ಜಿಲ್ಲೆಯಲ್ಲಿ 164 ಮಂದಿ ಜೀತ ಮುಕ್ತ- ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸಿ- ಡಾ.ಕೆ.ಎನ್ ಅನುರಾಧ

ಸಮಾಜದಲ್ಲಿ ಸಾಮಾಜಿಕ ಪಿಡುಗಾಗಿರುವ ಜೀತಪದ್ಧತಿಯ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಹೇಳಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ “ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ:ಒಂದು ದಿನದ ಕಾರ್ಯಾಗಾರ”ವನ್ನು ಜೀತ ಪದ್ಧತಿ ನಿರ್ಮೂಲನೆ ಪ್ರತಿಜ್ಞಾ ವಿಧಿ ಬೋಧಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಹಿಂದಿನ ಕಾಲದಲ್ಲಿ ಜೀತ ಪದ್ಧತಿಯು ಆಳವಾಗಿ ಬೇರೂರಿತ್ತು. ಸ್ವಾತಂತ್ರ್ಯಾನಂತರ ಈ ಪದ್ಧತಿ ಗಣನೀಯವಾಗಿ ಕಡಿಮೆಯಾಗಿದ್ದರೂ ಸಹ ಸಾಮಾಜಿಕ-ಆರ್ಥಿಕ ಅಸಮಾನತೆಗಳಿಂದಾಗಿ ಇಂದಿಗೂ ಜೀತ ಪದ್ಧತಿ ವ್ಯವಸ್ಥೆ ಜೀವಂತವಾಗಿದೆ.

ಸಮಾಜದಲ್ಲಿ ಪ್ರತಿಯೊಬ್ಬ ಪ್ರಜೆಗೂ ಸಾಮಾನ ಹಕ್ಕುಗಳನ್ನು ನೀಡಲಾಗಿದೆ. ಬಲವಂತವಾಗಿ ಯಾರ ಸ್ವತಂತ್ರವನ್ನು ಕಿತ್ತು ಕೊಳ್ಳಬಾರದು. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತ ಸಂವಿಧಾನದ ಮೂಲ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವು ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದೆ ಎಂದರು.

ಶಿಕ್ಷಣದಿಂದ ಮಾತ್ರ ಜೀತ ಪದ್ಧತಿ ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯ. ಜೀತ ಪದ್ಧತಿಯ ನಿರ್ಮೂಲನೆಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಹಾಗೂ ಜೀತ ಪದ್ದತಿಗೆ ಒತ್ತಾಯಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಜಿಲ್ಲೆಯಲ್ಲಿ ಎಲ್ಲಾದರೂ ಜೀತ ಪದ್ಧತಿ ವ್ಯವಸ್ಥೆ ಕಂಡುಬಂದಲ್ಲಿ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಹೇಳಿದರು.

ಜಿಲ್ಲೆಯಲ್ಲಿ 164 ಜೀತದಾಳುಗಳನ್ನು ವಿಮುಕ್ತಿಗೊಳಿಸಲಾಗಿದ್ದು, ಅವರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ 157 ಜೀತ ವಿಮುಕ್ತರಿಗೆ ತಲಾ 20.000 ರೂ.ಗಳಂತೆ 31.40 ಲಕ್ಷ ರೂ.ಗಳು ನೀಡಲಾಗಿದೆ. ಇಬ್ಬರಿಗೆ ನಿವೇಶನ ನೀಡಲಾಗಿದ್ದು, 43 ಜನರಿಗೆ ಮನೆ ಒದಗಿಸಲಾಗಿದೆ. 53 ಜನರಿಗೆ ಜಾಬ್ ಕಾರ್ಡ್, 156 ಜನರಿಗೆ ಆಧಾರ್ ಹಾಗೂ ಮತದಾನ ಗುರುತಿನ ಚೀಟಿ, 112 ಜನರಿಗೆ ಬ್ಯಾಂಕ್ ಗಳಿಂದ ಸಾಲ ಧನಸಹಾಯ, 04 ಜನರಿಗೆ 79200 ರೂಗಳ ಮಾಸಾಶನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜೀವಿಕ ಸಂಘಟನೆಯ ಡಾ.ನಾರಾಯಣಸ್ವಾಮಿ ರವರು ಮಾತನಾಡಿ ಜೀತ ಕಾರ್ಮಿಕ ಪದ್ಧತಿ (ರದ್ದತಿ) ಕಾಯ್ದೆ 1976 ಜೀತ ಪದ್ಧತಿ ವ್ಯಾಖ್ಯಾನ, ಜೀತ ಕಾರ್ಮಿಕ ಪದ್ದತಿಗೆ ಒತ್ತಾಯಿಸುವವರ ವಿರುದ್ಧ ಕಾಯ್ದೆಯಡಿ ನಿಗದಿಗೊಳಿಸಿರುವ ಕಾನೂನು ಶಿಕ್ಷೆ, ಜೀತ ವಿಮುಕ್ತರ ಪುನರ್ವಸತಿ ಯೋಜನೆ (RBL Scheme), ಜೀತ ಕಾರ್ಮಿಕರ ಗುರುತಿಸುವಿಕೆ, ರಕ್ಷಣೆ ಹಾಗೂ ಪುನರ್ವಸತಿ ಕುರಿತಂತೆ ಕೇಂದ್ರ ಸರ್ಕಾರವು ಹೊರಡಿಸಿರುವ ಮಾದರಿ ಕಾರ್ಯವಿಧಾನಗಳ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಡಿವೈಎಸ್ಪಿ ರವಿ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಮಂಜುನಾಥ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ, ಗ್ರಾಮ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

6 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

19 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

19 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

22 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

22 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago