ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನವನ್ನು ನವೆಂಬರ್ 03 ರಿಂದ 11 ವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಅಭಿಯಾನ ಯಶಸ್ವಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ 2025-26 ನೇ ಸಾಲಿನ ಕುಷ್ಠ ರೋಗ ಪತ್ತೆ ಹಚ್ಚುವ ಅಭಿಯಾನದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು,
ಸಭೆಯಲ್ಲಿ ಅವರು ಮಾತನಾಡಿ, ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಹೇಳಿದರು.
ಆರೋಗ್ಯ ಇಲಾಖೆ ಜೊತೆಗೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಾ ಸಂಸ್ಥೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಿ. ಎಲ್ಲಾ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆಯಿಂದ ಕುಷ್ಠರೋಗ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.
*ಜಿಲ್ಲೆಯಲ್ಲಿ 20 ಸಕ್ರಿಯ ಪ್ರಕರಣಗಳು*
ಕುಷ್ಠರೋಗ ಹೊಂದಿರುವ ಮತ್ತು ಕುಷ್ಠರೋಗದಿಂದ ಅಂಗವಿಕಲತೆಗೆ ಬಾಧಿತರಾದವರು ಸೇರಿದಂತೆ ಒಟ್ಟು 20 ಸಕ್ರಿಯ ಪ್ರಕರಣಗಳು ದಾಖಲಾಗಿವೆ.
ಕುಷ್ಠರೋಗವು ಮೈಕೊಬ್ಯಾಕ್ಟಿರಿಯಂ ಲೆಪ್ರೆ ಎಂಬ ರೋಗಾಣುವಿನಿಂದ ಉಂಟಾಗುವ ಸಾಂಕ್ರಾಮಿಕ ರೋಗವಾಗಿದ್ದು, ಇದು ಮುಂದೆ ನರಗಳ ಹಾಗೂ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಆರಂಭದಲ್ಲಿ ಚರ್ಮದ ಮೇಲೆ ಮಚ್ಚೆಗಳು ಉಲ್ಬಣವಾಗುವುದು, ಚರ್ಮದ ಬಣ್ಣ ತಿಳಿ ಬಿಳಿ ಅಥವಾ ತಾಮ್ರ ಬಣ್ಣಕ್ಕೆ ತಿರುಗುವುದು ಇತ್ಯಾದಿ.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣಾರೆಡ್ಡಿ, ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ.ನಾಗರಾಜು ಎಂ.ಜಿ, ಜಿಲ್ಲಾ ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಡಾ. ಶಾಲಿನಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಗೋವಿಂದ್ ರಾಜು, ನಾಲ್ಕು ತಾಲ್ಲೂಕಿನ ಹಿರಿಯ ನಿರೀಕ್ಷಣ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…