ಜಿಲ್ಲೆಯಲ್ಲಿ 202 ಕುಷ್ಠರೋಗ ಪ್ರಕರಣ ಸಕ್ರಿಯ:ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ- ಡಾ.ಪ್ರದೀಪ್ತಾ ಕುಮಾರ್ ನಾಯಕ್ ಸಲಹೆ

ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಡಾ.ಪ್ರದೀಪ್ತಾ ಕುಮಾರ ನಾಯಕ್ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಷ್ಠರೋಗ ಪ್ರಕರಣಗಳ ಸಮೀಕ್ಷೆ ಹಾಗೂ ಸರ್ಕಾರದ ಸೌಲಭ್ಯಗಳ ಬಗೆಗಿನ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ರೋಗದ ಆರಂಭಿಕ ಲಕ್ಷಣಗಳ ಪತ್ತೆಯಿಂದ ಕುಷ್ಠರೋಗವನ್ನು ನಿಯಂತ್ರಿಸಬಹುದು. ರೋಗದ ಲಕ್ಷಣಗಳು ಕಂಡುಬಂದ ತಕ್ಷಣವೇ ಅದನ್ನು ಪತ್ತೆ ಹಚ್ಚಿ, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ, ಪ್ರಾಥಮಿಕ ಹಂತದಲ್ಲಿಯೇ ವೈದ್ಯಕೀಯ ಸೇವೆಗಳನ್ನು ನೀಡುವುದರಿಂದ ಹರಡುವಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ.

ಆರೋಗ್ಯ ಇಲಾಖೆ ಜೊತೆಗೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಾ ಸಂಸ್ಥೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಿ. ಎಲ್ಲಾ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆ ಇಂದ ಕುಷ್ಠರೋಗ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.

*ಜಿಲ್ಲೆಯಲ್ಲಿ 202 ಸಕ್ರಿಯ ಪ್ರಕರಣಗಳು*

ಕುಷ್ಠರೋಗ ಹೊಂದಿರುವ ಮತ್ತು ಕುಷ್ಠರೋಗದಿಂದ ಅಂಗವಿಕಲತೆಗೆ ಬಾಧಿತರಾದ ಐವರು ಮಕ್ಕಳು ಸೇರಿದಂತೆ ಒಟ್ಟು 202 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಈ ರೋಗದಿಂದ ಬಳಲುವವರಿಗೆ ಇಲಾಖೆಯಿಂದ ದೃಢೀಕರಣ ಪತ್ರಗಳನ್ನು ನೀಡಿ ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಗಳನ್ನು ಅವರಿಗೆ ಪೂರೈಸುವಂತೆ ಮಾಡಬೇಕು.

ಸಂಬಂಧಪಟ್ಟ ಇಲಾಖೆಗಳು ಸರ್ಕಾರದಿಂದ ಸಿಗುವ ಆರೋಗ್ಯ ಸೇವೆ, ಪಿಂಚಣಿ ಸೌಲಭ್ಯ, ಮನೆ ಸೌಲಭ್ಯ, ರೇಷನ್, ಶಿಕ್ಷಣ ಹಾಗೂ ಇತರೆ ಸವಲತ್ತುಗಳು ಎಲ್ಲಾ ಸಂತ್ರಸ್ತರಿಗೆ ಸಿಗಬೇಕು. ಸಮಾಜದ ಮುನ್ನೆಲೆಗೆ ಅವರನ್ನು ತಂದು ಸಾಮಾನತೆಯಿಂದ ಕಾಣುವುದು ಮಾನವವೀಯತೆ ಗುಣ. ಆ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಿ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನ ಅಧಿಕಾರಿ ಡಾ. ಉಮಾ ಎಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ನಾಗರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

7 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

17 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

1 day ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

2 days ago