ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಡಾ.ಪ್ರದೀಪ್ತಾ ಕುಮಾರ ನಾಯಕ್ ಅವರು ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಷ್ಠರೋಗ ಪ್ರಕರಣಗಳ ಸಮೀಕ್ಷೆ ಹಾಗೂ ಸರ್ಕಾರದ ಸೌಲಭ್ಯಗಳ ಬಗೆಗಿನ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ರೋಗದ ಆರಂಭಿಕ ಲಕ್ಷಣಗಳ ಪತ್ತೆಯಿಂದ ಕುಷ್ಠರೋಗವನ್ನು ನಿಯಂತ್ರಿಸಬಹುದು. ರೋಗದ ಲಕ್ಷಣಗಳು ಕಂಡುಬಂದ ತಕ್ಷಣವೇ ಅದನ್ನು ಪತ್ತೆ ಹಚ್ಚಿ, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ, ಪ್ರಾಥಮಿಕ ಹಂತದಲ್ಲಿಯೇ ವೈದ್ಯಕೀಯ ಸೇವೆಗಳನ್ನು ನೀಡುವುದರಿಂದ ಹರಡುವಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ.
ಆರೋಗ್ಯ ಇಲಾಖೆ ಜೊತೆಗೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಾ ಸಂಸ್ಥೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಿ. ಎಲ್ಲಾ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆ ಇಂದ ಕುಷ್ಠರೋಗ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.
*ಜಿಲ್ಲೆಯಲ್ಲಿ 202 ಸಕ್ರಿಯ ಪ್ರಕರಣಗಳು*
ಕುಷ್ಠರೋಗ ಹೊಂದಿರುವ ಮತ್ತು ಕುಷ್ಠರೋಗದಿಂದ ಅಂಗವಿಕಲತೆಗೆ ಬಾಧಿತರಾದ ಐವರು ಮಕ್ಕಳು ಸೇರಿದಂತೆ ಒಟ್ಟು 202 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಈ ರೋಗದಿಂದ ಬಳಲುವವರಿಗೆ ಇಲಾಖೆಯಿಂದ ದೃಢೀಕರಣ ಪತ್ರಗಳನ್ನು ನೀಡಿ ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಗಳನ್ನು ಅವರಿಗೆ ಪೂರೈಸುವಂತೆ ಮಾಡಬೇಕು.
ಸಂಬಂಧಪಟ್ಟ ಇಲಾಖೆಗಳು ಸರ್ಕಾರದಿಂದ ಸಿಗುವ ಆರೋಗ್ಯ ಸೇವೆ, ಪಿಂಚಣಿ ಸೌಲಭ್ಯ, ಮನೆ ಸೌಲಭ್ಯ, ರೇಷನ್, ಶಿಕ್ಷಣ ಹಾಗೂ ಇತರೆ ಸವಲತ್ತುಗಳು ಎಲ್ಲಾ ಸಂತ್ರಸ್ತರಿಗೆ ಸಿಗಬೇಕು. ಸಮಾಜದ ಮುನ್ನೆಲೆಗೆ ಅವರನ್ನು ತಂದು ಸಾಮಾನತೆಯಿಂದ ಕಾಣುವುದು ಮಾನವವೀಯತೆ ಗುಣ. ಆ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಿ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನ ಅಧಿಕಾರಿ ಡಾ. ಉಮಾ ಎಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ನಾಗರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…
ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…