ಉತ್ಪಾದನೆಯಲ್ಲಿ ಜಿಲ್ಲೆಯು ಮುಂಚೂಣಿಯಲ್ಲಿದೆ. ಇದನ್ನು ಹಾಗೇ ಕಾಪಾಡಿಕೊಂಡು ಹೋಗಬೇಕು. ಹೈನುಗಾರಿಕೆ ಪ್ರೋತ್ಸಾಹಿಸಲು ವಿವಿಧ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದ್ದು. ರೈತರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.
ಜಿಲ್ಲೆಯಲ್ಲಿ ರೇಷ್ಮೆ ಬೆಳೆ ಬೆಳೆಯುತ್ತಿರುವವರ ಸಂಖ್ಯೆ ಕಡಿಮೆ ಇದೆ. ರೇಷ್ಮೆ ಬೆಳೆ ಬೆಳೆಯಲು ಸರ್ಕಾರ ಎಲ್ಲಾ ಸವಲತ್ತನ್ನು ರೈತರಿಗೆ ನೀಡುವುದರ ಜೊತೆಗೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಜಿಲ್ಲೆಯ ಅಭಿವೃದ್ಧಿಗೂ ಗಮನಹರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗಿ ಬರುವ ಸಾಧ್ಯತೆ ಇದೆ ಹಾಗಾಗಿ ಮುನ್ನೆಚ್ಚರಿಕೆ ಕ್ರಮವನ್ನು ವಹಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಹಾಲು ಒಕ್ಕೂಟ ನಿರ್ದೇಶಕ ಸ್ಥಾನಕ್ಕೆ ದೇವನಹಳ್ಳಿ ತಾಲ್ಲೂಕಿನಿಂದ ನೂತನವಾಗಿ ಆಯ್ಕೆಯಾದ ಎಸ್.ಪಿ.ಮುನಿರಾಜು ಅವರು ಮಾತನಾಡಿ ಹಾಲು ಉತ್ಪಾದಕರಿಗೆ ಸರ್ಕಾರದಿಂದ ಬರುವ ಎಲ್ಲಾ ಸೌಲಭ್ಯವನ್ನು ಪ್ರಾಮಾಣಿಕವಾಗಿ ದೊರಕಿಸಿಕೊಡುವ ಭರವಸೆ ನೀಡುತ್ತೇನೆ. ಹಾಲು ಉತ್ಪಾದಕರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇನೆ, ಹಾಲು ಉತ್ಪಾದನೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಹಾಲು ಒಕ್ಕೂಟ ಹಾಲಿ ಉಪಧ್ಯಾಕ್ಷರಾದ ಮಂಜಣ್ಣ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರಾಜಣ್ಣ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಶಾಂತಕುಮಾರ್, ನಿರ್ದೇಶಕರಾದ ಪ್ರಸನ್ನ ಕುಮಾರ್, ಸದಸ್ಯರಾದ ಮಂಜಣ್ಣ, ದೇವನಹಳ್ಳಿ ತಾಲೂಕು ಮುನಿಸಿಪಾಲ್ ಅಧ್ಯಕ್ಷರಾದ ಮುನಿಕೃಷ್ಣಪ್ಪ, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…