ಸಮಾಜದಲ್ಲಿ ಸಾಮಾಜಿಕ ಪಿಡುಗಾಗಿರುವ ಜೀತಪದ್ಧತಿಯ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಹೇಳಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ “ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ:ಒಂದು ದಿನದ ಕಾರ್ಯಾಗಾರ”ವನ್ನು ಜೀತ ಪದ್ಧತಿ ನಿರ್ಮೂಲನೆ ಪ್ರತಿಜ್ಞಾ ವಿಧಿ ಬೋಧಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಹಿಂದಿನ ಕಾಲದಲ್ಲಿ ಜೀತ ಪದ್ಧತಿಯು ಆಳವಾಗಿ ಬೇರೂರಿತ್ತು. ಸ್ವಾತಂತ್ರ್ಯಾನಂತರ ಈ ಪದ್ಧತಿ ಗಣನೀಯವಾಗಿ ಕಡಿಮೆಯಾಗಿದ್ದರೂ ಸಹ ಸಾಮಾಜಿಕ-ಆರ್ಥಿಕ ಅಸಮಾನತೆಗಳಿಂದಾಗಿ ಇಂದಿಗೂ ಜೀತ ಪದ್ಧತಿ ವ್ಯವಸ್ಥೆ ಜೀವಂತವಾಗಿದೆ.
ಶಿಕ್ಷಣದಿಂದ ಮಾತ್ರ ಜೀತ ಪದ್ಧತಿ ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯ. ಜೀತ ಪದ್ಧತಿಯ ನಿರ್ಮೂಲನೆಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಹಾಗೂ ಜೀತ ಪದ್ದತಿಗೆ ಒತ್ತಾಯಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಜಿಲ್ಲೆಯಲ್ಲಿ ಎಲ್ಲಾದರೂ ಜೀತ ಪದ್ಧತಿ ವ್ಯವಸ್ಥೆ ಕಂಡುಬಂದಲ್ಲಿ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಹೇಳಿದರು.
ಜಿಲ್ಲೆಯಲ್ಲಿ 164 ಜೀತದಾಳುಗಳನ್ನು ವಿಮುಕ್ತಿಗೊಳಿಸಲಾಗಿದ್ದು, ಅವರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ 157 ಜೀತ ವಿಮುಕ್ತರಿಗೆ ತಲಾ 20.000 ರೂ.ಗಳಂತೆ 31.40 ಲಕ್ಷ ರೂ.ಗಳು ನೀಡಲಾಗಿದೆ. ಇಬ್ಬರಿಗೆ ನಿವೇಶನ ನೀಡಲಾಗಿದ್ದು, 43 ಜನರಿಗೆ ಮನೆ ಒದಗಿಸಲಾಗಿದೆ. 53 ಜನರಿಗೆ ಜಾಬ್ ಕಾರ್ಡ್, 156 ಜನರಿಗೆ ಆಧಾರ್ ಹಾಗೂ ಮತದಾನ ಗುರುತಿನ ಚೀಟಿ, 112 ಜನರಿಗೆ ಬ್ಯಾಂಕ್ ಗಳಿಂದ ಸಾಲ ಧನಸಹಾಯ, 04 ಜನರಿಗೆ 79200 ರೂಗಳ ಮಾಸಾಶನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜೀವಿಕ ಸಂಘಟನೆಯ ಡಾ.ನಾರಾಯಣಸ್ವಾಮಿ ರವರು ಮಾತನಾಡಿ ಜೀತ ಕಾರ್ಮಿಕ ಪದ್ಧತಿ (ರದ್ದತಿ) ಕಾಯ್ದೆ 1976 ಜೀತ ಪದ್ಧತಿ ವ್ಯಾಖ್ಯಾನ, ಜೀತ ಕಾರ್ಮಿಕ ಪದ್ದತಿಗೆ ಒತ್ತಾಯಿಸುವವರ ವಿರುದ್ಧ ಕಾಯ್ದೆಯಡಿ ನಿಗದಿಗೊಳಿಸಿರುವ ಕಾನೂನು ಶಿಕ್ಷೆ, ಜೀತ ವಿಮುಕ್ತರ ಪುನರ್ವಸತಿ ಯೋಜನೆ (RBL Scheme), ಜೀತ ಕಾರ್ಮಿಕರ ಗುರುತಿಸುವಿಕೆ, ರಕ್ಷಣೆ ಹಾಗೂ ಪುನರ್ವಸತಿ ಕುರಿತಂತೆ ಕೇಂದ್ರ ಸರ್ಕಾರವು ಹೊರಡಿಸಿರುವ ಮಾದರಿ ಕಾರ್ಯವಿಧಾನಗಳ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಡಿವೈಎಸ್ಪಿ ರವಿ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಮಂಜುನಾಥ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ, ಗ್ರಾಮ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…