ಜಿಲ್ಲೆಯಲ್ಲಿ 202 ಕುಷ್ಠರೋಗ ಪ್ರಕರಣ ಸಕ್ರಿಯ:ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ- ಡಾ.ಪ್ರದೀಪ್ತಾ ಕುಮಾರ್ ನಾಯಕ್ ಸಲಹೆ

ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಡಾ.ಪ್ರದೀಪ್ತಾ ಕುಮಾರ ನಾಯಕ್ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಷ್ಠರೋಗ ಪ್ರಕರಣಗಳ ಸಮೀಕ್ಷೆ ಹಾಗೂ ಸರ್ಕಾರದ ಸೌಲಭ್ಯಗಳ ಬಗೆಗಿನ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ರೋಗದ ಆರಂಭಿಕ ಲಕ್ಷಣಗಳ ಪತ್ತೆಯಿಂದ ಕುಷ್ಠರೋಗವನ್ನು ನಿಯಂತ್ರಿಸಬಹುದು. ರೋಗದ ಲಕ್ಷಣಗಳು ಕಂಡುಬಂದ ತಕ್ಷಣವೇ ಅದನ್ನು ಪತ್ತೆ ಹಚ್ಚಿ, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ, ಪ್ರಾಥಮಿಕ ಹಂತದಲ್ಲಿಯೇ ವೈದ್ಯಕೀಯ ಸೇವೆಗಳನ್ನು ನೀಡುವುದರಿಂದ ಹರಡುವಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ.

ಆರೋಗ್ಯ ಇಲಾಖೆ ಜೊತೆಗೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಾ ಸಂಸ್ಥೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಿ. ಎಲ್ಲಾ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆ ಇಂದ ಕುಷ್ಠರೋಗ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.

*ಜಿಲ್ಲೆಯಲ್ಲಿ 202 ಸಕ್ರಿಯ ಪ್ರಕರಣಗಳು*

ಕುಷ್ಠರೋಗ ಹೊಂದಿರುವ ಮತ್ತು ಕುಷ್ಠರೋಗದಿಂದ ಅಂಗವಿಕಲತೆಗೆ ಬಾಧಿತರಾದ ಐವರು ಮಕ್ಕಳು ಸೇರಿದಂತೆ ಒಟ್ಟು 202 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಈ ರೋಗದಿಂದ ಬಳಲುವವರಿಗೆ ಇಲಾಖೆಯಿಂದ ದೃಢೀಕರಣ ಪತ್ರಗಳನ್ನು ನೀಡಿ ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಗಳನ್ನು ಅವರಿಗೆ ಪೂರೈಸುವಂತೆ ಮಾಡಬೇಕು.

ಸಂಬಂಧಪಟ್ಟ ಇಲಾಖೆಗಳು ಸರ್ಕಾರದಿಂದ ಸಿಗುವ ಆರೋಗ್ಯ ಸೇವೆ, ಪಿಂಚಣಿ ಸೌಲಭ್ಯ, ಮನೆ ಸೌಲಭ್ಯ, ರೇಷನ್, ಶಿಕ್ಷಣ ಹಾಗೂ ಇತರೆ ಸವಲತ್ತುಗಳು ಎಲ್ಲಾ ಸಂತ್ರಸ್ತರಿಗೆ ಸಿಗಬೇಕು. ಸಮಾಜದ ಮುನ್ನೆಲೆಗೆ ಅವರನ್ನು ತಂದು ಸಾಮಾನತೆಯಿಂದ ಕಾಣುವುದು ಮಾನವವೀಯತೆ ಗುಣ. ಆ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಿ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನ ಅಧಿಕಾರಿ ಡಾ. ಉಮಾ ಎಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ನಾಗರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

1 hour ago

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…

1 hour ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ವೈದ್ಯ, ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

21 hours ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರು ಸೇರಿದಂತೆ ಇತರೆ ಸಾಧಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

22 hours ago

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ₹400 ಕೋಟಿ ದರೋಡೆ ಪ್ರಕರಣ: ದಟ್ಟಾರಣ್ಯದ ಮೌನದಲ್ಲಿ ಅಡಗಿದ್ದ ಭೀಕರ ರಹಸ್ಯ..ಬೆಚ್ಚಿಬೀಳಿಸುವ ಪ್ರಮುಖ ಅಂಶಗಳು…ಇಲ್ಲಿವೆ ಓದಿ…

ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…

1 day ago

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಕರ್ನಾಟಕದ 8 ಮಂದಿಯು ಈ ನಾಗರಿಕ ಗೌರವಕ್ಕೆ ಭಾಜನ

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…

2 days ago