ಜಿಲ್ಲೆಯಲ್ಲಿ 164 ಮಂದಿ ಜೀತ ಮುಕ್ತ- ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸಿ- ಡಾ.ಕೆ.ಎನ್ ಅನುರಾಧ

ಸಮಾಜದಲ್ಲಿ ಸಾಮಾಜಿಕ ಪಿಡುಗಾಗಿರುವ ಜೀತಪದ್ಧತಿಯ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಹೇಳಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ “ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ:ಒಂದು ದಿನದ ಕಾರ್ಯಾಗಾರ”ವನ್ನು ಜೀತ ಪದ್ಧತಿ ನಿರ್ಮೂಲನೆ ಪ್ರತಿಜ್ಞಾ ವಿಧಿ ಬೋಧಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಹಿಂದಿನ ಕಾಲದಲ್ಲಿ ಜೀತ ಪದ್ಧತಿಯು ಆಳವಾಗಿ ಬೇರೂರಿತ್ತು. ಸ್ವಾತಂತ್ರ್ಯಾನಂತರ ಈ ಪದ್ಧತಿ ಗಣನೀಯವಾಗಿ ಕಡಿಮೆಯಾಗಿದ್ದರೂ ಸಹ ಸಾಮಾಜಿಕ-ಆರ್ಥಿಕ ಅಸಮಾನತೆಗಳಿಂದಾಗಿ ಇಂದಿಗೂ ಜೀತ ಪದ್ಧತಿ ವ್ಯವಸ್ಥೆ ಜೀವಂತವಾಗಿದೆ.

ಸಮಾಜದಲ್ಲಿ ಪ್ರತಿಯೊಬ್ಬ ಪ್ರಜೆಗೂ ಸಾಮಾನ ಹಕ್ಕುಗಳನ್ನು ನೀಡಲಾಗಿದೆ. ಬಲವಂತವಾಗಿ ಯಾರ ಸ್ವತಂತ್ರವನ್ನು ಕಿತ್ತು ಕೊಳ್ಳಬಾರದು. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತ ಸಂವಿಧಾನದ ಮೂಲ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವು ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದೆ ಎಂದರು.

ಶಿಕ್ಷಣದಿಂದ ಮಾತ್ರ ಜೀತ ಪದ್ಧತಿ ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯ. ಜೀತ ಪದ್ಧತಿಯ ನಿರ್ಮೂಲನೆಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಹಾಗೂ ಜೀತ ಪದ್ದತಿಗೆ ಒತ್ತಾಯಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಜಿಲ್ಲೆಯಲ್ಲಿ ಎಲ್ಲಾದರೂ ಜೀತ ಪದ್ಧತಿ ವ್ಯವಸ್ಥೆ ಕಂಡುಬಂದಲ್ಲಿ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಹೇಳಿದರು.

ಜಿಲ್ಲೆಯಲ್ಲಿ 164 ಜೀತದಾಳುಗಳನ್ನು ವಿಮುಕ್ತಿಗೊಳಿಸಲಾಗಿದ್ದು, ಅವರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ 157 ಜೀತ ವಿಮುಕ್ತರಿಗೆ ತಲಾ 20.000 ರೂ.ಗಳಂತೆ 31.40 ಲಕ್ಷ ರೂ.ಗಳು ನೀಡಲಾಗಿದೆ. ಇಬ್ಬರಿಗೆ ನಿವೇಶನ ನೀಡಲಾಗಿದ್ದು, 43 ಜನರಿಗೆ ಮನೆ ಒದಗಿಸಲಾಗಿದೆ. 53 ಜನರಿಗೆ ಜಾಬ್ ಕಾರ್ಡ್, 156 ಜನರಿಗೆ ಆಧಾರ್ ಹಾಗೂ ಮತದಾನ ಗುರುತಿನ ಚೀಟಿ, 112 ಜನರಿಗೆ ಬ್ಯಾಂಕ್ ಗಳಿಂದ ಸಾಲ ಧನಸಹಾಯ, 04 ಜನರಿಗೆ 79200 ರೂಗಳ ಮಾಸಾಶನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜೀವಿಕ ಸಂಘಟನೆಯ ಡಾ.ನಾರಾಯಣಸ್ವಾಮಿ ರವರು ಮಾತನಾಡಿ ಜೀತ ಕಾರ್ಮಿಕ ಪದ್ಧತಿ (ರದ್ದತಿ) ಕಾಯ್ದೆ 1976 ಜೀತ ಪದ್ಧತಿ ವ್ಯಾಖ್ಯಾನ, ಜೀತ ಕಾರ್ಮಿಕ ಪದ್ದತಿಗೆ ಒತ್ತಾಯಿಸುವವರ ವಿರುದ್ಧ ಕಾಯ್ದೆಯಡಿ ನಿಗದಿಗೊಳಿಸಿರುವ ಕಾನೂನು ಶಿಕ್ಷೆ, ಜೀತ ವಿಮುಕ್ತರ ಪುನರ್ವಸತಿ ಯೋಜನೆ (RBL Scheme), ಜೀತ ಕಾರ್ಮಿಕರ ಗುರುತಿಸುವಿಕೆ, ರಕ್ಷಣೆ ಹಾಗೂ ಪುನರ್ವಸತಿ ಕುರಿತಂತೆ ಕೇಂದ್ರ ಸರ್ಕಾರವು ಹೊರಡಿಸಿರುವ ಮಾದರಿ ಕಾರ್ಯವಿಧಾನಗಳ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಡಿವೈಎಸ್ಪಿ ರವಿ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಮಂಜುನಾಥ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ, ಗ್ರಾಮ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

10 minutes ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

1 hour ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

3 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

9 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

11 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

11 hours ago